ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ವ್ಯಾಪಾರಿಯ ಗಮನವನ್ನು ಬೇರೆ ಕಡೆ ಸೆಳೆದು ರೂ 1,68,442 ಹಣವನ್ನು ಹಾಗೂ ಮೂರು ಚೆಕ್ ಗಳನ್ನು ಕಳ್ಳತನ ಮಾಡಿದ್ದಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 10 ರಂದು ಮುಂಡಗೋಡದ ಬಸ್ ನಿಲ್ದಾಣದಲ್ಲಿ ಹುಬ್ಬಳ್ಳಿಯ ದೇವರಾಮ ಖವಾಸ ಎಂಬ ಬಟ್ಟೆ ವ್ಯಾಪಾರಿಯು ಆನವಟ್ಟಿ ,ಹಾನಗಲ್, ಮುಂಡಗೋಡ ದಲ್ಲಿರುವ ಬಟ್ಟೆ ಅಂಗಡಿಗಳಲ್ಲಿ ಸಂಗ್ರಹಿಸಿದ್ದ ರೂ 1,68,442 ಹಣವನ್ನು ಹಾಗೂ ಬ್ಯಾಗ್ ನಲ್ಲಿದ್ದ ಕೆನರಾ ಬ್ಯಾಂಕಿನ ಎರಡು,ಎಸ್.ಬಿ.ಐ ಬ್ಯಾಂಕಿನ 1 ಚೆಕ್ ಗಳನ್ನು ಕಳ್ಳತನ ಮಾಡಿದ್ದಾರೆಂದು ದೂರು ದಾಖಲಿಸಿದ್ದರು.ಈ ಪ್ರಕರಣವನ್ನು ಕೈಗೆತ್ತಿಕೊಂಡ ಮುಂಡಗೋಡ ಪೊಲೀಸರು ಹುಬ್ಬಳ್ಳಿಯ ರಾಕೇಶ ಗುಂಜಾಳ ಎಂಬಾತನನ್ನು ಬಂಧಿಸಿದ್ದಾರೆ.ಈ ಪ್ರಕರಣದಲ್ಲಿ ಇನ್ನೊಬ್ಬ ಆರೋಪಿಯು ಭಾಗಿಯಾಗಿದ್ದು ಆತನ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಉತ್ತರ ಕನ್ನಡದ ಎಸ್.ಪಿ.ಸುಮನ್ ಪನ್ನೆಕರ್,ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಎಸ್. ಬದರಿನಾಥ್,ಡಿ.ಎಸ್.ಪಿ. ರವಿ ನಾಯ್ಕ ಮಾರ್ಗದರ್ಶನದಲ್ಲಿ ಸಿಪಿಐ ಸಿದ್ದಪ್ಪ ಸಿಮಾನಿ,ಪಿ.ಎಸ್.ಐ ಬಸವರಾಜ್ ಮಬನೂರ,ಪಿ.ಎಸ್.ಐ ನಿಂಗಪ್ಪ ಜಕ್ಕಣ್ಣವರ,ಪ್ರೊಬೇಷನರಿ ಪಿ.ಎಸ್.ಐ ಮಹೇಶ ಮಾಳಿ,ಎ.ಎಸ್.ಐ ಮಣಿಮಾಲನ್ ಮೇಸ್ತ್ರೀ,ಸಿಬ್ಬಂದಿಗಳಾದ ಮಹ್ಮದ ಸಲಿಂ,ಕೊಟೇಶ್ ನಾಗರವಳ್ಳಿ ಅಣ್ಣಪ್ಪ ಬಡಿಗೇರ,ಬಸವರಾಜ ಲಮಾಣಿ, ಶಂಭುಲಿಂಗ ಜಾವೂರ, ಕಾಶಿರಾಯ ಕನ್ನಾಳ, ಸಂಗಮೇಶ ದೊಡ್ಡವಾಡ ,ಎ.ಎಚ.ಸಿ ನಾಗರಾಜ ಬೇಗಾರ ಮುಂಡಗೋಡ ಪೊಲೀಸ್ ಠಾಣೆ ಹಾಗೂ ಕಾರವಾರ ತಾಂತ್ರಿಕ ಸಿಡಿಆರ್ ವಿಭಾಗದ ಉದಯ ಗುನಗಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ವರದಿ: ಮಂಜುನಾಥ ಹರಿಜನ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…