ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಚಿಟಗಿನಕೊಪ್ಪ ಗ್ರಾಮದ ಹತ್ತಿರ ಇರುವ ರಾಷ್ಟ್ರೀಯ ಹೆದ್ದಾರಿ 50 ರ ಬಳಿ ಕಳೆದ ಎರಡು ವಾರಗಳಿಂದ ಪ್ರಾರಂಭವಾದ ಆರೂಢ ವೈಭವ ಕ್ರಿಯೇಷನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಆರೂಢ ವೈಭವ ಥೀಮ್ ಪಾರ್ಕ್ ನಲ್ಲಿ ಸರಿಯಾಗಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ, ಇವತ್ತು ಮಕರ ಸಂಕ್ರಾಂತಿ ಹಬ್ಬ ಪ್ರಯುಕ್ತ ಬಹಳಷ್ಟು ಜನರು ಥೀಮ್ ಪಾರ್ಕ್ ನೋಡಲು ಆಗಮಿಸಿದ್ದರು. ಗಾಡಿಗಳು ಹೆಚ್ಚಾಗಿ ಬಂದು, ಪಾರ್ಕಿಂಗ್ ವ್ಯವಸ್ಥೆ ಸರಿಯಾಗಿ ಇಲ್ಲದ ಸಲುವಾಗಿ ರಾಷ್ಟ್ರೀಯ ಹೆದ್ದಾರಿ ಮೇಲೆಯೇ ಗಾಡಿಗಳು ನಿಂತಿರುವುದು ಕಂಡುಬಂದಿತು. ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿಯಾಗಿದ್ದು ಈ ರಸ್ತೆಯಲ್ಲಿಯೇ ಸಾಕಷ್ಟು ಗಾಡಿಗಳು ದಿನನಿತ್ಯ ಓಡಾಡುತ್ತಾವೆ. ಆರಂಭವಾಗಿ ಎರಡು ವಾರದಲ್ಲಿಯೇ ದಿನಕ್ಕೆ ಸುಮಾರು ಸಾವಿರಾರು ಜನ ಪಾರ್ಕ್ ನೋಡಲು ಆಗಮಿಸುತ್ತಿದ್ದಾರೆ. ಸುತ್ತ ಮುತ್ತಲಿನ ಗ್ರಾಮಗಳ ಜನರ ಆಕರ್ಷಣೀಯ ಸ್ಥಳವಾಗಿ ಮಾರ್ಪಟ್ಟಿದೆ. ಈ ರೀತಿಯಾಗಿ ಇರುವ ಕಾರಣ ಮುಂದಿನ ದಿನಗಳಲ್ಲಿ ಸಾರ್ವಜನಿಕರ ಆಗಮನ ಹೆಚ್ಚಾಗುವದರಲ್ಲಿ ಸಂದೇಹವಿಲ್ಲ. ಪಾರ್ಕಿಂಗ್ ಸಮಸ್ಯೆ ಇನ್ನೂ ಹೆಚ್ಚಿನದಾಗುತ್ತದೆ. ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು. ಇದೇ ರೀತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಪಿಂಗ್ ಜಾಮ್ ಆಗ್ತಾ ಹೋದರೆ ಮುಂದೆ ಸಾರ್ವಜನಿಕರಿಗೆ ಸಮಸ್ಯೆ ಹೆಚ್ಚಾಗುವುದರಲ್ಲಿ ಸಂಶಯವಿಲ್ಲ.
ವರದಿ: ಸಂಗಪ್ಪ ಚಲವಾದಿ
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…