Latest

ನನಗಾಗಿ ಯಾರು ತ್ಯಾಗ ಮಾಡಿಲ್ಲಾ ನಾನೇ ತ್ಯಾಗ ಮಾಡಿದ್ದೇನೆ:ಸಚಿವ ಹೆಬ್ಬಾರ್

ಮುಂಡಗೋಡ: ಪಟ್ಟಣದ ಟೌನ್ ಹಾಲ್ ನಲ್ಲಿ ಮುಂಡಗೋಡ ಮಂಡಲದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಅಧ್ಯಕ್ಷರುಗಳು‌ ಹಾಗೂ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಅವರು ಮಾತನಾಡಿ ಚುನಾವಣಾ ರಣಕಹಳೆ ಮೊಳಗಿಸಿದರು.
ಕೆಲ ದಿನಗಳ ಹಿಂದೆ ಮಾಜಿ ಶಾಸಕರಾದ ವಿ.ಎಸ್. ಪಾಟೀಲ್ ಅವರು ನನಗೆ ಮತ್ತು ಮೂಲ ಬಿಜೆಪಿಗರಿಗೆ ಪಕ್ಷದಲ್ಲಿ ಯಾವುದೆ ಬೆಲೆ ಸಿಗುತ್ತಿಲ್ಲ ಮತ್ತು ನನ್ನ ತ್ಯಾಗದಿಂದ ಹೆಬ್ಬಾರ್ ಅವರಿಗೆ ಟಿಕೇಟ್ ಸಿಕ್ಕಿದೆ .ನನ್ನ ಯಾವುದೇ ಕೆಲಸಗಳು ಆಗುತ್ತಿಲ್ಲ ಹಾಗಾಗಿ ಕಾಂಗ್ರೇಸ್ ಪಕ್ಷವನ್ನು ಸೇರುತ್ತಿದ್ದೇನೆ ಎಂದು ಪತ್ರಿಕಾ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಇಂದು ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಅವರು ಮುಂಡಗೋಡ ಮಂಡಲದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ,ಶಕ್ತಿ ಕೇಂದ್ರ ಮತ್ತು ಬೂತ್ ಅಧ್ಯಕ್ಷರುಗಳ ಹಾಗೂ ಭೂತ ಉಸ್ತುವಾರಿಗಳು ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ನನಗಾಗಿ ಯಾರು ತ್ಯಾಗ ಮಾಡಿಲ್ಲ ನಾನೇ ಶಾಸಕನಾಗಿ ಆಯ್ಕೆಯಾದ ಮೇಲೆ 14 ತಿಂಗಳಲ್ಲಿಯೇ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ಗೆದ್ದು ಬಂದಿದ್ದೇನೆ.ನನಗಿಂತ ಮೊದಲೇ ವಿ.ಎಸ್. ಪಾಟೀಲ್ ಅವರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು ಜೊತೆಗೆ ಗೂಟದ ಕಾರನ್ನು ನೀಡಲಾಗಿತ್ತು ಇದು ನನ್ನ ತ್ಯಾಗದಿಂದ ಎಂದು ಹೇಳಿದರು.ಯಾರು ಯಾರಿಗೂ ಮೋಸ ಮಾಡಲು ಸಾಧ್ಯವಿಲ್ಲ. ನಮ್ಮ ನಡೆ ನುಡಿ ಎಲ್ಲವನ್ನೂ ನಿರ್ಧರಿಸುತ್ತದೆ.ನೇರ ದಿಟ್ಟ ನಿರಂತರವಾಗಿದ್ದಾಗ ಯಾವುದಕ್ಕೂ ಭಯ ಪಡುವ ಅಗತ್ಯವಿಲ್ಲಾ ಬಡವರನ್ನು ಕಾಪಾಡುವ ಶಕ್ತಿಯನ್ನು ಭಗವಂತನು ನೀಡಿದ್ದಾನೆ ಹಾಗಾಗಿ ಅವನೇ ನನ್ನನ್ನು ಕಾಪಾಡುತ್ತಾನೆ ಎಂದರು. ನಾನು ಅಧಿಕಾರಕ್ಕೆ ಬಂದಮೇಲೆ ಕ್ಷೇತ್ರದ ಅಭಿವೃದ್ಧಿಯ ಚಿತ್ರಣವೇ ಬದಲಾಗಿದೆ ರೈತರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಸುಮಾರು 800 ಕೋಟಿ ರೂಪಾಯಿಗಳ ಅನುದಾನದಲ್ಲಿ ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ,ಕರೋನಾ ಸಮಯದಲ್ಲಿ ಕ್ಷೇತ್ರದ ಜನರಿಗೆ ಪಕ್ಷಾತೀತವಾಗಿ ಹೆಬ್ಬಾರ್ ಫುಡ್ ಕೀಟಗಳನ್ನು ವಿತರಿಸಿದ್ದೇನೆ ಹೀಗೆ ಹತ್ತು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ ಎಂದರು.
ಪಟ್ಟಣದ ಅಮ್ಮಾಜಿ ಕೆರೆಯಿಂದ ಸಿಡ್ಲಗುಂಡಿ ಸೇತುವೆಯವರೆಗೆ 25 ಕೋಟಿ ರೂಪಾಯಿಗಳ ಅನುದಾನದಲ್ಲಿ ಹಾಗೂ ಬಂಕಾಪುರ ರಸ್ತೆಯನ್ನು ತಾಲೂಕಿನ ಗಡಿ ಪ್ರದೇಶದವರೆಗೆ ಸುಮಾರು 12 ಕೋಟಿ ರೂಪಾಯಿಗಳ ಅನುದಾನದಲ್ಲಿ ಮಂಜೂರಾದ ರಸ್ತೆ ಅಗಲೀಕರಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಜಾರಿಗೆ ಹಂತದಲ್ಲಿ ಇದೆ ಎಂದರು.
ಜಿಲ್ಲಾಧ್ಯಕ್ಷರಾದ ವೆಂಕಟೇಶ್ ನಾಯಕ ಮಾತನಾಡಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನಮ್ಮ ದೇಶ ಯಶಸ್ವಿಯಾಗಿ ಮುನ್ನಡೆಯುತ್ತಿದೆ.ದೇಶದ ರಕ್ಷಣಾ ವ್ಯವಸ್ಥೆಗೆ ಇಡೀ ವಿಶ್ವದಲ್ಲಿ ಅತಿ ಹೆಚ್ಚು ಬಲ ನೀಡಿದ ಸರ್ಕಾರ ನಮ್ಮದು ಎಂದು ಹೇಳಿದರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಲ್.ಟಿ.ಪಾಟೀಲ್,ನಿಕಟಪೂರ್ವ ಮಂಡಲಾಧ್ಯಕ್ಷರಾದ ಜಿ.ಎಸ್.ಕಾತೂರ, ಜಿಲ್ಲಾ ಉಪಾಧ್ಯಕ್ಷರಾದ ಅಶೋಕ ಛಲವಾದಿ,ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಮಹೇಶ ಹೊಸಕೊಪ್ಪ, ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಸುಮಾರು 2000ಕ್ಕಿಂತಲೂ ಅಧಿಕ ಜನರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ತಾಲೂಕಿನ ಹಲವಾರು ಕಾಂಗ್ರೇಸ್ ಕಾರ್ಯಕರ್ತರು ಪಕ್ಷವನ್ನು ತೊರೆದು ಬಿಜೆಪಿ ಪಕ್ಷವನ್ನು ಸೇರಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ನಾಗಭೂಷಣ ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರು ಎಸಳೆ,ಉಷಾ ಹೆಗಡೆ,ಗುರುಪ್ರಸಾದ ಹೆಗಡೆ, ಯುವ ನಾಯಕರಾದ ವಿವೇಕ್ ಹೆಬ್ಬಾರ್, ಜಿಲ್ಲಾ , ತಾಲೂಕೂ ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷರಾದ ರವಿ ಗೌಡ ಪಾಟೀಲ್‌, ಜಿಲ್ಲಾ ಉಪಾಧ್ಯಕ್ಷರಾದ ರೇಖಾ ಅಂಡಗಿ,ಜಿಲ್ಲಾ ಎಸ್. ಟಿ ಮೋರ್ಚಾ ಅಧ್ಯಕ್ಷರಾದ ಸಂತೋಷ್ ತಳವಾರ,ಉಮೇಶ ಬಿಜಾಪುರ,ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಪಾಟೀಲ್,ವಿಠ್ಠಲ್ ಬಾಳಂಬಿಡ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಜಯಸುಧಾ ಭೋವಿ,ಉಪಾಧ್ಯಕ್ಷರಾದ ಶ್ರೀಕಾಂತ್ ಸಾನು, ಮಂಡಲದ ವಿವಿಧ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿಕೇಂದ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರು ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago