Latest

ನನಗಾಗಿ ಯಾರು ತ್ಯಾಗ ಮಾಡಿಲ್ಲಾ ನಾನೇ ತ್ಯಾಗ ಮಾಡಿದ್ದೇನೆ:ಸಚಿವ ಹೆಬ್ಬಾರ್

ಮುಂಡಗೋಡ: ಪಟ್ಟಣದ ಟೌನ್ ಹಾಲ್ ನಲ್ಲಿ ಮುಂಡಗೋಡ ಮಂಡಲದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಅಧ್ಯಕ್ಷರುಗಳು‌ ಹಾಗೂ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಅವರು ಮಾತನಾಡಿ ಚುನಾವಣಾ ರಣಕಹಳೆ ಮೊಳಗಿಸಿದರು.
ಕೆಲ ದಿನಗಳ ಹಿಂದೆ ಮಾಜಿ ಶಾಸಕರಾದ ವಿ.ಎಸ್. ಪಾಟೀಲ್ ಅವರು ನನಗೆ ಮತ್ತು ಮೂಲ ಬಿಜೆಪಿಗರಿಗೆ ಪಕ್ಷದಲ್ಲಿ ಯಾವುದೆ ಬೆಲೆ ಸಿಗುತ್ತಿಲ್ಲ ಮತ್ತು ನನ್ನ ತ್ಯಾಗದಿಂದ ಹೆಬ್ಬಾರ್ ಅವರಿಗೆ ಟಿಕೇಟ್ ಸಿಕ್ಕಿದೆ .ನನ್ನ ಯಾವುದೇ ಕೆಲಸಗಳು ಆಗುತ್ತಿಲ್ಲ ಹಾಗಾಗಿ ಕಾಂಗ್ರೇಸ್ ಪಕ್ಷವನ್ನು ಸೇರುತ್ತಿದ್ದೇನೆ ಎಂದು ಪತ್ರಿಕಾ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಇಂದು ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಅವರು ಮುಂಡಗೋಡ ಮಂಡಲದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ,ಶಕ್ತಿ ಕೇಂದ್ರ ಮತ್ತು ಬೂತ್ ಅಧ್ಯಕ್ಷರುಗಳ ಹಾಗೂ ಭೂತ ಉಸ್ತುವಾರಿಗಳು ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ನನಗಾಗಿ ಯಾರು ತ್ಯಾಗ ಮಾಡಿಲ್ಲ ನಾನೇ ಶಾಸಕನಾಗಿ ಆಯ್ಕೆಯಾದ ಮೇಲೆ 14 ತಿಂಗಳಲ್ಲಿಯೇ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ಗೆದ್ದು ಬಂದಿದ್ದೇನೆ.ನನಗಿಂತ ಮೊದಲೇ ವಿ.ಎಸ್. ಪಾಟೀಲ್ ಅವರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು ಜೊತೆಗೆ ಗೂಟದ ಕಾರನ್ನು ನೀಡಲಾಗಿತ್ತು ಇದು ನನ್ನ ತ್ಯಾಗದಿಂದ ಎಂದು ಹೇಳಿದರು.ಯಾರು ಯಾರಿಗೂ ಮೋಸ ಮಾಡಲು ಸಾಧ್ಯವಿಲ್ಲ. ನಮ್ಮ ನಡೆ ನುಡಿ ಎಲ್ಲವನ್ನೂ ನಿರ್ಧರಿಸುತ್ತದೆ.ನೇರ ದಿಟ್ಟ ನಿರಂತರವಾಗಿದ್ದಾಗ ಯಾವುದಕ್ಕೂ ಭಯ ಪಡುವ ಅಗತ್ಯವಿಲ್ಲಾ ಬಡವರನ್ನು ಕಾಪಾಡುವ ಶಕ್ತಿಯನ್ನು ಭಗವಂತನು ನೀಡಿದ್ದಾನೆ ಹಾಗಾಗಿ ಅವನೇ ನನ್ನನ್ನು ಕಾಪಾಡುತ್ತಾನೆ ಎಂದರು. ನಾನು ಅಧಿಕಾರಕ್ಕೆ ಬಂದಮೇಲೆ ಕ್ಷೇತ್ರದ ಅಭಿವೃದ್ಧಿಯ ಚಿತ್ರಣವೇ ಬದಲಾಗಿದೆ ರೈತರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಸುಮಾರು 800 ಕೋಟಿ ರೂಪಾಯಿಗಳ ಅನುದಾನದಲ್ಲಿ ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ,ಕರೋನಾ ಸಮಯದಲ್ಲಿ ಕ್ಷೇತ್ರದ ಜನರಿಗೆ ಪಕ್ಷಾತೀತವಾಗಿ ಹೆಬ್ಬಾರ್ ಫುಡ್ ಕೀಟಗಳನ್ನು ವಿತರಿಸಿದ್ದೇನೆ ಹೀಗೆ ಹತ್ತು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ ಎಂದರು.
ಪಟ್ಟಣದ ಅಮ್ಮಾಜಿ ಕೆರೆಯಿಂದ ಸಿಡ್ಲಗುಂಡಿ ಸೇತುವೆಯವರೆಗೆ 25 ಕೋಟಿ ರೂಪಾಯಿಗಳ ಅನುದಾನದಲ್ಲಿ ಹಾಗೂ ಬಂಕಾಪುರ ರಸ್ತೆಯನ್ನು ತಾಲೂಕಿನ ಗಡಿ ಪ್ರದೇಶದವರೆಗೆ ಸುಮಾರು 12 ಕೋಟಿ ರೂಪಾಯಿಗಳ ಅನುದಾನದಲ್ಲಿ ಮಂಜೂರಾದ ರಸ್ತೆ ಅಗಲೀಕರಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಜಾರಿಗೆ ಹಂತದಲ್ಲಿ ಇದೆ ಎಂದರು.
ಜಿಲ್ಲಾಧ್ಯಕ್ಷರಾದ ವೆಂಕಟೇಶ್ ನಾಯಕ ಮಾತನಾಡಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನಮ್ಮ ದೇಶ ಯಶಸ್ವಿಯಾಗಿ ಮುನ್ನಡೆಯುತ್ತಿದೆ.ದೇಶದ ರಕ್ಷಣಾ ವ್ಯವಸ್ಥೆಗೆ ಇಡೀ ವಿಶ್ವದಲ್ಲಿ ಅತಿ ಹೆಚ್ಚು ಬಲ ನೀಡಿದ ಸರ್ಕಾರ ನಮ್ಮದು ಎಂದು ಹೇಳಿದರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಲ್.ಟಿ.ಪಾಟೀಲ್,ನಿಕಟಪೂರ್ವ ಮಂಡಲಾಧ್ಯಕ್ಷರಾದ ಜಿ.ಎಸ್.ಕಾತೂರ, ಜಿಲ್ಲಾ ಉಪಾಧ್ಯಕ್ಷರಾದ ಅಶೋಕ ಛಲವಾದಿ,ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಮಹೇಶ ಹೊಸಕೊಪ್ಪ, ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಸುಮಾರು 2000ಕ್ಕಿಂತಲೂ ಅಧಿಕ ಜನರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ತಾಲೂಕಿನ ಹಲವಾರು ಕಾಂಗ್ರೇಸ್ ಕಾರ್ಯಕರ್ತರು ಪಕ್ಷವನ್ನು ತೊರೆದು ಬಿಜೆಪಿ ಪಕ್ಷವನ್ನು ಸೇರಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ನಾಗಭೂಷಣ ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರು ಎಸಳೆ,ಉಷಾ ಹೆಗಡೆ,ಗುರುಪ್ರಸಾದ ಹೆಗಡೆ, ಯುವ ನಾಯಕರಾದ ವಿವೇಕ್ ಹೆಬ್ಬಾರ್, ಜಿಲ್ಲಾ , ತಾಲೂಕೂ ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷರಾದ ರವಿ ಗೌಡ ಪಾಟೀಲ್‌, ಜಿಲ್ಲಾ ಉಪಾಧ್ಯಕ್ಷರಾದ ರೇಖಾ ಅಂಡಗಿ,ಜಿಲ್ಲಾ ಎಸ್. ಟಿ ಮೋರ್ಚಾ ಅಧ್ಯಕ್ಷರಾದ ಸಂತೋಷ್ ತಳವಾರ,ಉಮೇಶ ಬಿಜಾಪುರ,ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಪಾಟೀಲ್,ವಿಠ್ಠಲ್ ಬಾಳಂಬಿಡ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಜಯಸುಧಾ ಭೋವಿ,ಉಪಾಧ್ಯಕ್ಷರಾದ ಶ್ರೀಕಾಂತ್ ಸಾನು, ಮಂಡಲದ ವಿವಿಧ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿಕೇಂದ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರು ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

3 minutes ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

7 minutes ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

19 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

24 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

24 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

24 hours ago