Latest

ಥೀಮ್ ಪಾರ್ಕ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಪಿಕ್ ಜಾಮ್!?

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಚಿಟಗಿನಕೊಪ್ಪ ಗ್ರಾಮದ ಹತ್ತಿರ ಇರುವ ರಾಷ್ಟ್ರೀಯ ಹೆದ್ದಾರಿ 50 ರ ಬಳಿ ಕಳೆದ ಎರಡು ವಾರಗಳಿಂದ ಪ್ರಾರಂಭವಾದ ಆರೂಢ ವೈಭವ ಕ್ರಿಯೇಷನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಆರೂಢ ವೈಭವ ಥೀಮ್ ಪಾರ್ಕ್ ನಲ್ಲಿ ಸರಿಯಾಗಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ, ಇವತ್ತು ಮಕರ ಸಂಕ್ರಾಂತಿ ಹಬ್ಬ ಪ್ರಯುಕ್ತ ಬಹಳಷ್ಟು ಜನರು ಥೀಮ್ ಪಾರ್ಕ್ ನೋಡಲು ಆಗಮಿಸಿದ್ದರು. ಗಾಡಿಗಳು ಹೆಚ್ಚಾಗಿ ಬಂದು, ಪಾರ್ಕಿಂಗ್ ವ್ಯವಸ್ಥೆ ಸರಿಯಾಗಿ ಇಲ್ಲದ ಸಲುವಾಗಿ ರಾಷ್ಟ್ರೀಯ ಹೆದ್ದಾರಿ ಮೇಲೆಯೇ ಗಾಡಿಗಳು ನಿಂತಿರುವುದು ಕಂಡುಬಂದಿತು. ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿಯಾಗಿದ್ದು ಈ ರಸ್ತೆಯಲ್ಲಿಯೇ ಸಾಕಷ್ಟು ಗಾಡಿಗಳು ದಿನನಿತ್ಯ ಓಡಾಡುತ್ತಾವೆ. ಆರಂಭವಾಗಿ ಎರಡು ವಾರದಲ್ಲಿಯೇ ದಿನಕ್ಕೆ ಸುಮಾರು ಸಾವಿರಾರು ಜನ ಪಾರ್ಕ್ ನೋಡಲು ಆಗಮಿಸುತ್ತಿದ್ದಾರೆ. ಸುತ್ತ ಮುತ್ತಲಿನ ಗ್ರಾಮಗಳ ಜನರ ಆಕರ್ಷಣೀಯ ಸ್ಥಳವಾಗಿ ಮಾರ್ಪಟ್ಟಿದೆ. ಈ ರೀತಿಯಾಗಿ ಇರುವ ಕಾರಣ ಮುಂದಿನ ದಿನಗಳಲ್ಲಿ ಸಾರ್ವಜನಿಕರ ಆಗಮನ ಹೆಚ್ಚಾಗುವದರಲ್ಲಿ ಸಂದೇಹವಿಲ್ಲ. ಪಾರ್ಕಿಂಗ್ ಸಮಸ್ಯೆ ಇನ್ನೂ ಹೆಚ್ಚಿನದಾಗುತ್ತದೆ. ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು. ಇದೇ ರೀತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಪಿಂಗ್ ಜಾಮ್ ಆಗ್ತಾ ಹೋದರೆ ಮುಂದೆ ಸಾರ್ವಜನಿಕರಿಗೆ ಸಮಸ್ಯೆ ಹೆಚ್ಚಾಗುವುದರಲ್ಲಿ ಸಂಶಯವಿಲ್ಲ.

ವರದಿ: ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

5 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

3 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

4 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

1 month ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 months ago