ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದ ಹಳೆಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಇತ್ತೀಚೆಗೆ ಕಳ್ಳತನದ ಘಟನೆ ನಡೆದಿದೆ. ತಡರಾತ್ರಿ ವೇಳೆ ಖದೀಮರು ರಸ್ತೆ ಬದಿಯ ಟೀ ಸ್ಟಾಲ್ ಮತ್ತು ಹೋಟೆಲ್ಗೆ ಬೀಗ ಮುರಿದು ನುಗ್ಗಿದ್ದು, ಹಲವು ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.
ಅಕುಲ್ ಟೀ ಸ್ಟಾಲ್ ಹಾಗೂ ಸಮೀಪದ ಹೋಟೆಲ್ಗಾಗಿ ಗುರಿಯಾಗಿಸಿದ ಕಳ್ಳರು, ಗಲ್ಲಾ ಪೆಟ್ಟಿಗೆಯಲ್ಲಿದ್ದ ನಗದು ಹಣ, ಸಿಗರೇಟ್ ಪ್ಯಾಕೆಟ್ಗಳು ಹಾಗೂ ಚಾಕೊಲೇಟ್ಗಳನ್ನು ಎತ್ತಿಕೊಂಡು ಹೋಗಿದ್ದಾರೆ. ಆಶ್ಚರ್ಯಕರವಾಗಿ, ಹೋಟೆಲ್ ಒಳಗೆ ನುಗ್ಗಿದ ಖದೀಮರು ಅಡುಗೆ ಮಾಡಿ ಊಟ ಮಾಡಿ ಹೋಗಿರುವುದು ಗಮನ ಸೆಳೆದಿದೆ.
ಘಟನೆಯ ಮಾಹಿತಿ ಪಡೆದ ಮದ್ದೂರು ಟೌನ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಸಿಸಿ ಕ್ಯಾಮೆರಾ ದೃಶ್ಯಾವಳಿಗಳ ಆಧಾರದಲ್ಲಿ ತನಿಖೆ ಮುಂದುವರೆಸಿದ್ದಾರೆ. ಸ್ಥಳೀಯ ವ್ಯಾಪಾರಿಗಳು ಈ ಪ್ರಕರಣದಿಂದ ಆತಂಕಕ್ಕೊಳಗಾಗಿದ್ದು, ರಾತ್ರಿಯ ವೇಳೆ ಪೊಲೀಸ್ ಪೇಟ್ರೋಲಿಂಗ್ ಹೆಚ್ಚಿಸಬೇಕೆಂಬ ಬೇಡಿಕೆ ವ್ಯಕ್ತಪಡಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…