ಇಳಕಲ್ ತಾಲೂಕಿನ ಕೆಲೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ತಳ್ಳಿಕೆರೆ ಗ್ರಾಮದ ದಲಿತ ಕಾಲೊನಿಯ ದುಸ್ಥಿತಿ ಇದು. ಸುಮಾರು ಎರಡು ವರ್ಷಗಳಿಂದ ರಸ್ತೆಯೆಲ್ಲಾ ಚರಂಡಿಮಯ ಆಗಿರುತ್ತದೆ, ಅತ್ತ ಕಡೆಗೆ ಅಧಿಕಾರಿಗಳು ಹೋಗೋದು ನೋಡೋದು ಬಿಟ್ಟರೆ ಸ್ವಚ್ಛತೆ ಮಾಡಿಸುವ ಕೆಲಸ ಇಲ್ಲ. ದಲಿತ ಕಾಲೊನಿ ಸ್ಥಿತಿಗತಿ ನೋಡಿದಾಗ ಚರಂಡಿಗಳೆಲ್ಲಾ ಗಬ್ಬೆದ್ದು ನಾರುತ್ತಿದ್ದು ಅದರ ವಾಸನೆಗೆ ಸರಿಯಾಗಿ ಊಟ ಮಾಡಲಾಗುತ್ತಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ. ಚಿಕ್ಕ ಪುಟ್ಟ ಮಕ್ಕಳು ಆಡ್ಡಾಡುವ ಜಾಗದಲ್ಲಿ ಕೆಲಸ ಕಾರ್ಯ ಬಿಟ್ಟು ಮಕ್ಕಳನ್ನು ಕಾಯುತ್ತಾ ಜೀವ ಕೈಯಲ್ಲಿ ಇಟ್ಟುಕೊಂಡು ಜೀವನ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದಿನಾಲೂ ಜನ ಓಡಾಡುವ ರಸ್ತೆ ಇದಾಗಿದ್ದು, ರಸ್ತೆಯಲ್ಲಿಯೇ ಸಂಪೂರ್ಣ ನೀರು ನಿಂತು ಗಬ್ಬೆದ್ದು ನಾರುತಿದ್ದು, ಈ ಅವ್ಯವಸ್ಥೆಯಿಂದ ಗ್ರಾಮದ ಜನರಿಗೆ ಹಲವು ರೋಗಗಳ ಭೀತಿ ಎದುರಿಸುವ ಪರಿಸ್ಥಿತಿ ಉಂಟಾಗಿದೆ. ಅದೇ ರಸ್ತೆಯಲ್ಲಿಯೇ ದಿನಾಲೂ ಸೈಕಲ್ ಮೋಟಾರ್ ಗಳಿಂದ ಗ್ರಾಮದ ರೈತರು ಮನೆಗೆ ಹಾಗೂ ಹೊಲಗಳಿಗೆ ಈ ದಾರಿಯಲ್ಲಿಯೇ ಹೋಗಬೇಕು. ರಸ್ತೆಯ ಮೇಲೆ ಇರುವ ಈ ಕೊಳಚೆಯ ಪರಿಸ್ಥಿತಿ ನೋಡಿದರೆ ಗ್ರಾಮಕ್ಕೆ ಚರಂಡಿ ವ್ಯವಸ್ಥೆ ಸರಿಯಾಗಿ ಇರದೇ ಇರುವುದು ಕಂಡುಬರುತ್ತದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮನಾ ಬಾವಲತ್ತಿ ಗಮನಹರಿಸದೇ ಇರುವುದು ಈ ಅವ್ಯವಸ್ಥೆಗೆ ಕಾರಣವಾಗಿದೆ. ಪಂಚಾಯಿತಿ ಅಧಿಕಾರಿಗಳು ದಿವ್ಯ ನಿರ್ಲಕ್ಷ ವಹಿಸುತ್ತಿದ್ದು ವರದಿ ಕಂಡ ಮೇಲಾದರೂ ಅಧಿಕಾರಿಗಳು ರಸ್ತೆಗೆ ಕಾಂಕ್ರೀಟ್ ವ್ಯವಸ್ಥೆ ಅಥವಾ ಘರ್ಸು(ಮರಂ) ಹಾಕುವ ಮೂಲಕ ಗ್ರಾಮದ ಜನರಿಗೆ ಅನುಕೂಲ ಮಾಡಿಕೊಡಬೇಕು.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…