Latest

ಶಾಲೆಯ ಸಿಸಿ ಕ್ಯಾಮರಾ ಕಳ್ಳತನ; ಇದೂವರೆಗೂ ಪ್ರಕರಣ ದಾಖಲಿಸದ ಮುಖ್ಯಾಧ್ಯಾಪಕರು.!

ಮುಂಡಗೋಡ: ತಾಲೂಕಿನ ಶ್ರೀಮತಿ ದೇವಕ್ಕ ಛಾಯಪ್ಪ ಕಲಾಲ್ ಸರಕಾರಿ ಪ್ರೌಢಶಾಲೆ ಚಿಗಳ್ಳಿಯಲ್ಲಿ ಮೂರು ಸಿಸಿ ಕ್ಯಾಮೆರಾಗಳು ಕಳ್ಳತನವಾಗಿವೆ.
ಈ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಪ್ರೇಮಿಗಳ ಸಹಾಯದಿಂದ ಕಳೆದು ಎರಡು ವರ್ಷಗಳ ಹಿಂದೆ ಆರು ಸಿ ಸಿ ಕ್ಯಾಮೆರಾ ಗಳನ್ನು ಶಾಲೆಯ ಭದ್ರತೆ ದೃಷ್ಟಿಯಿಂದ ಅಳವಡಿಸಲಾಗಿತ್ತು. ಆದರೆ ಕೆಲವು ದಿನಗಳ ಹಿಂದೆ ಗುಡುಗು ಸಹಿತ ಮಳೆಯಾಗಿದ್ದರಿಂದ ಮುನ್ನೆಚ್ಚರಿಕೆಯಾಗಿ ಸಿಸಿ ಕ್ಯಾಮೆರಾ ಗಳು ಹಾಳಾಗಬಾರದು ಎಂದು ಅವುಗಳನ್ನು ಆಫ್ ಮಾಡಲಾಗಿತ್ತಂತೆ. ಈ ಸಿಸಿ ಕ್ಯಾಮೆರಾ ಗಳು ಆಫ್ ಆದ ಬಗ್ಗೆ ತಿಳಿದುಕೊಂಡವರೇ ಈ ರೀತಿ ಮಾಡಿದ್ದಾರೆ ಎಂದು ಶಿಕ್ಷಣ ಪ್ರೇಮಿಗಳು ತಮ್ಮ ಅಸಮಾಧಾನವನ್ನು ಹೊರಗೆ ಹಾಕಿದ್ದಾರೆ.
‌ ‌ ಇನ್ನೂ ಈ ಸಿಸಿ ಕ್ಯಾಮೆರಾ ಗಳು ರವಿವಾರವೇ ಕಳ್ಳತನವಾಗಿದ್ದು ಇದುವರೆಗೂ ಶಾಲೆಯ ಮುಖ್ಯ ಶಿಕ್ಷಕರು ಪೊಲೀಸ್ ಪ್ರಕರಣ ದಾಖಲಿಸದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ.
ಈ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಿ ಇದೂವರೆಗೂ ಪ್ರಕರಣ ಯಾಕೆ ದಾಖಲಿಸಿಲ್ಲ ಮತ್ತು ತಾವು ರಜಾ ಅವಧಿಯಲ್ಲಿಯೂ ಶಾಲೆಯಲ್ಲಿ ಇರಬೇಕು ಎಂದು ಕೇಳಿದಾಗ ನಾನು ಗುರುವಾರ ಪ್ರಕರಣ ದಾಖಲಿಸುತ್ತೇನೆ ನಾನು ಶಾಲೆಗೆ ಬರುವ ಬಗ್ಗೆ ಬಿಡುವ ಬಗ್ಗೆ ನೀವು ಕೇಳಬೇಡಿ ಎನ್ನುತ್ತಾರೆ ಶಾಲೆಯ ಆಸ್ತಿಯನ್ನು ರಕ್ಷಿಸಬೇಕಾದ ಶಾಲೆಯ ಮುಖ್ಯ ಶಿಕ್ಷಕರೆ ಈ ರೀತಿಯಾಗಿ ಬೇಜವಾಬ್ದಾರಿ ಉತ್ತರ ನೀಡಿದರೆ ಹೇಗೆ.?ಈ ಬಗ್ಗೆ ಇಲಾಖೆಯ ಮೇಲಧಿಕಾರಿಗಳು ಯಾವ ರೀತಿಯ ಕ್ರಮವನ್ನು ತೆಗೆದುಕೊಳ್ಳುತ್ತಾರೆಂದು ಕಾಯ್ದು ನೋಡಬೇಕಾಗಿದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

13 hours ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago