Crime

ದರ್ಶನ್ ಗೆ ಸದ್ಯಕ್ಕಿಲ್ಲ ಮನೆ ಊಟ.

ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಮನೆಯಿಂದ ಊಟ ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ್ದು ನ್ಯಾಯಾಧೀಶರು ಜುಲೈ 25ಕ್ಕೆ ಆದೇಶ ಕಾಯ್ದಿರಿಸಿದ್ದಾರೆ.
ದರ್ಶನ್ ಪರ ವಕೀಲರು ಸೆಕ್ಷನ್ 30ರ ಪ್ರಕಾರ ಜೈಲಿನಲ್ಲಿ ಇರುವ ಆರೋಪಿ ಮನೆ ಊಟ ಪಡೆಯಬಹುದು. ಇದು ವಿಚಾರಣಾದಿನ ಕೈದಿ ಹಕ್ಕು, ಜೈಲಿನ ನಿಯಮಗಳಲ್ಲಿ ಇದರ ಉಲ್ಲೇಖ ಇದೆ. ಅಲ್ಲದೆ ಮನೆಯಿಂದ ಹಾಸಿಗೆ ವ್ಯವಸ್ಥೆ ಮತ್ತು ಪುಸ್ತಕಗಳನ್ನು ಹೊಂದುವ ಅವಕಾಶ ಇದೆ. ಧರ್ಶನ್ ರವರು ಸಿನಿಮಾದ ನಟರಾಗಿರುವ ಕಾರಣ ಅತಿ ಹೆಚ್ಚಿನ ಪ್ರಚಾರ ಸಿಗುತ್ತಿದೆ ಹೀಗಾಗಿ ಜೈಲಿನ ಅಧಿಕಾರಿಗಳು ಮನೆಯ ಊಟವನ್ನು ನೀಡುವುದಕ್ಕೆ ನಿರಾಕರಣೆ ಮಾಡುತ್ತಿದ್ದಾರೆ. ಈ ಹಿಂದೆ ಕುಕ್ಯತಾ ಆರೋಪಿ ಚಾರ್ಲ್ಸ್ ಶೋಬರಾಜ್ ಗೆ ಕೂಡ ಮನೆ ಊಟ ಕಲ್ಪಿಸಲಾಗಿತ್ತು. ಯಾವಾಗ ಆರೋಪಿ, ಅಪರಾಧಿ ಎಂದು ಕೋರ್ಟ್ ಶಿಕ್ಷೆ ನೀಡುತ್ತದೆ ಅಲ್ಲಿಯವರೆಗೆ ಈ ಎಲ್ಲಾ ಅವಕಾಶವನ್ನು ಬಳಸಿಕೊಳ್ಳಬಹುದು ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದ್ದಾರೆ.

ಜೈಲಿನ ನಿಯಮಗಳ ಪ್ರಕಾರ ಮನೆ ಊಟ ಎನ್ನುವುದರ ಬಗ್ಗೆ ಉಲ್ಲೇಖ ಇಲ್ಲ ಆರೋಗ್ಯದ ಸಮಯದಲ್ಲಿ ಮಾತ್ರ ವಿಶೇಷ ಊಟ ನೀಡಬಹುದು ಹೊರೆತು ಮನೆ ಊಟವನ್ನು ನೀಡಬೇಕು ಎಂದು ಉಲ್ಲೇಖ ಮಾಡಿಲ್ಲ. ಆರೋಗ್ಯದ ಸಮಸ್ಯೆ ಇದ್ದಾಗ ಮಾತ್ರ ವಿಶೇಷ ಕಾಳಜಿ ಆಹಾರ ನೀಡಬೇಕು, ವಾರದಲ್ಲಿ ಒಮ್ಮೆ ಮಾತ್ರ ಮಾಂಸ ಆಹಾರ ಊಟ ಕೊಡಬಹುದು ಅದನ್ನು ಬಿಟ್ಟು ಪ್ರತಿದಿನ ಬಿರಿಯಾನಿ ತಿನ್ನಬೇಕು ಎಂದರೆ ನೀಡಲು ಸಾಧ್ಯವಿಲ್ಲ. ಆಹಾರ ಅಜೀರ್ಣ, ಪುಡ್ ಪಾಯಿಸನ್ ಗೆ ಭೇಧಿ ಆಗುತ್ತಿದೆ ಎಂದು ಮೆಡಿಕಲ್ ವರದಿಯನ್ನು ಸಲ್ಲಿಸಿದ್ದಾರೆ ಆದರೆ ಒಂದು ಬಾರಿಯೂ ಭೇಧಿಯಾಗಿದೆ ಎಂದು ಆಸ್ಪತ್ರೆಯಲ್ಲಿ ದರ್ಶನ್ ಚಿಕಿತ್ಸೆ ಪಡೆದಿಲ್ಲ. ದರ್ಶನ್ ರವರಿಗೆ ವೈರಲ್ ಫೀವರ್ ಇದ್ದು ಹಾಗೂ ಕೈನ ನೋವು ಬಂದಿರುವ ಕಾರಣ ಅದಕ್ಕೆ ಮಾತ್ರ ಚಿಕಿತ್ಸೆ ಪಡೆದಿದ್ದಾರೆ ಮೂರು ತಿಂಗಳ ಹಿಂದೆ ಆಪರೇಷನ್ ಆಗಿತ್ತು ಜೈಲಿಗೆ ಬಂದಾಗ ಅದರ ನೋವು ಪ್ರಾರಂಭವಾಗಿದ್ದು ಇದಕ್ಕೆ ಎಕ್ಸರೇ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗೆ ಭೇದಿಯಾಗುತ್ತಿದ್ದರೆ ಉಪ್ಪು ಕಾರ ಇಲ್ಲದ ಆಹಾರ ನೀಡಬೇಕು ಕುಡಿಯಲು ಬಿಸಿನೀರು ಕೊಡಬೇಕು ಜ್ವರ ಇದ್ದಾಗ ಮಾತ್ರ. ಅದನ್ನು ಬಿಟ್ಟು ಪ್ರತಿದಿನ ಸ್ನಾನ ಮಾಡಲು ಬಿಸಿ ನೀರು ಕೊಡಲು ಸಾಧ್ಯವಿಲ್ಲ ಅನಾರೋಗ್ಯ ಇದ್ದರೆ 15 ದಿನ ಮಾತ್ರ ವಿಶೇಷವಾಗಿ ಅವಕಾಶ ನೀಡಬಹುದು ಎಂದು ಪೊಲೀಸ್ ಪರವಾದ ಮಂಡಿಸಿದ್ದಾರೆ.

ಇಬ್ಬರ ಪರ ವಾದವನ್ನು ಆಲಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿದ.

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

8 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

9 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

21 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

21 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

21 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

21 hours ago