Latest

ಸೆಲ್ಫಿ ಡ್ರಾಮಾದ ಹಿಂದಿನ ಭೀಕರ ಸತ್ಯ – ಪತಿ ಮೇಲೆ ಪೋಕ್ಸೋ ಪ್ರಕರಣ ದಾಖಲು, ಗಂಡ ತಾತಪ್ಪ ಅರೆಸ್ಟ್!

ರಾಯಚೂರು (ಆ.3): ಕೆಲವು ದಿನಗಳ ಹಿಂದೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದ್ದ ಘಟನೆಯಲ್ಲಿ ಈಗ ಭಾರೀ ತಿರುವು ಮೂಡಿದ್ದು, ಪತಿ ತಾತಪ್ಪನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ, ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ಜುಲೈ 12 ರಂದು ರಾಯಚೂರಿನ ಗುರ್ಜಾಪುರ ಬಳಿಯ ಕೃಷ್ಣಾ ನದಿ ಸೇತುವೆಯ ಮೇಲೆ ಪತ್ನಿ ಪತಿಯನ್ನು ನದಿಗೆ ತಳ್ಳಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸುದ್ದಿಯ ಕೆಂದ್ರವಾಗಿತ್ತು. ವಿಡಿಯೋದಲ್ಲಿ ನದಿಯಲ್ಲಿ ಪತನವಾದ ತಾತಪ್ಪ ನೆರವಿಗೆ ಕೋರುತ್ತಿರುವ ದೃಶ್ಯ ಸ್ಪಷ್ಟವಾಗಿ ಕಾಣುತ್ತಿತ್ತು. ಸ್ಥಳೀಯರು ಹಗ್ಗದ ಸಹಾಯದಿಂದ ಆತನನ್ನು ರಕ್ಷಿಸಿದ್ದರು.

ಈ ಸಂಬಂಧ ಮಾತನಾಡಿದ್ದ ತಾತಪ್ಪ, ಪತ್ನಿಯೇ ತನ್ನನ್ನು ಸೆಲ್ಫಿ ತೆಗೆಯುವ ನೆಪದಲ್ಲಿ ಸೇತುವೆಯ ಮೇಲೆ ನಿಲ್ಲಿಸಿ ನೀರಿಗೆ ತಳ್ಳಿದಾಳೆ ಎಂದು ಗಂಭೀರ ಆರೋಪ ಮಾಡಿದ್ದ. ಆದರೆ ಪತ್ನಿಯ ಮಾತು ವಿಭಿನ್ನವಾಗಿದ್ದು, ತಾತಪ್ಪ ತಾನಾಗಿಯೇ ನದಿಗೆ ಹಾರಿದ್ದಾನೆ ಹಾಗೂ ನಂತರ ತಪ್ಪು ಆರೋಪ ಹೊರೆಸುತ್ತಿದ್ದಾರೆ ಎಂದು ಹೇಳಿದ್ದಳು.

ಈ ಸನ್ನಿವೇಶದ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದಾಗ, ಅಚ್ಚರಿಯ ಸಂಗತಿ ಬೆಳಕಿಗೆ ಬಂದಿತು. ತಾತಪ್ಪ ವಿವಾಹವಾದ ಯುವತಿ ವಯಸ್ಸು 18 ಕ್ಕೆ ಕಡಿಮೆ ಎಂಬ ಶಂಕೆಯ ಮೇರೆಗೆ ಪೊಲೀಸರು ಶಾಲಾ ದಾಖಲೆ ಪರಿಶೀಲಿಸಿದರು. ಅಧ್ಯಯನದ ಬಳಿಕ, ಯುವತಿ ಅಪ್ರಾಪ್ತೆಯೆಂಬುದು ಸ್ಪಷ್ಟವಾಯಿತು. ಇದರಿಂದ ಶಾಕಿಂಗ್ ಟ್ವಿಸ್ಟ್ ಸಿಕ್ಕಿದ್ದು, ತಾತಪ್ಪನ ವಿರುದ್ಧ ಪಾಕ್‍ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಯಿತು.

ಆದರೆ ಆರೋಪ ತಿಳಿಯುತ್ತಿದ್ದಂತೆಯೇ ತಾತಪ್ಪ ಪೊಲೀಸರ ಕೈಗೆ ಸಿಗದಂತೆ ಪರಾರಿಯಾಗಿದ್ದ. ಪ್ರಕರಣದ ತನಿಖೆಯನ್ನು ಮುಂದುವರೆಸಿದ ಮಹಿಳಾ ಠಾಣೆಯ ಪೊಲೀಸರು, ಹತ್ತಿ ಹುತ್ತಿ ಹುಡುಕಿ ಕೊನೆಗೂ ಆತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಇಂದಿನ ಅಂತಿಮ ಕ್ರಮವಾಗಿ ತಾತಪ್ಪನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ತಾತಪ್ಪ ಅಪ್ರಾಪ್ತೆಯೆಂಬುದು ತಿಳಿದಿದ್ದರೂ ಆಕೆಯನ್ನು ವಿವಾಹವಾಗಿ ಜೀವನ ನಡೆಸುತ್ತಿದ್ದನು ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ್ದನು ಎಂಬ ಆರೋಪಗಳ ಹಿನ್ನೆಲೆಯಲ್ಲಿ ಬಂಧನೆ ನಡೆದಿದೆ.

ಈ ಪ್ರಕರಣವು ಈಗ ಕೇವಲ ನದಿ ಸೇತುವೆಯ ಸೆಲ್ಫಿ ಪ್ರಕರಣವಷ್ಟೇ ಅಲ್ಲ, ಬಾಲ್ಯವಿವಾಹ ಮತ್ತು ಲೈಂಗಿಕ ದೌರ್ಜನ್ಯ ಎಂಬ ಗಂಭೀರ ಆರೋಪಗಳತ್ತ ದಾರಿ ತಿರುಗಿದಿದ್ದು, ಆರೋಪಿಗೆ ಕಾನೂನು ಪ್ರಕಾರ ತೀವ್ರ ಶಿಕ್ಷೆಯ ಸಾಧ್ಯತೆ ಮೂಡಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392

nazeer ahamad

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

5 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

3 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

4 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

1 month ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 months ago