Latest

ಸೆಲ್ಫಿ ಡ್ರಾಮಾದ ಹಿಂದಿನ ಭೀಕರ ಸತ್ಯ – ಪತಿ ಮೇಲೆ ಪೋಕ್ಸೋ ಪ್ರಕರಣ ದಾಖಲು, ಗಂಡ ತಾತಪ್ಪ ಅರೆಸ್ಟ್!

ರಾಯಚೂರು (ಆ.3): ಕೆಲವು ದಿನಗಳ ಹಿಂದೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದ್ದ ಘಟನೆಯಲ್ಲಿ ಈಗ ಭಾರೀ ತಿರುವು ಮೂಡಿದ್ದು, ಪತಿ ತಾತಪ್ಪನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ, ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ಜುಲೈ 12 ರಂದು ರಾಯಚೂರಿನ ಗುರ್ಜಾಪುರ ಬಳಿಯ ಕೃಷ್ಣಾ ನದಿ ಸೇತುವೆಯ ಮೇಲೆ ಪತ್ನಿ ಪತಿಯನ್ನು ನದಿಗೆ ತಳ್ಳಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸುದ್ದಿಯ ಕೆಂದ್ರವಾಗಿತ್ತು. ವಿಡಿಯೋದಲ್ಲಿ ನದಿಯಲ್ಲಿ ಪತನವಾದ ತಾತಪ್ಪ ನೆರವಿಗೆ ಕೋರುತ್ತಿರುವ ದೃಶ್ಯ ಸ್ಪಷ್ಟವಾಗಿ ಕಾಣುತ್ತಿತ್ತು. ಸ್ಥಳೀಯರು ಹಗ್ಗದ ಸಹಾಯದಿಂದ ಆತನನ್ನು ರಕ್ಷಿಸಿದ್ದರು.

ಈ ಸಂಬಂಧ ಮಾತನಾಡಿದ್ದ ತಾತಪ್ಪ, ಪತ್ನಿಯೇ ತನ್ನನ್ನು ಸೆಲ್ಫಿ ತೆಗೆಯುವ ನೆಪದಲ್ಲಿ ಸೇತುವೆಯ ಮೇಲೆ ನಿಲ್ಲಿಸಿ ನೀರಿಗೆ ತಳ್ಳಿದಾಳೆ ಎಂದು ಗಂಭೀರ ಆರೋಪ ಮಾಡಿದ್ದ. ಆದರೆ ಪತ್ನಿಯ ಮಾತು ವಿಭಿನ್ನವಾಗಿದ್ದು, ತಾತಪ್ಪ ತಾನಾಗಿಯೇ ನದಿಗೆ ಹಾರಿದ್ದಾನೆ ಹಾಗೂ ನಂತರ ತಪ್ಪು ಆರೋಪ ಹೊರೆಸುತ್ತಿದ್ದಾರೆ ಎಂದು ಹೇಳಿದ್ದಳು.

ಈ ಸನ್ನಿವೇಶದ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದಾಗ, ಅಚ್ಚರಿಯ ಸಂಗತಿ ಬೆಳಕಿಗೆ ಬಂದಿತು. ತಾತಪ್ಪ ವಿವಾಹವಾದ ಯುವತಿ ವಯಸ್ಸು 18 ಕ್ಕೆ ಕಡಿಮೆ ಎಂಬ ಶಂಕೆಯ ಮೇರೆಗೆ ಪೊಲೀಸರು ಶಾಲಾ ದಾಖಲೆ ಪರಿಶೀಲಿಸಿದರು. ಅಧ್ಯಯನದ ಬಳಿಕ, ಯುವತಿ ಅಪ್ರಾಪ್ತೆಯೆಂಬುದು ಸ್ಪಷ್ಟವಾಯಿತು. ಇದರಿಂದ ಶಾಕಿಂಗ್ ಟ್ವಿಸ್ಟ್ ಸಿಕ್ಕಿದ್ದು, ತಾತಪ್ಪನ ವಿರುದ್ಧ ಪಾಕ್‍ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಯಿತು.

ಆದರೆ ಆರೋಪ ತಿಳಿಯುತ್ತಿದ್ದಂತೆಯೇ ತಾತಪ್ಪ ಪೊಲೀಸರ ಕೈಗೆ ಸಿಗದಂತೆ ಪರಾರಿಯಾಗಿದ್ದ. ಪ್ರಕರಣದ ತನಿಖೆಯನ್ನು ಮುಂದುವರೆಸಿದ ಮಹಿಳಾ ಠಾಣೆಯ ಪೊಲೀಸರು, ಹತ್ತಿ ಹುತ್ತಿ ಹುಡುಕಿ ಕೊನೆಗೂ ಆತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಇಂದಿನ ಅಂತಿಮ ಕ್ರಮವಾಗಿ ತಾತಪ್ಪನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ತಾತಪ್ಪ ಅಪ್ರಾಪ್ತೆಯೆಂಬುದು ತಿಳಿದಿದ್ದರೂ ಆಕೆಯನ್ನು ವಿವಾಹವಾಗಿ ಜೀವನ ನಡೆಸುತ್ತಿದ್ದನು ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ್ದನು ಎಂಬ ಆರೋಪಗಳ ಹಿನ್ನೆಲೆಯಲ್ಲಿ ಬಂಧನೆ ನಡೆದಿದೆ.

ಈ ಪ್ರಕರಣವು ಈಗ ಕೇವಲ ನದಿ ಸೇತುವೆಯ ಸೆಲ್ಫಿ ಪ್ರಕರಣವಷ್ಟೇ ಅಲ್ಲ, ಬಾಲ್ಯವಿವಾಹ ಮತ್ತು ಲೈಂಗಿಕ ದೌರ್ಜನ್ಯ ಎಂಬ ಗಂಭೀರ ಆರೋಪಗಳತ್ತ ದಾರಿ ತಿರುಗಿದಿದ್ದು, ಆರೋಪಿಗೆ ಕಾನೂನು ಪ್ರಕಾರ ತೀವ್ರ ಶಿಕ್ಷೆಯ ಸಾಧ್ಯತೆ ಮೂಡಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

14 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

14 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

14 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

14 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago