ಯರಮರಸ್ ಕ್ಯಾಂಪ್ ನಿವಾಸಿ ಶಿಕ್ಷಕಿ ಸುಹಾಸಿನಿ (29) ಅ.20 ರಂದು ಹೊರಗೆ ಹೋಗಿ ಬರುವುದಾಗಿ ಮನೆಯಿಂದ ಹೋದವಳು ನಾಪತ್ತೆಯಾಗಿದ್ದಾಳೆ. ರಾಯಚೂರಿನಲ್ಲಿ ವಿವಾಹಿತ ಶಿಕ್ಷಕಿಯೊಬ್ಬರು ೭ ವರ್ಷದ ಮಗುವನ್ನೂ ತೊರೆದು ನಾಪತ್ತೆಯಾಗಿದ್ದು, ಇದರ ಹಿಂದೆ ಲವ್ ಜಿಹಾದ್ ನಡೆದಿದೆ ಎಂದು ಶಿಕ್ಷಕಿಯ ತಾಯಿ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ.
ಸಲೀಂ ಎಂಬ ಮುಸ್ಲಿಂ ಯುವಕನ ಜೊತೆ ಈಕೆ ಹೋಗಿರುವುದಾಗಿ ಆರೋಪಿಸಲಾಗಿದೆ. ಸುಹಾಸಿನಿ ತಾಯಿ ನಿರ್ಮಲಾ ಅವರು ಈ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ತಾನು ಸುಹಾಸಿನಿಯ ಕ್ಲಾಸ್ಮೇಟ್ ಎಂಬ ನೆಪವೊಡ್ಡಿ ಸಲೀಂ ಪದೇ ಪದೆ ಮನೆಗೆ ಬರುತ್ತಿದ್ದ. ಯಾರೂ ಇಲ್ಲದ ವೇಳೆ ಮನೆಗೆ ಬಂದು ಸರಸವಾಡುತ್ತಿದ್ದ. ಮದುವೆ ಆಗಿ ಮಕ್ಕಳಿದ್ದರೂ ಶಿಕ್ಷಕಿ ಸುಹಾಸಿನಿ ಜೊತೆ ಸಲೀಂ ಸಂಪರ್ಕ ಹೊಂದಿದ್ದಾನೆ. ಒಂದು ತಿಂಗಳ ಹಿಂದೆ ಮನೆಯಲ್ಲಿ ವಿಚಾರ ಗೊತ್ತಾಗುತ್ತಿದ್ದಂತೆ ನಾಪತ್ತೆಯಾಗಿದ್ದಾರೆ ಎಂದು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಲವ್ ಜಿಹಾದ್ ಆರೋಪ ಹೊತ್ತಿರುವ ಸಲೀಂ, ರಾಯಚೂರು ನಗರದ ಹೊರವಲಯದ ಪೊತಗಲ್ ಗ್ರಾಮದ ನಿವಾಸಿ. ಈತ ಗಂಜ್ನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ. ಸಲೀಂಗೆ ಮದುವೆಯಾಗಿ ಒಂದು ಹೆಣ್ಣು ಮಗು ಇದೆ. ಆದರೂ ಈತ ಶಿಕ್ಷಕಿ ಸುಹಾಸಿನಿ ಹಿಂದೆ ಬಿದ್ದಿದ್ದ.
10 ವರ್ಷಗಳ ಹಿಂದೆ ಲಿಂಗರಾಜ ಎಂಬವರ ಜೊತೆ ಸುಹಾಸಿನಿಯ ಮದುವೆಯಾಗಿತ್ತು. ಈಕೆ ಯರಮರಸ್ ಬಳಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾಳೆ. ಸುಹಾಸಿನಿಗೆ 7 ವರ್ಷದ ಮಗುವಿದ್ದು, ಪುಟ್ಟ ಮಗುವನ್ನೂ ಬಿಟ್ಟು ಪರಾರಿಯಾಗಿದ್ದಾಳೆ.
ಸುಹಾಸಿನಿ ಮಿಸ್ಸಿಂಗ್ ಬಗ್ಗೆ ತಾಯಿ ನಿರ್ಮಲಾ ಹೇಳಿರುವ ಹೇಳಿಕೆ ಹೀಗಿದೆ: ಸಲೀಂ ನನಗೆ ಇಷ್ಟ, ಅವನನ್ನು ಮದುವೆಯಾಗುವುದಾಗಿ ಹೇಳಿದ್ದಳು. ನಿನಗೆ ಮದುವೆಯಾಗಿ ಮಗುವೂ ಇರುವಾಗ ಇದು ಬೇಡ ಎಂದೆವು. ಸಲೀಂ ಕಾಲ್ ಮಾಡಿ, ನಾವಿಬ್ಬರೂ ಮದುವೆಯಾಗುತ್ತೇವೆ ಎಂದ. ಆಕೆಗೆ ಡೈವೋರ್ಸ್ ನೀಡದೆ ಹೇಗೆ ಮದುವೆ ಆಗಲು ಸಾಧ್ಯ ಎಂದೆವು. ಅ.20ರಂದು ಮನೆಯಲ್ಲಿ ಜಗಳ ಮಾಡಿ ಮನೆಬಿಟ್ಟು ಹೋದಳು. ನಮ್ಮ ಸಂಬಂಧಿಕರಿಗೆ ಕರೆ ಮಾಡಿ ತಾವು ಮದುವೆ ಆಗಿದ್ದೇವೆಂದು ಹೇಳಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…
ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…
ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…
ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…