Latest

ಚಿನ್ನದ ಅಂಗಡಿಯಲ್ಲಿ ಕಳ್ಳತನ – ಕರ್ತವ್ಯ ಲೋಪ ಕಾರಣ ಮೂವರು ಕಾನ್ಸ್‌ಟೇಬಲ್‌ ಅಮಾನತು

ದಾವಣಗೆರೆ: ದಾವಣಗೆರೆಯಲ್ಲಿ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಮೂವರು ಪೊಲೀಸ್ ಕಾನ್ಸ್‌ಟೇಬಲ್‌ಗಳನ್ನು ಅಮಾನತು ಮಾಡುವ ಆದೇಶ ಹೊರಡಿಸಲಾಗಿದೆ.

ಜಾನುವರಿ 29ರಂದು ದಾವಣಗೆರೆಯ ಮಂಡಿಪೇಟೆಯಲ್ಲಿರುವ ಚಿನ್ನದ ಅಂಗಡಿಯೊಂದರಲ್ಲಿ 18 ಲಕ್ಷ ರೂಪಾಯಿ ಮೌಲ್ಯದ ಆಭರಣಗಳು ಕಳ್ಳತನವಾಗಿದ್ದವು. ಈ ಪ್ರಕರಣದ ರಾತ್ರಿ ಗಸ್ತು ಸೇವೆಗಾಗಿ ನಿಯೋಜಿಸಲಾದ ಮೂವರು ಕಾನ್ಸ್‌ಟೇಬಲ್‌ಗಳು ತಮ್ಮ ಕರ್ತವ್ಯದಲ್ಲಿ ಲೋಪ ತೋರಿರುವುದು ಇಲಾಖೆ ತನಿಖೆಯಲ್ಲಿ ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ದಾವಣಗೆರೆ ಪೊಲೀಸ್ ಠಾಣೆಯ ಟಿ. ಮಂಜಪ್ಪ, ಪಿ. ಆಕಾಶ್ ಹಾಗೂ ಆರ್.ಎಂ.ಸಿ ಠಾಣೆಯ ಹೆಚ್. ಚಂದ್ರಶೇಖರ್ ಅವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ನಿರ್ವಹಣೆಯಲ್ಲಿ ಗಂಭೀರವಾದ ನಿರ್ಲಕ್ಷ್ಯ ತೋರಿದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ಕ್ರಮಗಳನ್ನು ಕೈಗೊಂಡಿದ್ದಾರೆ.

nazeer ahamad

Recent Posts

5 ದಿನದಲ್ಲೇ ಮದುವೆಗೆ ಬಿಗ್ ಟ್ವಿಸ್ಟ್: ‘ಗಂಡ ಬೇಡ’ ಎಂದ ನವವಧು, ತಾಳಿ-ಕಾಲು ಚೈನು ಬಿಚ್ಚಿಟ್ಟು ತವರಿಗೆ!

ಮದುವೆ ಎನ್ನುವುದು ಜೀವನಪೂರ್ತಿ ಜೊತೆಯಾಗಿ ಸಾಗುವ ಬಾಂಧವ್ಯ ಎಂಬ ನಂಬಿಕೆ ಇದೆ. ಆದರೆ ಸಾಮಾಜಿಕ ಜಾಲತಾಣಗಳ ಮೂಲಕ ಆರಂಭವಾಗುವ ಕೆಲವು…

13 minutes ago

ಎನ್‌ಸಿಆರ್ ಪ್ರಕರಣ ಇತ್ಯರ್ಥಕ್ಕೆ ₹1 ಲಕ್ಷ ಲಂಚ: ಲೋಕಾಯುಕ್ತ ಬಲೆಗೆ ಹಳೇಬೀಡು ಪಿಎಸ್‌ಐ

ಹಾಸನ: ಎನ್‌ಸಿಆರ್ ಪ್ರಕರಣವೊಂದನ್ನು ಇತ್ಯರ್ಥಪಡಿಸಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಹಳೇಬೀಡು ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್…

4 hours ago

ಹೋಟೆಲ್ ರೂಂನಲ್ಲಿ ಮಹಿಳೆಯೊಂದಿಗೆ ಅಧಿಕಾರಿಯಿದ್ದ ವಿಡಿಯೋ ವೈರಲ್: ವಿದ್ಯುತ್ ಇಲಾಖೆ ತನಿಖೆ!

ಲಖನೌ: ಸರ್ಕಾರಿ ಅಧಿಕಾರಿಯೊಬ್ಬರು ಮಹಿಳೆಯೊಂದಿಗೆ ಹೋಟೆಲ್ ಕೊಠಡಿಯಲ್ಲಿ ಇರುವ ದೃಶ್ಯ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೀಗ…

16 hours ago

ಲಾಡ್ಜ್‌ನಲ್ಲಿ ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆ: ಆತ್ಮಹತ್ಯೆಗೆ ಕಾರಣ ನಿಗೂಢ

ಗೌರಿಬಿದನೂರು: ನಗರದ ಬೈಪಾಸ್ ರಸ್ತೆಯಲ್ಲಿರುವ ತೇಜಸ್ ಕಂಫರ್ಟ್ ಲಾಡ್ಜ್‌ನಲ್ಲಿ ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಒಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ…

18 hours ago

ನಾಲ್ಕನೇ ಬಾರಿಯೂ ಹೆಣ್ಣು ಮಗು: ಬಾಣಂತಿ ಮಮತಾಳ ದಾರುಣ ಅಂತ್ಯ, ಅತ್ತೆ ಮನೆಯ ಕಿರುಕುಳ ಆರೋಪ!

ನಲಗೊಂಡ: ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ಮಹಿಳೆಯೊಬ್ಬರು ಕೌಟುಂಬಿಕ ಒತ್ತಡ ಹಾಗೂ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪ ಕೇಳಿಬಂದಿದ್ದು, ಕೊನೆಗೆ ಬಾಣಂತಿಯೊಬ್ಬರು…

1 day ago

ಆಸ್ತಿ ಆಸೆಗೆ ತಂದೆಯನ್ನೇ ಮುಗಿಸಲು ಸಂಚು; ನಿದ್ರೆ ಮಾತ್ರೆ ಕೊಟ್ಟು ಮಗನಿಂದ ಕತ್ತು ಹಿಸುಕಿ ಕೊಲೆ!

ಕೋಲಾರ: ಹಣ-ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆ ಮಾಡಿರುವ ಆರೋಪದ ಪ್ರಕರಣ ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ಚನ್ನಸಂದ್ರ ಗ್ರಾಮದಲ್ಲಿ ಬೆಳಕಿಗೆ…

1 day ago