Latest

ಮಗುವನ್ನೂ ಬಿಟ್ಟು ಪ್ರಿಯತಮನ ಜತೆ ಶಿಕ್ಷಕಿ ಪರಾರಿ

ಯರಮರಸ್ ಕ್ಯಾಂಪ್ ನಿವಾಸಿ ಶಿಕ್ಷಕಿ ಸುಹಾಸಿನಿ (29) ಅ.20 ರಂದು ಹೊರಗೆ ಹೋಗಿ ಬರುವುದಾಗಿ ಮನೆಯಿಂದ ಹೋದವಳು ನಾಪತ್ತೆಯಾಗಿದ್ದಾಳೆ. ರಾಯಚೂರಿನಲ್ಲಿ ವಿವಾಹಿತ ಶಿಕ್ಷಕಿಯೊಬ್ಬರು ೭ ವರ್ಷದ ಮಗುವನ್ನೂ ತೊರೆದು ನಾಪತ್ತೆಯಾಗಿದ್ದು, ಇದರ ಹಿಂದೆ ಲವ್ ಜಿಹಾದ್ ನಡೆದಿದೆ ಎಂದು ಶಿಕ್ಷಕಿಯ ತಾಯಿ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ.
ಸಲೀಂ ಎಂಬ ಮುಸ್ಲಿಂ ಯುವಕನ ಜೊತೆ ಈಕೆ ಹೋಗಿರುವುದಾಗಿ ಆರೋಪಿಸಲಾಗಿದೆ. ಸುಹಾಸಿನಿ ತಾಯಿ ನಿರ್ಮಲಾ ಅವರು ಈ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ತಾನು ಸುಹಾಸಿನಿಯ ಕ್ಲಾಸ್‌ಮೇಟ್ ಎಂಬ ನೆಪವೊಡ್ಡಿ ಸಲೀಂ ಪದೇ ಪದೆ ಮನೆಗೆ ಬರುತ್ತಿದ್ದ. ಯಾರೂ ಇಲ್ಲದ ವೇಳೆ ಮನೆಗೆ ಬಂದು ಸರಸವಾಡುತ್ತಿದ್ದ. ಮದುವೆ ಆಗಿ ಮಕ್ಕಳಿದ್ದರೂ ಶಿಕ್ಷಕಿ ಸುಹಾಸಿನಿ ಜೊತೆ ಸಲೀಂ ಸಂಪರ್ಕ ಹೊಂದಿದ್ದಾನೆ. ಒಂದು ತಿಂಗಳ ಹಿಂದೆ ಮನೆಯಲ್ಲಿ ವಿಚಾರ ಗೊತ್ತಾಗುತ್ತಿದ್ದಂತೆ ನಾಪತ್ತೆಯಾಗಿದ್ದಾರೆ ಎಂದು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಲವ್ ಜಿಹಾದ್ ಆರೋಪ ಹೊತ್ತಿರುವ ಸಲೀಂ, ರಾಯಚೂರು ನಗರದ ಹೊರವಲಯದ ಪೊತಗಲ್ ಗ್ರಾಮದ ನಿವಾಸಿ. ಈತ ಗಂಜ್‌ನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ. ಸಲೀಂಗೆ ಮದುವೆಯಾಗಿ ಒಂದು ಹೆಣ್ಣು ಮಗು ಇದೆ. ಆದರೂ ಈತ ಶಿಕ್ಷಕಿ ಸುಹಾಸಿನಿ ಹಿಂದೆ ಬಿದ್ದಿದ್ದ.
10 ವರ್ಷಗಳ ಹಿಂದೆ ಲಿಂಗರಾಜ ಎಂಬವರ ಜೊತೆ ಸುಹಾಸಿನಿಯ ಮದುವೆಯಾಗಿತ್ತು. ಈಕೆ ಯರಮರಸ್ ಬಳಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾಳೆ. ಸುಹಾಸಿನಿಗೆ 7 ವರ್ಷದ ಮಗುವಿದ್ದು, ಪುಟ್ಟ ಮಗುವನ್ನೂ ಬಿಟ್ಟು ಪರಾರಿಯಾಗಿದ್ದಾಳೆ.

ಸುಹಾಸಿನಿ ಮಿಸ್ಸಿಂಗ್ ಬಗ್ಗೆ ತಾಯಿ ನಿರ್ಮಲಾ ಹೇಳಿರುವ ಹೇಳಿಕೆ ಹೀಗಿದೆ: ಸಲೀಂ ನನಗೆ ಇಷ್ಟ, ಅವನನ್ನು ಮದುವೆಯಾಗುವುದಾಗಿ ಹೇಳಿದ್ದಳು. ನಿನಗೆ ಮದುವೆಯಾಗಿ ಮಗುವೂ ಇರುವಾಗ ಇದು ಬೇಡ ಎಂದೆವು. ಸಲೀಂ ಕಾಲ್ ಮಾಡಿ, ನಾವಿಬ್ಬರೂ ಮದುವೆಯಾಗುತ್ತೇವೆ ಎಂದ. ಆಕೆಗೆ ಡೈವೋರ್ಸ್ ನೀಡದೆ ಹೇಗೆ ಮದುವೆ ಆಗಲು ಸಾಧ್ಯ ಎಂದೆವು. ಅ.20ರಂದು ಮನೆಯಲ್ಲಿ ಜಗಳ ಮಾಡಿ ಮನೆಬಿಟ್ಟು ಹೋದಳು. ನಮ್ಮ ಸಂಬಂಧಿಕರಿಗೆ ಕರೆ ಮಾಡಿ ತಾವು ಮದುವೆ ಆಗಿದ್ದೇವೆಂದು ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago