Latest

ವಿದ್ಯಾರ್ಥಿನಿಯರ ಕೈಯಲ್ಲಿ ಕಾರು ತೊಳಿಸಿದ ಶಿಕ್ಷಕಿ ಅಮಾನತ್ತು.

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಂಗಂಪೇಟೆ ಮಂಡಲದ ವೆಂಕಟಾಪುರಂ ಪ್ರಾಥಮಿಕ ಶಾಲೆಯಲ್ಲಿ ನಡೆದ ಒಂದು ಘಟನೆ ವಿವಾದಕ್ಕೆ ಕಾರಣವಾಗಿದೆ. ಶಾಲೆಯ ಶಿಕ್ಷಕಿ ಡಿ. ಸುಶೀಲಾ ತಮ್ಮ ವಿದ್ಯಾರ್ಥಿಗಳನ್ನು ವೈಯಕ್ತಿಕ ಕೆಲಸಗಳಿಗೆ ಬಳಸಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಶಾಲೆಗೆ ಸ್ವಂತ ಕಾರಿನಲ್ಲಿ ಆಗಮಿಸಿದ್ದ ಸುಶೀಲಾ, ತಮ್ಮ ವಾಹನದ ಮೇಲೆ ಕೂಡಿದ್ದ ದೂಳನ್ನು ತೊಳೆಯಲು ವಿದ್ಯಾರ್ಥಿಗಳನ್ನು ಕೇಳಿಕೊಂಡರು. ಶಿಕ್ಷಕಿಯ ಆದೇಶ ಪಾಲಿಸಲು ಕೆಲವು ವಿದ್ಯಾರ್ಥಿನಿಯರು ಕಾರು ಸ್ವಚ್ಛಗೊಳಿಸಿದರು. ಈ ಸಂದರ್ಭ, ಆ ಕ್ಷಣಗಳನ್ನು ಅಲ್ಲಿದ್ದ ಇತರ ಶಿಕ್ಷಕರು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದು,  ವೀಡಿಯೋವೈರಲ್ ಆಗಿದೆ.

ವಿಡಿಯೋ ವೈರಲ್ ಆದ ನಂತರ, ಈ ಕುರಿತು ಶಾಲಾ ಮೇಲಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಅಧಿಕಾರಿಗಳು ತಕ್ಷಣವೇ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳನ್ನು ವಿಚಾರಿಸಿದರು. ವಿಚಾರಣೆ ವೇಳೆ ವಿದ್ಯಾರ್ಥಿಗಳು, ಶಿಕ್ಷಕಿ ಅವರ ಮೇಲೆ ಒತ್ತಡ ಹೇರಿದ್ದು, ಅವರ ಮಾತಿಗೆ ಕಿವಿಗೊಡದಿದ್ದರೆ ಪರೀಕ್ಷೆಯಲ್ಲಿ ಫೇಲ್ ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೆ, ಶಾಲೆಯ ಸಮಯದಲ್ಲಿ ವೈಯಕ್ತಿಕ ಕೆಲಸಗಳನ್ನೂ ಮಾಡಿಸುತ್ತಿದ್ದರು ಎಂಬ ಆರೋಪವೂ ಕೇಳಿ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿತ ಅಧಿಕಾರಿಗಳು ಶಿಕ್ಷಕಿಯನ್ನು ಅಮಾನತು ಮಾಡಿ ಕ್ರಮ ಕೈಗೊಂಡಿದ್ದಾರೆ.  ಈ ಘಟನೆಯಿಂದ ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದು, ಶಿಕ್ಷಕಿಯ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಾಗ್ದಾಳಿ ನಡೆಯುತ್ತಿದೆ.

ಶಿಕ್ಷಕರ ಮುಖ್ಯ ಜವಾಬ್ದಾರಿ ಮಕ್ಕಳಿಗೆ ಪಾಠ ಕಲಿಸುವುದು, ಅವರ ಭವಿಷ್ಯ ರೂಪಿಸುವುದು. ಆದರೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳನ್ನು ವೈಯಕ್ತಿಕ ಕೆಲಸಗಳಿಗೆ ಬಳಸಿಕೊಳ್ಳುವ ಪ್ರವೃತ್ತಿ ಶೈಕ್ಷಣಿಕ ಕ್ಷೇತ್ರದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಚರ್ಚೆಗಳು ನಡೆಯುತ್ತಿವೆ.

nazeer ahamad

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

5 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

5 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

8 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

8 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

8 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

8 hours ago