Latest

ಮಗುವನ್ನೂ ಬಿಟ್ಟು ಪ್ರಿಯತಮನ ಜತೆ ಶಿಕ್ಷಕಿ ಪರಾರಿ

ಯರಮರಸ್ ಕ್ಯಾಂಪ್ ನಿವಾಸಿ ಶಿಕ್ಷಕಿ ಸುಹಾಸಿನಿ (29) ಅ.20 ರಂದು ಹೊರಗೆ ಹೋಗಿ ಬರುವುದಾಗಿ ಮನೆಯಿಂದ ಹೋದವಳು ನಾಪತ್ತೆಯಾಗಿದ್ದಾಳೆ. ರಾಯಚೂರಿನಲ್ಲಿ ವಿವಾಹಿತ ಶಿಕ್ಷಕಿಯೊಬ್ಬರು ೭ ವರ್ಷದ ಮಗುವನ್ನೂ ತೊರೆದು ನಾಪತ್ತೆಯಾಗಿದ್ದು, ಇದರ ಹಿಂದೆ ಲವ್ ಜಿಹಾದ್ ನಡೆದಿದೆ ಎಂದು ಶಿಕ್ಷಕಿಯ ತಾಯಿ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ.
ಸಲೀಂ ಎಂಬ ಮುಸ್ಲಿಂ ಯುವಕನ ಜೊತೆ ಈಕೆ ಹೋಗಿರುವುದಾಗಿ ಆರೋಪಿಸಲಾಗಿದೆ. ಸುಹಾಸಿನಿ ತಾಯಿ ನಿರ್ಮಲಾ ಅವರು ಈ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ತಾನು ಸುಹಾಸಿನಿಯ ಕ್ಲಾಸ್‌ಮೇಟ್ ಎಂಬ ನೆಪವೊಡ್ಡಿ ಸಲೀಂ ಪದೇ ಪದೆ ಮನೆಗೆ ಬರುತ್ತಿದ್ದ. ಯಾರೂ ಇಲ್ಲದ ವೇಳೆ ಮನೆಗೆ ಬಂದು ಸರಸವಾಡುತ್ತಿದ್ದ. ಮದುವೆ ಆಗಿ ಮಕ್ಕಳಿದ್ದರೂ ಶಿಕ್ಷಕಿ ಸುಹಾಸಿನಿ ಜೊತೆ ಸಲೀಂ ಸಂಪರ್ಕ ಹೊಂದಿದ್ದಾನೆ. ಒಂದು ತಿಂಗಳ ಹಿಂದೆ ಮನೆಯಲ್ಲಿ ವಿಚಾರ ಗೊತ್ತಾಗುತ್ತಿದ್ದಂತೆ ನಾಪತ್ತೆಯಾಗಿದ್ದಾರೆ ಎಂದು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಲವ್ ಜಿಹಾದ್ ಆರೋಪ ಹೊತ್ತಿರುವ ಸಲೀಂ, ರಾಯಚೂರು ನಗರದ ಹೊರವಲಯದ ಪೊತಗಲ್ ಗ್ರಾಮದ ನಿವಾಸಿ. ಈತ ಗಂಜ್‌ನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ. ಸಲೀಂಗೆ ಮದುವೆಯಾಗಿ ಒಂದು ಹೆಣ್ಣು ಮಗು ಇದೆ. ಆದರೂ ಈತ ಶಿಕ್ಷಕಿ ಸುಹಾಸಿನಿ ಹಿಂದೆ ಬಿದ್ದಿದ್ದ.
10 ವರ್ಷಗಳ ಹಿಂದೆ ಲಿಂಗರಾಜ ಎಂಬವರ ಜೊತೆ ಸುಹಾಸಿನಿಯ ಮದುವೆಯಾಗಿತ್ತು. ಈಕೆ ಯರಮರಸ್ ಬಳಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾಳೆ. ಸುಹಾಸಿನಿಗೆ 7 ವರ್ಷದ ಮಗುವಿದ್ದು, ಪುಟ್ಟ ಮಗುವನ್ನೂ ಬಿಟ್ಟು ಪರಾರಿಯಾಗಿದ್ದಾಳೆ.

ಸುಹಾಸಿನಿ ಮಿಸ್ಸಿಂಗ್ ಬಗ್ಗೆ ತಾಯಿ ನಿರ್ಮಲಾ ಹೇಳಿರುವ ಹೇಳಿಕೆ ಹೀಗಿದೆ: ಸಲೀಂ ನನಗೆ ಇಷ್ಟ, ಅವನನ್ನು ಮದುವೆಯಾಗುವುದಾಗಿ ಹೇಳಿದ್ದಳು. ನಿನಗೆ ಮದುವೆಯಾಗಿ ಮಗುವೂ ಇರುವಾಗ ಇದು ಬೇಡ ಎಂದೆವು. ಸಲೀಂ ಕಾಲ್ ಮಾಡಿ, ನಾವಿಬ್ಬರೂ ಮದುವೆಯಾಗುತ್ತೇವೆ ಎಂದ. ಆಕೆಗೆ ಡೈವೋರ್ಸ್ ನೀಡದೆ ಹೇಗೆ ಮದುವೆ ಆಗಲು ಸಾಧ್ಯ ಎಂದೆವು. ಅ.20ರಂದು ಮನೆಯಲ್ಲಿ ಜಗಳ ಮಾಡಿ ಮನೆಬಿಟ್ಟು ಹೋದಳು. ನಮ್ಮ ಸಂಬಂಧಿಕರಿಗೆ ಕರೆ ಮಾಡಿ ತಾವು ಮದುವೆ ಆಗಿದ್ದೇವೆಂದು ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

33 minutes ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

35 minutes ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

36 minutes ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

38 minutes ago

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

10 hours ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

10 hours ago