ಪತ್ನಿ ತೊರೆದು ಹೋದಳೆಂದು ಸಿಟ್ಟಿಗೆದ್ದ ಅಳಿಯನೊರ್ವ ಅತ್ತೆಯ ಮೂಗು ಕತ್ತರಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ. ರಾಜು ಬಘೇಲ್ ಎಂಬಾತನೇ ಹೀಗೆ ಅತ್ತೆಯ ಮೂಗು ಕತ್ತರಿಸಿದ ದುರುಳ ಅಳಿಯ. ಈ ರಾಜು ಬಘೇಲ್ ಸದಾ ತನ್ನ ಹೆಂಡತಿ ಶ್ಯಾಮ್ ಸುಂದರಿಯನ್ನು ಥಳಿಸುತ್ತಿದ್ದ. ಗಂಡನ ಕಿರುಕುಳದಿಂದ ಬೇಸತ್ತ ಆಕೆ ಪೊಲೀಸರಿಗೆ ದೂರು ನೀಡಿದ್ದಳು. ಅಲ್ಲದೇ ತವರು ಮನೆ ಸೇರಿಕೊಂಡಿದ್ದಳು. ಇದರಿಂದ ಸಿಟ್ಟಿಗೆದ್ದ ರಾಜು ಬಘೇಲ್ ಈ ಕೃತ್ಯವೆಸಗಿದ್ದಾನೆ. ಕಳೆದ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೊರೇನಾ ಜಿಲ್ಲೆಯ ಚಂದಾಪುರ ಗ್ರಾಮದ ನಿವಾಸಿಯಾದ 55 ವರ್ಷದ ರಾಮ್ ವಿಲಾಸಿ ತನ್ನ ಮಗಳನ್ನು ನೋಡುವ ಸಲುವಾಗಿ ತನ್ನ ಗಂಡ ರಾಮಹಿತ್ ಬಘೇಲ್ ಹಾಗೂ ಪುತ್ರನೊಂದಿಗೆ ಮಗಳ ಮನೆಗೆ ತೆರಳಿದ್ದಾರೆ. ಮಗಳನ್ನು ಕರೆದುಕೊಂಡು ವಾಪಸ್ ಬರುತ್ತಿದ್ದ ವೇಳೆ ರಾಮ್ ವಿಲಾಸಿಯ ಅಳಿಯ ರಾಜು ಬಘೇಲ್ ಹಾಗೂ ಆತನ ಇಬ್ಬರು ಸಂಬಂಧಿಗಳು ಇವರನ್ನು ರಸ್ತೆ ಮಧ್ಯೆ ಅಡ್ಡ ಹಾಕಿದ್ದು, ಜಗಳ ಮಾಡಲು ಶುರು ಮಾಡಿದ್ದಾರೆ. ಇದಕ್ಕೆ ಅತ್ತೆ ರಾಮ್ ವಿಲಾಸಿ ವಿರೋಧ ವ್ಯಕ್ತಪಡಿಸಿದಾಗ ಅಳಿಯ ರಾಜು ಬಘೇಲ್ ಆಕೆಯ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ. ಅಲ್ಲದೇ ಮಾವ ರಾಮ್ಹಿತ್ ಬಘೇಲ್ ಅವರನ್ನು ಥಳಿಸಿದ್ದಾನೆ.
ಈ ಬಗ್ಗೆ ಸ್ಥಳೀಯರು 100 ಗೆ ಕರೆ ಮಾಡಿ ಪೊಲೀಸರಿಗೆ ವಿಚಾರ ತಿಳಿಸಿದ್ದು, ನಂತರ ಪೊಲೀಸರು ಸ್ಥಳಕ್ಕೆ ತೆರಳಿ ಗಾಯಾಳುವನ್ನು ಕರೆದುಕೊಂಡು ಬಂದು ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲದೇ ಹೀಗೆ ಅತ್ತೆಯನ್ನು ಕಚ್ಚಿ ಗಾಯಗೊಳಿಸಿದ ಅಳಿಯನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್ ಠಾಣೆ ಮುಖ್ಯಸ್ಥ ಯೋಗೇಂದ್ರ ಸಿಂಗ್ ಜಾಡೌನ್ ಹೇಳಿದರು.
ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…
ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…
ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…
ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…
ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…
ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…