ಕೊಟ್ಟೂರು: ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಸರಕಾರಿ ಶಾಲೆ ಹತ್ತಿರ, ಮದಗಮ್ಮನ ಗುಡಿ ಹಾಗೂ ಹೊಳಿಯಪ್ಪ ಸರ್ಕಲ್ ನ ಮೂರು ಕಡೆಯಲ್ಲಿ ಶಾಸಕರ ಅನುದಾನದಲ್ಲಿ 2024 ರ ಮಾರ್ಚ್ ತಿಂಗಳಿನಲ್ಲಿ ನಿರ್ಮಿಸಲಾಗಿರುವ ಖಾಲಿ ಹೈ ಮಾಸ್ ಲೈಟ್ ಕಂಬಗಳಲ್ಲಿ ಇದುವರೆಗೂ ದೀಪ ಜೋಡಣೆಯಾಗಿರಲಿಲ್ಲ; ಈಗ ಲೈಟ್ ಗಳನ್ನು ಹಾಕಿದ್ದಾರೆ. ಆದರೆ ಇನ್ನೂ ವಿದ್ಯುತ್ ಸಂಪರ್ಕ ಕೊಟ್ಟಿರುವುದಿಲ್ಲ. ಸಾರ್ವಜನಿಕರಿಗೆ ಉಪಯೋಗವಾಗಲೆಂದು ಲಕ್ಷಾಂತರ ರೂ. ಖರ್ಚು ಮಾಡಿ ಸ್ಥಾಪಿಸಿದ್ದ ಹೈಮಾಸ್ಟ್‌ ಕಂಬಗಳು ಬೆಳಕಿಲ್ಲದೇ ಅಧಿಕಾರಿಗಳು, ಪ್ರತಿನಿಧಿಗಳ ನಿರ್ಲಕ್ಷ್ಯದಿಂದ ನಿರುಪಯುಕ್ತವಾಗಿ ನಿಂತಿವೆ.
ಹೀಗಾಗಿ ನಿತ್ಯ ಅಲ್ಲಿ ಓಡಾಡುವ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ದಿನಾಲೂ ಹಿಡಿ ಶಾಪ ಹಾಕುತ್ತಿದ್ದಾರೆ. ಈ ಪತ್ರಿಕೆ ಸುದ್ಧಿ ಮೂಲಕವಾದರೂ ಸಂಬಂಧಪಟ್ಟವರು ಎಚ್ಚೆತ್ತುಗೊಂಡು ವಿದ್ಯುತ್ ಸಂಪರ್ಕ ನೀಡಲಿಯೆಂದು ಪ್ರಜ್ಞಾವಂತ ನಾಗರೀಕರು ಆಗ್ರಹಿಸಿದ್ದಾರೆ.

ವರದಿ: ಮಣಿಕಂಠ. ಬಿ

error: Content is protected !!