ದಾವಣಗೆರೆ: ದಾವಣಗೆರೆಯಲ್ಲಿ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಮೂವರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡುವ ಆದೇಶ ಹೊರಡಿಸಲಾಗಿದೆ.
ಜಾನುವರಿ 29ರಂದು ದಾವಣಗೆರೆಯ ಮಂಡಿಪೇಟೆಯಲ್ಲಿರುವ ಚಿನ್ನದ ಅಂಗಡಿಯೊಂದರಲ್ಲಿ 18 ಲಕ್ಷ ರೂಪಾಯಿ ಮೌಲ್ಯದ ಆಭರಣಗಳು ಕಳ್ಳತನವಾಗಿದ್ದವು. ಈ ಪ್ರಕರಣದ ರಾತ್ರಿ ಗಸ್ತು ಸೇವೆಗಾಗಿ ನಿಯೋಜಿಸಲಾದ ಮೂವರು ಕಾನ್ಸ್ಟೇಬಲ್ಗಳು ತಮ್ಮ ಕರ್ತವ್ಯದಲ್ಲಿ ಲೋಪ ತೋರಿರುವುದು ಇಲಾಖೆ ತನಿಖೆಯಲ್ಲಿ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ದಾವಣಗೆರೆ ಪೊಲೀಸ್ ಠಾಣೆಯ ಟಿ. ಮಂಜಪ್ಪ, ಪಿ. ಆಕಾಶ್ ಹಾಗೂ ಆರ್.ಎಂ.ಸಿ ಠಾಣೆಯ ಹೆಚ್. ಚಂದ್ರಶೇಖರ್ ಅವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ನಿರ್ವಹಣೆಯಲ್ಲಿ ಗಂಭೀರವಾದ ನಿರ್ಲಕ್ಷ್ಯ ತೋರಿದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ಕ್ರಮಗಳನ್ನು ಕೈಗೊಂಡಿದ್ದಾರೆ.
ಮದುವೆ ಎನ್ನುವುದು ಜೀವನಪೂರ್ತಿ ಜೊತೆಯಾಗಿ ಸಾಗುವ ಬಾಂಧವ್ಯ ಎಂಬ ನಂಬಿಕೆ ಇದೆ. ಆದರೆ ಸಾಮಾಜಿಕ ಜಾಲತಾಣಗಳ ಮೂಲಕ ಆರಂಭವಾಗುವ ಕೆಲವು…
ಹಾಸನ: ಎನ್ಸಿಆರ್ ಪ್ರಕರಣವೊಂದನ್ನು ಇತ್ಯರ್ಥಪಡಿಸಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಹಳೇಬೀಡು ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್…
ಲಖನೌ: ಸರ್ಕಾರಿ ಅಧಿಕಾರಿಯೊಬ್ಬರು ಮಹಿಳೆಯೊಂದಿಗೆ ಹೋಟೆಲ್ ಕೊಠಡಿಯಲ್ಲಿ ಇರುವ ದೃಶ್ಯ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೀಗ…
ಗೌರಿಬಿದನೂರು: ನಗರದ ಬೈಪಾಸ್ ರಸ್ತೆಯಲ್ಲಿರುವ ತೇಜಸ್ ಕಂಫರ್ಟ್ ಲಾಡ್ಜ್ನಲ್ಲಿ ಎಸ್ಬಿಐ ಬ್ಯಾಂಕ್ ಮ್ಯಾನೇಜರ್ ಒಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ…
ನಲಗೊಂಡ: ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ಮಹಿಳೆಯೊಬ್ಬರು ಕೌಟುಂಬಿಕ ಒತ್ತಡ ಹಾಗೂ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪ ಕೇಳಿಬಂದಿದ್ದು, ಕೊನೆಗೆ ಬಾಣಂತಿಯೊಬ್ಬರು…
ಕೋಲಾರ: ಹಣ-ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆ ಮಾಡಿರುವ ಆರೋಪದ ಪ್ರಕರಣ ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ಚನ್ನಸಂದ್ರ ಗ್ರಾಮದಲ್ಲಿ ಬೆಳಕಿಗೆ…