ಇಳಕಲ್ ತಾಲೂಕಿನ ಕೆಲೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ತಳ್ಳಿಕೆರೆ ಗ್ರಾಮದ ದಲಿತ ಕಾಲೊನಿಯ ದುಸ್ಥಿತಿ ಇದು. ಸುಮಾರು ಎರಡು ವರ್ಷಗಳಿಂದ ರಸ್ತೆಯೆಲ್ಲಾ ಚರಂಡಿಮಯ ಆಗಿರುತ್ತದೆ, ಅತ್ತ ಕಡೆಗೆ ಅಧಿಕಾರಿಗಳು ಹೋಗೋದು ನೋಡೋದು ಬಿಟ್ಟರೆ ಸ್ವಚ್ಛತೆ ಮಾಡಿಸುವ ಕೆಲಸ ಇಲ್ಲ. ದಲಿತ ಕಾಲೊನಿ ಸ್ಥಿತಿಗತಿ ನೋಡಿದಾಗ ಚರಂಡಿಗಳೆಲ್ಲಾ ಗಬ್ಬೆದ್ದು ನಾರುತ್ತಿದ್ದು ಅದರ ವಾಸನೆಗೆ ಸರಿಯಾಗಿ ಊಟ ಮಾಡಲಾಗುತ್ತಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ. ಚಿಕ್ಕ ಪುಟ್ಟ ಮಕ್ಕಳು ಆಡ್ಡಾಡುವ ಜಾಗದಲ್ಲಿ ಕೆಲಸ ಕಾರ್ಯ ಬಿಟ್ಟು ಮಕ್ಕಳನ್ನು ಕಾಯುತ್ತಾ ಜೀವ ಕೈಯಲ್ಲಿ ಇಟ್ಟುಕೊಂಡು ಜೀವನ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದಿನಾಲೂ ಜನ ಓಡಾಡುವ ರಸ್ತೆ ಇದಾಗಿದ್ದು, ರಸ್ತೆಯಲ್ಲಿಯೇ ಸಂಪೂರ್ಣ ನೀರು ನಿಂತು ಗಬ್ಬೆದ್ದು ನಾರುತಿದ್ದು, ಈ ಅವ್ಯವಸ್ಥೆಯಿಂದ ಗ್ರಾಮದ ಜನರಿಗೆ ಹಲವು ರೋಗಗಳ ಭೀತಿ ಎದುರಿಸುವ ಪರಿಸ್ಥಿತಿ ಉಂಟಾಗಿದೆ. ಅದೇ ರಸ್ತೆಯಲ್ಲಿಯೇ ದಿನಾಲೂ ಸೈಕಲ್ ಮೋಟಾರ್ ಗಳಿಂದ ಗ್ರಾಮದ ರೈತರು ಮನೆಗೆ ಹಾಗೂ ಹೊಲಗಳಿಗೆ ಈ ದಾರಿಯಲ್ಲಿಯೇ ಹೋಗಬೇಕು. ರಸ್ತೆಯ ಮೇಲೆ ಇರುವ ಈ ಕೊಳಚೆಯ ಪರಿಸ್ಥಿತಿ ನೋಡಿದರೆ ಗ್ರಾಮಕ್ಕೆ ಚರಂಡಿ ವ್ಯವಸ್ಥೆ ಸರಿಯಾಗಿ ಇರದೇ ಇರುವುದು ಕಂಡುಬರುತ್ತದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮನಾ ಬಾವಲತ್ತಿ ಗಮನಹರಿಸದೇ ಇರುವುದು ಈ ಅವ್ಯವಸ್ಥೆಗೆ ಕಾರಣವಾಗಿದೆ. ಪಂಚಾಯಿತಿ ಅಧಿಕಾರಿಗಳು ದಿವ್ಯ ನಿರ್ಲಕ್ಷ ವಹಿಸುತ್ತಿದ್ದು ವರದಿ ಕಂಡ ಮೇಲಾದರೂ ಅಧಿಕಾರಿಗಳು ರಸ್ತೆಗೆ ಕಾಂಕ್ರೀಟ್ ವ್ಯವಸ್ಥೆ ಅಥವಾ ಘರ್ಸು(ಮರಂ) ಹಾಕುವ ಮೂಲಕ ಗ್ರಾಮದ ಜನರಿಗೆ ಅನುಕೂಲ ಮಾಡಿಕೊಡಬೇಕು.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…