Latest

ಗೆಳತಿಯನ್ನು ಕೊಂದು 4 ದಿನ ಮೆಡಿಕಲ್ ಶಾಪ್‌ನಲ್ಲಿ ಇಟ್ಟಿದ್ದ ಯುವಕ!

ಮೆಡಿಕಲ್ ಸ್ಟೋರ್ನ ಮಾಲೀಕ ಆಶಿಶ್ ಸಾಹು ಹಣದ ಸಮಸ್ಯೆಯಿಂದ ತನ್ನ ಗೆಳತಿ ಪ್ರಿಯಾಂಕಾಳನ್ನು ಕೊಂದು ಶವವನ್ನು ನಾಲ್ಕು ದಿನಗಳ ಕಾಲ ತನ್ನ ಅಂಗಡಿಯಲ್ಲಿಟ್ಟು ವಿಲೇವಾರಿ ಮಾಡಲು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದ ಘಟನೆ ಛತ್ತೀಸ್ಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತದೇಹವನ್ನು ಬಟ್ಟೆಯೊಂದರಲ್ಲಿ ಸುತ್ತಿ ಕಾರಿನಲ್ಲಿ ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಸಾಹು ಮತ್ತು ಭಿಲಾಯಿ ನಿವಾಸಿ ಪ್ರಿಯಾಂಕಾ ನಡುವೆ ಹಣಕಾಸಿನ ವಿಚಾರವಾಗಿ ಕೆಲ ಸಮಯದಿಂದ ಜಗಳ ನಡೆಯುತ್ತಿತ್ತು. ಪ್ರಿಯಾಂಕಾ ಬಿಲಾಸ್ಪುರದ ಹಾಸ್ಟೆಲ್ನಲ್ಲಿ ರಾಜ್ಯ ನಾಗರಿಕ ಸೇವಾ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು.
‘ಪ್ರಿಯಾಂಕಾ ಮತ್ತು ಆಶಿಶ್ ಸಾಹು ಮಧ್ಯೆ ಆತ್ಮಿಯತೆ ಬೆಳೆಯಿತು. ನಂತರ ಇಬ್ಬರು ಒಟ್ಟಿಗೆ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರು. ಷೇರು ಮಾರುಕಟ್ಟೆಯಲ್ಲಿನ ನಷ್ಟದ ನಂತರ ತನ್ನಿಂದ ಸಾಲ ಪಡೆದಿದ್ದ 11 ಲಕ್ಷ ರೂಪಾಯಿಯನ್ನು ಹಿಂದಿರುಗಿಸುವಂತೆ ಆಶಿಶ್ ಗೆ ಒತ್ತಡ ಹೇರುತ್ತಿದ್ದಳು ಎಂದು ಬಿಲಾಸ್ಪುರದ ಹಿರಿಯ ಪೊಲೀಸ್ ಅಧೀಕ್ಷಕ ಪಾರುಲ್ ಮಾಥುರ್ ತಿಳಿಸಿದರು.
ಬಿಲಾಸ್ಪುರದ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಿಯಾಂಕಾ ಕುಟುಂಬವು ನಾಪತ್ತೆ ದೂರು ದಾಖಲಿಸಿತ್ತು.
ನಂತರ ಪೊಲೀಸರು ಸಾಹು ಪ್ರಮುಖ ಆರೋಪಿ ಎಂದು ಶಂಕಿಸಿದ್ದು ಆತನ ಮೇಲೆ ಕಣ್ಣಿಟ್ಟಿತ್ತು. ಕುಟುಂಬದ ಸದಸ್ಯರೊಬ್ಬರು ಪ್ರಿಯಾಂಕಾ ಮತ್ತು ಸಾಹು ಇಬ್ಬರು ಪರಿಚಿತರು. ಅಲ್ಲದೆ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು ಎಂದು ಬಹಿರಂಗಪಡಿಸಿದರು.
ಸಾಹು ಅಂಗಡಿ ಮತ್ತು ನಿವಾಸದ ಸುತ್ತಮುತ್ತಲಿನ ಸಿಸಿಟಿವಿಯ ದೃಶ್ಯಗಳ ಜೊತೆಗೆ ಅವನ ಚಲನವಲನವನ್ನು ಸೂಕ್ಷ್ಮವಾಗಿ ಗಮನಿಸಿ ನವೆಂಬರ್ 14ರಂದು ಪ್ರಿಯಾಂಕಾಳನ್ನು ಕೊಂದ ಸಾಹು ದೇಹವನ್ನು ಮೆಡಿಕಲ್ ಶಾಪ್ ನಲ್ಲಿ ಇಟ್ಟಿದ್ದು. ಅಲ್ಲದೆ ಶವ ವಿಲೇವಾರಿಗೆ ಸಮಯ ಕಾಯುತ್ತಿದ್ದನು. ಆತ ದೇಹವನ್ನು ಸಾಗಿಸುತ್ತಿದ್ದಾಗ ಆತನನ್ನು ಬಂಧಿಸಲಾಯಿತು ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಪ್ರದೀಪ್ ಆರ್ಯ ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೀಟರ್ ಬಡ್ಡಿ ದಂದೆಕೋರನ ಮೇಲೆ ಡೆಡ್ಲಿ ಅಟ್ಯಾಕ್, ಮರ್ಡರ್ : ಆರೋಪಿಗಳ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್‌ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್…

6 hours ago

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

17 hours ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

17 hours ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

1 day ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

1 day ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

1 day ago