ರಾಯಚೂರು (ಆ.3): ಕೆಲವು ದಿನಗಳ ಹಿಂದೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದ್ದ ಘಟನೆಯಲ್ಲಿ ಈಗ ಭಾರೀ ತಿರುವು ಮೂಡಿದ್ದು, ಪತಿ ತಾತಪ್ಪನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ, ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಜುಲೈ 12 ರಂದು ರಾಯಚೂರಿನ ಗುರ್ಜಾಪುರ ಬಳಿಯ ಕೃಷ್ಣಾ ನದಿ ಸೇತುವೆಯ ಮೇಲೆ ಪತ್ನಿ ಪತಿಯನ್ನು ನದಿಗೆ ತಳ್ಳಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸುದ್ದಿಯ ಕೆಂದ್ರವಾಗಿತ್ತು. ವಿಡಿಯೋದಲ್ಲಿ ನದಿಯಲ್ಲಿ ಪತನವಾದ ತಾತಪ್ಪ ನೆರವಿಗೆ ಕೋರುತ್ತಿರುವ ದೃಶ್ಯ ಸ್ಪಷ್ಟವಾಗಿ ಕಾಣುತ್ತಿತ್ತು. ಸ್ಥಳೀಯರು ಹಗ್ಗದ ಸಹಾಯದಿಂದ ಆತನನ್ನು ರಕ್ಷಿಸಿದ್ದರು.
ಈ ಸಂಬಂಧ ಮಾತನಾಡಿದ್ದ ತಾತಪ್ಪ, ಪತ್ನಿಯೇ ತನ್ನನ್ನು ಸೆಲ್ಫಿ ತೆಗೆಯುವ ನೆಪದಲ್ಲಿ ಸೇತುವೆಯ ಮೇಲೆ ನಿಲ್ಲಿಸಿ ನೀರಿಗೆ ತಳ್ಳಿದಾಳೆ ಎಂದು ಗಂಭೀರ ಆರೋಪ ಮಾಡಿದ್ದ. ಆದರೆ ಪತ್ನಿಯ ಮಾತು ವಿಭಿನ್ನವಾಗಿದ್ದು, ತಾತಪ್ಪ ತಾನಾಗಿಯೇ ನದಿಗೆ ಹಾರಿದ್ದಾನೆ ಹಾಗೂ ನಂತರ ತಪ್ಪು ಆರೋಪ ಹೊರೆಸುತ್ತಿದ್ದಾರೆ ಎಂದು ಹೇಳಿದ್ದಳು.
ಈ ಸನ್ನಿವೇಶದ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದಾಗ, ಅಚ್ಚರಿಯ ಸಂಗತಿ ಬೆಳಕಿಗೆ ಬಂದಿತು. ತಾತಪ್ಪ ವಿವಾಹವಾದ ಯುವತಿ ವಯಸ್ಸು 18 ಕ್ಕೆ ಕಡಿಮೆ ಎಂಬ ಶಂಕೆಯ ಮೇರೆಗೆ ಪೊಲೀಸರು ಶಾಲಾ ದಾಖಲೆ ಪರಿಶೀಲಿಸಿದರು. ಅಧ್ಯಯನದ ಬಳಿಕ, ಯುವತಿ ಅಪ್ರಾಪ್ತೆಯೆಂಬುದು ಸ್ಪಷ್ಟವಾಯಿತು. ಇದರಿಂದ ಶಾಕಿಂಗ್ ಟ್ವಿಸ್ಟ್ ಸಿಕ್ಕಿದ್ದು, ತಾತಪ್ಪನ ವಿರುದ್ಧ ಪಾಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಯಿತು.
ಆದರೆ ಆರೋಪ ತಿಳಿಯುತ್ತಿದ್ದಂತೆಯೇ ತಾತಪ್ಪ ಪೊಲೀಸರ ಕೈಗೆ ಸಿಗದಂತೆ ಪರಾರಿಯಾಗಿದ್ದ. ಪ್ರಕರಣದ ತನಿಖೆಯನ್ನು ಮುಂದುವರೆಸಿದ ಮಹಿಳಾ ಠಾಣೆಯ ಪೊಲೀಸರು, ಹತ್ತಿ ಹುತ್ತಿ ಹುಡುಕಿ ಕೊನೆಗೂ ಆತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಇಂದಿನ ಅಂತಿಮ ಕ್ರಮವಾಗಿ ತಾತಪ್ಪನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಪೊಲೀಸರು ನೀಡಿದ ಮಾಹಿತಿ ಪ್ರಕಾರ, ತಾತಪ್ಪ ಅಪ್ರಾಪ್ತೆಯೆಂಬುದು ತಿಳಿದಿದ್ದರೂ ಆಕೆಯನ್ನು ವಿವಾಹವಾಗಿ ಜೀವನ ನಡೆಸುತ್ತಿದ್ದನು ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ್ದನು ಎಂಬ ಆರೋಪಗಳ ಹಿನ್ನೆಲೆಯಲ್ಲಿ ಬಂಧನೆ ನಡೆದಿದೆ.
ಈ ಪ್ರಕರಣವು ಈಗ ಕೇವಲ ನದಿ ಸೇತುವೆಯ ಸೆಲ್ಫಿ ಪ್ರಕರಣವಷ್ಟೇ ಅಲ್ಲ, ಬಾಲ್ಯವಿವಾಹ ಮತ್ತು ಲೈಂಗಿಕ ದೌರ್ಜನ್ಯ ಎಂಬ ಗಂಭೀರ ಆರೋಪಗಳತ್ತ ದಾರಿ ತಿರುಗಿದಿದ್ದು, ಆರೋಪಿಗೆ ಕಾನೂನು ಪ್ರಕಾರ ತೀವ್ರ ಶಿಕ್ಷೆಯ ಸಾಧ್ಯತೆ ಮೂಡಿದೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…