Latest

ಚಿನ್ನದ ಅಂಗಡಿಯಲ್ಲಿ ಕಳ್ಳತನ – ಕರ್ತವ್ಯ ಲೋಪ ಕಾರಣ ಮೂವರು ಕಾನ್ಸ್‌ಟೇಬಲ್‌ ಅಮಾನತು

ದಾವಣಗೆರೆ: ದಾವಣಗೆರೆಯಲ್ಲಿ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಮೂವರು ಪೊಲೀಸ್ ಕಾನ್ಸ್‌ಟೇಬಲ್‌ಗಳನ್ನು ಅಮಾನತು ಮಾಡುವ ಆದೇಶ ಹೊರಡಿಸಲಾಗಿದೆ.

ಜಾನುವರಿ 29ರಂದು ದಾವಣಗೆರೆಯ ಮಂಡಿಪೇಟೆಯಲ್ಲಿರುವ ಚಿನ್ನದ ಅಂಗಡಿಯೊಂದರಲ್ಲಿ 18 ಲಕ್ಷ ರೂಪಾಯಿ ಮೌಲ್ಯದ ಆಭರಣಗಳು ಕಳ್ಳತನವಾಗಿದ್ದವು. ಈ ಪ್ರಕರಣದ ರಾತ್ರಿ ಗಸ್ತು ಸೇವೆಗಾಗಿ ನಿಯೋಜಿಸಲಾದ ಮೂವರು ಕಾನ್ಸ್‌ಟೇಬಲ್‌ಗಳು ತಮ್ಮ ಕರ್ತವ್ಯದಲ್ಲಿ ಲೋಪ ತೋರಿರುವುದು ಇಲಾಖೆ ತನಿಖೆಯಲ್ಲಿ ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ದಾವಣಗೆರೆ ಪೊಲೀಸ್ ಠಾಣೆಯ ಟಿ. ಮಂಜಪ್ಪ, ಪಿ. ಆಕಾಶ್ ಹಾಗೂ ಆರ್.ಎಂ.ಸಿ ಠಾಣೆಯ ಹೆಚ್. ಚಂದ್ರಶೇಖರ್ ಅವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ನಿರ್ವಹಣೆಯಲ್ಲಿ ಗಂಭೀರವಾದ ನಿರ್ಲಕ್ಷ್ಯ ತೋರಿದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ಕ್ರಮಗಳನ್ನು ಕೈಗೊಂಡಿದ್ದಾರೆ.

nazeer ahamad

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

21 minutes ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

22 minutes ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

11 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

11 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

11 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

11 hours ago