Latest

ಸೆಲ್ಫಿ ಡ್ರಾಮಾದ ಹಿಂದಿನ ಭೀಕರ ಸತ್ಯ – ಪತಿ ಮೇಲೆ ಪೋಕ್ಸೋ ಪ್ರಕರಣ ದಾಖಲು, ಗಂಡ ತಾತಪ್ಪ ಅರೆಸ್ಟ್!

ರಾಯಚೂರು (ಆ.3): ಕೆಲವು ದಿನಗಳ ಹಿಂದೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದ್ದ ಘಟನೆಯಲ್ಲಿ ಈಗ ಭಾರೀ ತಿರುವು ಮೂಡಿದ್ದು, ಪತಿ ತಾತಪ್ಪನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ, ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ಜುಲೈ 12 ರಂದು ರಾಯಚೂರಿನ ಗುರ್ಜಾಪುರ ಬಳಿಯ ಕೃಷ್ಣಾ ನದಿ ಸೇತುವೆಯ ಮೇಲೆ ಪತ್ನಿ ಪತಿಯನ್ನು ನದಿಗೆ ತಳ್ಳಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸುದ್ದಿಯ ಕೆಂದ್ರವಾಗಿತ್ತು. ವಿಡಿಯೋದಲ್ಲಿ ನದಿಯಲ್ಲಿ ಪತನವಾದ ತಾತಪ್ಪ ನೆರವಿಗೆ ಕೋರುತ್ತಿರುವ ದೃಶ್ಯ ಸ್ಪಷ್ಟವಾಗಿ ಕಾಣುತ್ತಿತ್ತು. ಸ್ಥಳೀಯರು ಹಗ್ಗದ ಸಹಾಯದಿಂದ ಆತನನ್ನು ರಕ್ಷಿಸಿದ್ದರು.

ಈ ಸಂಬಂಧ ಮಾತನಾಡಿದ್ದ ತಾತಪ್ಪ, ಪತ್ನಿಯೇ ತನ್ನನ್ನು ಸೆಲ್ಫಿ ತೆಗೆಯುವ ನೆಪದಲ್ಲಿ ಸೇತುವೆಯ ಮೇಲೆ ನಿಲ್ಲಿಸಿ ನೀರಿಗೆ ತಳ್ಳಿದಾಳೆ ಎಂದು ಗಂಭೀರ ಆರೋಪ ಮಾಡಿದ್ದ. ಆದರೆ ಪತ್ನಿಯ ಮಾತು ವಿಭಿನ್ನವಾಗಿದ್ದು, ತಾತಪ್ಪ ತಾನಾಗಿಯೇ ನದಿಗೆ ಹಾರಿದ್ದಾನೆ ಹಾಗೂ ನಂತರ ತಪ್ಪು ಆರೋಪ ಹೊರೆಸುತ್ತಿದ್ದಾರೆ ಎಂದು ಹೇಳಿದ್ದಳು.

ಈ ಸನ್ನಿವೇಶದ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದಾಗ, ಅಚ್ಚರಿಯ ಸಂಗತಿ ಬೆಳಕಿಗೆ ಬಂದಿತು. ತಾತಪ್ಪ ವಿವಾಹವಾದ ಯುವತಿ ವಯಸ್ಸು 18 ಕ್ಕೆ ಕಡಿಮೆ ಎಂಬ ಶಂಕೆಯ ಮೇರೆಗೆ ಪೊಲೀಸರು ಶಾಲಾ ದಾಖಲೆ ಪರಿಶೀಲಿಸಿದರು. ಅಧ್ಯಯನದ ಬಳಿಕ, ಯುವತಿ ಅಪ್ರಾಪ್ತೆಯೆಂಬುದು ಸ್ಪಷ್ಟವಾಯಿತು. ಇದರಿಂದ ಶಾಕಿಂಗ್ ಟ್ವಿಸ್ಟ್ ಸಿಕ್ಕಿದ್ದು, ತಾತಪ್ಪನ ವಿರುದ್ಧ ಪಾಕ್‍ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಯಿತು.

ಆದರೆ ಆರೋಪ ತಿಳಿಯುತ್ತಿದ್ದಂತೆಯೇ ತಾತಪ್ಪ ಪೊಲೀಸರ ಕೈಗೆ ಸಿಗದಂತೆ ಪರಾರಿಯಾಗಿದ್ದ. ಪ್ರಕರಣದ ತನಿಖೆಯನ್ನು ಮುಂದುವರೆಸಿದ ಮಹಿಳಾ ಠಾಣೆಯ ಪೊಲೀಸರು, ಹತ್ತಿ ಹುತ್ತಿ ಹುಡುಕಿ ಕೊನೆಗೂ ಆತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಇಂದಿನ ಅಂತಿಮ ಕ್ರಮವಾಗಿ ತಾತಪ್ಪನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ತಾತಪ್ಪ ಅಪ್ರಾಪ್ತೆಯೆಂಬುದು ತಿಳಿದಿದ್ದರೂ ಆಕೆಯನ್ನು ವಿವಾಹವಾಗಿ ಜೀವನ ನಡೆಸುತ್ತಿದ್ದನು ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ್ದನು ಎಂಬ ಆರೋಪಗಳ ಹಿನ್ನೆಲೆಯಲ್ಲಿ ಬಂಧನೆ ನಡೆದಿದೆ.

ಈ ಪ್ರಕರಣವು ಈಗ ಕೇವಲ ನದಿ ಸೇತುವೆಯ ಸೆಲ್ಫಿ ಪ್ರಕರಣವಷ್ಟೇ ಅಲ್ಲ, ಬಾಲ್ಯವಿವಾಹ ಮತ್ತು ಲೈಂಗಿಕ ದೌರ್ಜನ್ಯ ಎಂಬ ಗಂಭೀರ ಆರೋಪಗಳತ್ತ ದಾರಿ ತಿರುಗಿದಿದ್ದು, ಆರೋಪಿಗೆ ಕಾನೂನು ಪ್ರಕಾರ ತೀವ್ರ ಶಿಕ್ಷೆಯ ಸಾಧ್ಯತೆ ಮೂಡಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392

nazeer ahamad

Recent Posts

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

1 hour ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

17 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

23 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

23 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago