ಕೊಪ್ಪಳದಲ್ಲಿ ಮತಾಂತರ ಭೂತ ವಕ್ಕರಿಸಿದೆ. ಅತ್ಯಾಚಾರ ಬೆದರಿಕೆ, ಆಮಿಷವೊಡ್ಡಿ ಬಲವಂತವಾಗಿ ಕುಟುಂಬವೊಂದನ್ನು ಮತಾಂತರ ಮಾಡಿರುವ ಆರೋಪ ಕೇಳಿ ಬಂದಿದ್ದು, ಮೂವರ ವಿರುದ್ಧ ಕಾರಟಗಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾರಟಗಿ ಪಟ್ಟಣದ ರಾಮನಗರದ ನಿವಾಸಿ ಶಂಕರ್ ಎಂಬುವವರು ಇಲ್ಲಿನ ಗ್ರೇಸ್ ಪ್ರಾರ್ಥನಾ ಮಂದಿರದ ಪಾಸ್ಟರ್ ಸತ್ಯನಾರಾಯಣ ಅಲಿಯಾಸ್ ಸ್ಯಾಮುವೆಲ್, ಶಿವಮ್ಮ ಅಲಿಯಾಸ್ ಸಾರಾ ಹಾಗೂ ಚಿರಂಜೀವಿ ಅಲಿಯಾಸ್ ಡ್ಯಾನಿಯೆಲ್ ಎಂಬುವವರ ಮೇಲೆ ಕಾರಟಗಿ ಪೊಲೀಸ್ ಠಾಣೆಯಲ್ಲಿ ಡಿಸೆಂಬರ್ 9 ರಂದು ದೂರು ದಾಖಲಿಸಿದ್ದರು.
ಮತಾಂತರಿಗಳು ಮನೆಗೆ ನುಗ್ಗಿ ಬಲವಂತದಿಂದ ಮತಾಂತರ ಮಾಡಿದ್ದಲ್ಲದೆ, ಒಂದು ವೇಳೆ ಹಿಂದು ಧರ್ಮಕ್ಕೆ ಮರಳಿದರೆ ನಾನೇ ನಿಮ್ಮನ್ನು ಸಾಯಿಸುತ್ತೇನೆ’. ‘ನಿಮ್ಮ ಮಕ್ಕಳನ್ನು ಅಪಹರಿಸಿ ಅತ್ಯಾಚಾರ ಮಾಡಿಸುತ್ತೇನೆ’ ಎಂದು ಸತ್ಯನಾರಾಯಣ ಅಲಿಯಾಸ್ ಸ್ಯಾಮುವೆಲ್ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ಶಂಕರ್ ಕಾರಟಗಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ದೂರು ದಾಖಲಿಸಿರುವ ಶಂಕರ್ ಹಾಗೂ ಆರೋಪ ಹೊತ್ತಿರುವ ಸ್ಯಾಮುವೆಲ್ ಸಂಬಂಧಿಕರಾಗಿದ್ದಾರೆ.
ಫೆಬ್ರವರಿ 6ರಂದು ಆರೋಪಿತರ ಮನೆಯಲ್ಲಿದ್ದ ಹಿಂದು ದೇವರ ಫೋಟೊಗಳನ್ನು ನಾಲೆಗೆ ಎಸೆದು ನಮ್ಮನ್ನು ಮತಾಂತರ ಮಾಡಿದರು. ಕ್ರಿಶ್ಚಿಯನ್ ಧರ್ಮವನ್ನು ಪಾಲಿಸದಿದ್ದರೆ ದೆವ್ವ, ಪಿಶಾಚಿಗಳಾಗಿ ಅಲೆಯುತ್ತೀರಿ. ಮತ್ತೆ ವಾಪಸ್ ಹಿಂದು ಧರ್ಮಕ್ಕೆ ಹೋಗದೆ ಕ್ರಿಶ್ಚಿಯನ್ ಧರ್ಮ ಪಾಲಿಸುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಶಿಕ್ಷಣಕ್ಕೆ ಬೆಂಬಲ ನೀಡಿ ಪತ್ನಿಗೆ ಸರ್ಕಾರಿ ಉದ್ಯೋಗ ಸಿಗುವಂತೆ ಮಾಡಿದ ಗಂಡನೊಬ್ಬ, ನಂತರ ಪತ್ನಿಯ ನಿರ್ಲಕ್ಷ್ಯ ಮತ್ತು ಕಿರುಕುಳದಿಂದ ಮನನೊಂದು…
ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ…
ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ…
ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…
ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ…
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…