Latest

ವಿದ್ಯಾರ್ಥಿನಿಯರ ಕೈಯಲ್ಲಿ ಕಾರು ತೊಳಿಸಿದ ಶಿಕ್ಷಕಿ ಅಮಾನತ್ತು.

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಂಗಂಪೇಟೆ ಮಂಡಲದ ವೆಂಕಟಾಪುರಂ ಪ್ರಾಥಮಿಕ ಶಾಲೆಯಲ್ಲಿ ನಡೆದ ಒಂದು ಘಟನೆ ವಿವಾದಕ್ಕೆ ಕಾರಣವಾಗಿದೆ. ಶಾಲೆಯ ಶಿಕ್ಷಕಿ ಡಿ. ಸುಶೀಲಾ ತಮ್ಮ ವಿದ್ಯಾರ್ಥಿಗಳನ್ನು ವೈಯಕ್ತಿಕ ಕೆಲಸಗಳಿಗೆ ಬಳಸಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಶಾಲೆಗೆ ಸ್ವಂತ ಕಾರಿನಲ್ಲಿ ಆಗಮಿಸಿದ್ದ ಸುಶೀಲಾ, ತಮ್ಮ ವಾಹನದ ಮೇಲೆ ಕೂಡಿದ್ದ ದೂಳನ್ನು ತೊಳೆಯಲು ವಿದ್ಯಾರ್ಥಿಗಳನ್ನು ಕೇಳಿಕೊಂಡರು. ಶಿಕ್ಷಕಿಯ ಆದೇಶ ಪಾಲಿಸಲು ಕೆಲವು ವಿದ್ಯಾರ್ಥಿನಿಯರು ಕಾರು ಸ್ವಚ್ಛಗೊಳಿಸಿದರು. ಈ ಸಂದರ್ಭ, ಆ ಕ್ಷಣಗಳನ್ನು ಅಲ್ಲಿದ್ದ ಇತರ ಶಿಕ್ಷಕರು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದು,  ವೀಡಿಯೋವೈರಲ್ ಆಗಿದೆ.

ವಿಡಿಯೋ ವೈರಲ್ ಆದ ನಂತರ, ಈ ಕುರಿತು ಶಾಲಾ ಮೇಲಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಅಧಿಕಾರಿಗಳು ತಕ್ಷಣವೇ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳನ್ನು ವಿಚಾರಿಸಿದರು. ವಿಚಾರಣೆ ವೇಳೆ ವಿದ್ಯಾರ್ಥಿಗಳು, ಶಿಕ್ಷಕಿ ಅವರ ಮೇಲೆ ಒತ್ತಡ ಹೇರಿದ್ದು, ಅವರ ಮಾತಿಗೆ ಕಿವಿಗೊಡದಿದ್ದರೆ ಪರೀಕ್ಷೆಯಲ್ಲಿ ಫೇಲ್ ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೆ, ಶಾಲೆಯ ಸಮಯದಲ್ಲಿ ವೈಯಕ್ತಿಕ ಕೆಲಸಗಳನ್ನೂ ಮಾಡಿಸುತ್ತಿದ್ದರು ಎಂಬ ಆರೋಪವೂ ಕೇಳಿ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿತ ಅಧಿಕಾರಿಗಳು ಶಿಕ್ಷಕಿಯನ್ನು ಅಮಾನತು ಮಾಡಿ ಕ್ರಮ ಕೈಗೊಂಡಿದ್ದಾರೆ.  ಈ ಘಟನೆಯಿಂದ ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದು, ಶಿಕ್ಷಕಿಯ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಾಗ್ದಾಳಿ ನಡೆಯುತ್ತಿದೆ.

ಶಿಕ್ಷಕರ ಮುಖ್ಯ ಜವಾಬ್ದಾರಿ ಮಕ್ಕಳಿಗೆ ಪಾಠ ಕಲಿಸುವುದು, ಅವರ ಭವಿಷ್ಯ ರೂಪಿಸುವುದು. ಆದರೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳನ್ನು ವೈಯಕ್ತಿಕ ಕೆಲಸಗಳಿಗೆ ಬಳಸಿಕೊಳ್ಳುವ ಪ್ರವೃತ್ತಿ ಶೈಕ್ಷಣಿಕ ಕ್ಷೇತ್ರದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಚರ್ಚೆಗಳು ನಡೆಯುತ್ತಿವೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

7 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

11 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

11 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

11 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

11 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

16 hours ago