Latest

ಮಗುವನ್ನೂ ಬಿಟ್ಟು ಪ್ರಿಯತಮನ ಜತೆ ಶಿಕ್ಷಕಿ ಪರಾರಿ

ಯರಮರಸ್ ಕ್ಯಾಂಪ್ ನಿವಾಸಿ ಶಿಕ್ಷಕಿ ಸುಹಾಸಿನಿ (29) ಅ.20 ರಂದು ಹೊರಗೆ ಹೋಗಿ ಬರುವುದಾಗಿ ಮನೆಯಿಂದ ಹೋದವಳು ನಾಪತ್ತೆಯಾಗಿದ್ದಾಳೆ. ರಾಯಚೂರಿನಲ್ಲಿ ವಿವಾಹಿತ ಶಿಕ್ಷಕಿಯೊಬ್ಬರು ೭ ವರ್ಷದ ಮಗುವನ್ನೂ ತೊರೆದು ನಾಪತ್ತೆಯಾಗಿದ್ದು, ಇದರ ಹಿಂದೆ ಲವ್ ಜಿಹಾದ್ ನಡೆದಿದೆ ಎಂದು ಶಿಕ್ಷಕಿಯ ತಾಯಿ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ.
ಸಲೀಂ ಎಂಬ ಮುಸ್ಲಿಂ ಯುವಕನ ಜೊತೆ ಈಕೆ ಹೋಗಿರುವುದಾಗಿ ಆರೋಪಿಸಲಾಗಿದೆ. ಸುಹಾಸಿನಿ ತಾಯಿ ನಿರ್ಮಲಾ ಅವರು ಈ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ತಾನು ಸುಹಾಸಿನಿಯ ಕ್ಲಾಸ್‌ಮೇಟ್ ಎಂಬ ನೆಪವೊಡ್ಡಿ ಸಲೀಂ ಪದೇ ಪದೆ ಮನೆಗೆ ಬರುತ್ತಿದ್ದ. ಯಾರೂ ಇಲ್ಲದ ವೇಳೆ ಮನೆಗೆ ಬಂದು ಸರಸವಾಡುತ್ತಿದ್ದ. ಮದುವೆ ಆಗಿ ಮಕ್ಕಳಿದ್ದರೂ ಶಿಕ್ಷಕಿ ಸುಹಾಸಿನಿ ಜೊತೆ ಸಲೀಂ ಸಂಪರ್ಕ ಹೊಂದಿದ್ದಾನೆ. ಒಂದು ತಿಂಗಳ ಹಿಂದೆ ಮನೆಯಲ್ಲಿ ವಿಚಾರ ಗೊತ್ತಾಗುತ್ತಿದ್ದಂತೆ ನಾಪತ್ತೆಯಾಗಿದ್ದಾರೆ ಎಂದು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಲವ್ ಜಿಹಾದ್ ಆರೋಪ ಹೊತ್ತಿರುವ ಸಲೀಂ, ರಾಯಚೂರು ನಗರದ ಹೊರವಲಯದ ಪೊತಗಲ್ ಗ್ರಾಮದ ನಿವಾಸಿ. ಈತ ಗಂಜ್‌ನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ. ಸಲೀಂಗೆ ಮದುವೆಯಾಗಿ ಒಂದು ಹೆಣ್ಣು ಮಗು ಇದೆ. ಆದರೂ ಈತ ಶಿಕ್ಷಕಿ ಸುಹಾಸಿನಿ ಹಿಂದೆ ಬಿದ್ದಿದ್ದ.
10 ವರ್ಷಗಳ ಹಿಂದೆ ಲಿಂಗರಾಜ ಎಂಬವರ ಜೊತೆ ಸುಹಾಸಿನಿಯ ಮದುವೆಯಾಗಿತ್ತು. ಈಕೆ ಯರಮರಸ್ ಬಳಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾಳೆ. ಸುಹಾಸಿನಿಗೆ 7 ವರ್ಷದ ಮಗುವಿದ್ದು, ಪುಟ್ಟ ಮಗುವನ್ನೂ ಬಿಟ್ಟು ಪರಾರಿಯಾಗಿದ್ದಾಳೆ.

ಸುಹಾಸಿನಿ ಮಿಸ್ಸಿಂಗ್ ಬಗ್ಗೆ ತಾಯಿ ನಿರ್ಮಲಾ ಹೇಳಿರುವ ಹೇಳಿಕೆ ಹೀಗಿದೆ: ಸಲೀಂ ನನಗೆ ಇಷ್ಟ, ಅವನನ್ನು ಮದುವೆಯಾಗುವುದಾಗಿ ಹೇಳಿದ್ದಳು. ನಿನಗೆ ಮದುವೆಯಾಗಿ ಮಗುವೂ ಇರುವಾಗ ಇದು ಬೇಡ ಎಂದೆವು. ಸಲೀಂ ಕಾಲ್ ಮಾಡಿ, ನಾವಿಬ್ಬರೂ ಮದುವೆಯಾಗುತ್ತೇವೆ ಎಂದ. ಆಕೆಗೆ ಡೈವೋರ್ಸ್ ನೀಡದೆ ಹೇಗೆ ಮದುವೆ ಆಗಲು ಸಾಧ್ಯ ಎಂದೆವು. ಅ.20ರಂದು ಮನೆಯಲ್ಲಿ ಜಗಳ ಮಾಡಿ ಮನೆಬಿಟ್ಟು ಹೋದಳು. ನಮ್ಮ ಸಂಬಂಧಿಕರಿಗೆ ಕರೆ ಮಾಡಿ ತಾವು ಮದುವೆ ಆಗಿದ್ದೇವೆಂದು ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

20 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

20 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

20 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

20 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

20 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

20 hours ago