ಮುಂಡಗೋಡ: ತಾಲೂಕಿನ ಶ್ರೀಮತಿ ದೇವಕ್ಕ ಛಾಯಪ್ಪ ಕಲಾಲ್ ಸರಕಾರಿ ಪ್ರೌಢಶಾಲೆ ಚಿಗಳ್ಳಿಯಲ್ಲಿ ಮೂರು ಸಿಸಿ ಕ್ಯಾಮೆರಾಗಳು ಕಳ್ಳತನವಾಗಿವೆ.
ಈ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಪ್ರೇಮಿಗಳ ಸಹಾಯದಿಂದ ಕಳೆದು ಎರಡು ವರ್ಷಗಳ ಹಿಂದೆ ಆರು ಸಿ ಸಿ ಕ್ಯಾಮೆರಾ ಗಳನ್ನು ಶಾಲೆಯ ಭದ್ರತೆ ದೃಷ್ಟಿಯಿಂದ ಅಳವಡಿಸಲಾಗಿತ್ತು. ಆದರೆ ಕೆಲವು ದಿನಗಳ ಹಿಂದೆ ಗುಡುಗು ಸಹಿತ ಮಳೆಯಾಗಿದ್ದರಿಂದ ಮುನ್ನೆಚ್ಚರಿಕೆಯಾಗಿ ಸಿಸಿ ಕ್ಯಾಮೆರಾ ಗಳು ಹಾಳಾಗಬಾರದು ಎಂದು ಅವುಗಳನ್ನು ಆಫ್ ಮಾಡಲಾಗಿತ್ತಂತೆ. ಈ ಸಿಸಿ ಕ್ಯಾಮೆರಾ ಗಳು ಆಫ್ ಆದ ಬಗ್ಗೆ ತಿಳಿದುಕೊಂಡವರೇ ಈ ರೀತಿ ಮಾಡಿದ್ದಾರೆ ಎಂದು ಶಿಕ್ಷಣ ಪ್ರೇಮಿಗಳು ತಮ್ಮ ಅಸಮಾಧಾನವನ್ನು ಹೊರಗೆ ಹಾಕಿದ್ದಾರೆ.
ಇನ್ನೂ ಈ ಸಿಸಿ ಕ್ಯಾಮೆರಾ ಗಳು ರವಿವಾರವೇ ಕಳ್ಳತನವಾಗಿದ್ದು ಇದುವರೆಗೂ ಶಾಲೆಯ ಮುಖ್ಯ ಶಿಕ್ಷಕರು ಪೊಲೀಸ್ ಪ್ರಕರಣ ದಾಖಲಿಸದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ.
ಈ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಿ ಇದೂವರೆಗೂ ಪ್ರಕರಣ ಯಾಕೆ ದಾಖಲಿಸಿಲ್ಲ ಮತ್ತು ತಾವು ರಜಾ ಅವಧಿಯಲ್ಲಿಯೂ ಶಾಲೆಯಲ್ಲಿ ಇರಬೇಕು ಎಂದು ಕೇಳಿದಾಗ ನಾನು ಗುರುವಾರ ಪ್ರಕರಣ ದಾಖಲಿಸುತ್ತೇನೆ ನಾನು ಶಾಲೆಗೆ ಬರುವ ಬಗ್ಗೆ ಬಿಡುವ ಬಗ್ಗೆ ನೀವು ಕೇಳಬೇಡಿ ಎನ್ನುತ್ತಾರೆ ಶಾಲೆಯ ಆಸ್ತಿಯನ್ನು ರಕ್ಷಿಸಬೇಕಾದ ಶಾಲೆಯ ಮುಖ್ಯ ಶಿಕ್ಷಕರೆ ಈ ರೀತಿಯಾಗಿ ಬೇಜವಾಬ್ದಾರಿ ಉತ್ತರ ನೀಡಿದರೆ ಹೇಗೆ.?ಈ ಬಗ್ಗೆ ಇಲಾಖೆಯ ಮೇಲಧಿಕಾರಿಗಳು ಯಾವ ರೀತಿಯ ಕ್ರಮವನ್ನು ತೆಗೆದುಕೊಳ್ಳುತ್ತಾರೆಂದು ಕಾಯ್ದು ನೋಡಬೇಕಾಗಿದೆ.
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…