ಮುಂಡಗೋಡ: ತಾಲೂಕಿನ ಕೊಳಗಿ ಸನಿಹದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಮಳಗಿಯ ವಿದ್ಯಾರ್ಥಿಗಳು ಪಿಕ್ನಿಕ್ ಗೆ ಹೋಗಿದ್ದ ಟ್ರ್ಯಾಕ್ಟರ್ ಪಲ್ಟಿ ಆದ ಘಟನೆ ಶುಕ್ರವಾರ ಸಂಭವಿಸಿದೆ..
ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಶಿರಸಿಯ ಟಿಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ಮಳಗಿ ಸಮೀಪದ ಕಲ್ಲಹಕ್ಕಲ ಗ್ರಾಮದ ಕಾವ್ಯಾ ಬ್ಯಾಡಗಿ (17) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಅಪಘಾತದಲ್ಲಿ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಗಾಯಗೊಂಡಿದ್ದು ಇದರಲ್ಲಿ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿನಿಯರನ್ನು ಶಿರಸಿಯ ಟಿಎಸ್ಎಸ್ ಆಸ್ಪತ್ರೆ ಹಾಗೂ ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.ಸಣ್ಣಪುಟ್ಟ ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಕೊಳಗಿ ಗ್ರಾಮದ ತೋಟವೊಂದಕ್ಕೆ ವಿದ್ಯಾರ್ಥಿಗಳನ್ನು ಪಿಕ್ನಿಕ್ ಗೆ ಕರೆದುಕೊಂಡು ಹೋಗಿ ಬರುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಅತಿಥಿ ಉಪನ್ಯಾಸಕನೇ ಟ್ರ್ಯಾಕ್ಟರ್ ಚಾಲನೆಯನ್ನು ಮಾಡುತ್ತಿದ್ದರು ಎಂದ ತಿಳಿದು ಬಂದಿದೆ.
ಇಷ್ಟೆಲ್ಲ ಅವಘಡಗಳಿಗೆ ಕಾರಣರಾದ ಕಾಲೇಜಿನ ಪ್ರಾಂಶುಪಾಲರು ಮತ್ತು ನಿಷ್ಕಾಳಜಿ ತೋರಿದ ಉಪನ್ಯಾಸಕರಿಗೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಪಾಲಕರು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವರದಿ: ಮಂಜುನಾಥ ಹರಿಜನ
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…