Latest

ವಿದ್ಯಾರ್ಥಿನಿಯರ ಕೈಯಲ್ಲಿ ಕಾರು ತೊಳಿಸಿದ ಶಿಕ್ಷಕಿ ಅಮಾನತ್ತು.

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಂಗಂಪೇಟೆ ಮಂಡಲದ ವೆಂಕಟಾಪುರಂ ಪ್ರಾಥಮಿಕ ಶಾಲೆಯಲ್ಲಿ ನಡೆದ ಒಂದು ಘಟನೆ ವಿವಾದಕ್ಕೆ ಕಾರಣವಾಗಿದೆ. ಶಾಲೆಯ ಶಿಕ್ಷಕಿ ಡಿ. ಸುಶೀಲಾ ತಮ್ಮ ವಿದ್ಯಾರ್ಥಿಗಳನ್ನು ವೈಯಕ್ತಿಕ ಕೆಲಸಗಳಿಗೆ ಬಳಸಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಶಾಲೆಗೆ ಸ್ವಂತ ಕಾರಿನಲ್ಲಿ ಆಗಮಿಸಿದ್ದ ಸುಶೀಲಾ, ತಮ್ಮ ವಾಹನದ ಮೇಲೆ ಕೂಡಿದ್ದ ದೂಳನ್ನು ತೊಳೆಯಲು ವಿದ್ಯಾರ್ಥಿಗಳನ್ನು ಕೇಳಿಕೊಂಡರು. ಶಿಕ್ಷಕಿಯ ಆದೇಶ ಪಾಲಿಸಲು ಕೆಲವು ವಿದ್ಯಾರ್ಥಿನಿಯರು ಕಾರು ಸ್ವಚ್ಛಗೊಳಿಸಿದರು. ಈ ಸಂದರ್ಭ, ಆ ಕ್ಷಣಗಳನ್ನು ಅಲ್ಲಿದ್ದ ಇತರ ಶಿಕ್ಷಕರು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದು,  ವೀಡಿಯೋವೈರಲ್ ಆಗಿದೆ.

ವಿಡಿಯೋ ವೈರಲ್ ಆದ ನಂತರ, ಈ ಕುರಿತು ಶಾಲಾ ಮೇಲಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಅಧಿಕಾರಿಗಳು ತಕ್ಷಣವೇ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳನ್ನು ವಿಚಾರಿಸಿದರು. ವಿಚಾರಣೆ ವೇಳೆ ವಿದ್ಯಾರ್ಥಿಗಳು, ಶಿಕ್ಷಕಿ ಅವರ ಮೇಲೆ ಒತ್ತಡ ಹೇರಿದ್ದು, ಅವರ ಮಾತಿಗೆ ಕಿವಿಗೊಡದಿದ್ದರೆ ಪರೀಕ್ಷೆಯಲ್ಲಿ ಫೇಲ್ ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೆ, ಶಾಲೆಯ ಸಮಯದಲ್ಲಿ ವೈಯಕ್ತಿಕ ಕೆಲಸಗಳನ್ನೂ ಮಾಡಿಸುತ್ತಿದ್ದರು ಎಂಬ ಆರೋಪವೂ ಕೇಳಿ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿತ ಅಧಿಕಾರಿಗಳು ಶಿಕ್ಷಕಿಯನ್ನು ಅಮಾನತು ಮಾಡಿ ಕ್ರಮ ಕೈಗೊಂಡಿದ್ದಾರೆ.  ಈ ಘಟನೆಯಿಂದ ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದು, ಶಿಕ್ಷಕಿಯ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಾಗ್ದಾಳಿ ನಡೆಯುತ್ತಿದೆ.

ಶಿಕ್ಷಕರ ಮುಖ್ಯ ಜವಾಬ್ದಾರಿ ಮಕ್ಕಳಿಗೆ ಪಾಠ ಕಲಿಸುವುದು, ಅವರ ಭವಿಷ್ಯ ರೂಪಿಸುವುದು. ಆದರೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳನ್ನು ವೈಯಕ್ತಿಕ ಕೆಲಸಗಳಿಗೆ ಬಳಸಿಕೊಳ್ಳುವ ಪ್ರವೃತ್ತಿ ಶೈಕ್ಷಣಿಕ ಕ್ಷೇತ್ರದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಚರ್ಚೆಗಳು ನಡೆಯುತ್ತಿವೆ.

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

11 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

11 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

11 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

11 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

11 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

11 hours ago