ಕೊಪ್ಪಳದಲ್ಲಿ ಮತಾಂತರ ಭೂತ ವಕ್ಕರಿಸಿದೆ. ಅತ್ಯಾಚಾರ ಬೆದರಿಕೆ, ಆಮಿಷವೊಡ್ಡಿ ಬಲವಂತವಾಗಿ ಕುಟುಂಬವೊಂದನ್ನು ಮತಾಂತರ ಮಾಡಿರುವ ಆರೋಪ ಕೇಳಿ ಬಂದಿದ್ದು, ಮೂವರ ವಿರುದ್ಧ ಕಾರಟಗಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾರಟಗಿ ಪಟ್ಟಣದ ರಾಮನಗರದ ನಿವಾಸಿ ಶಂಕರ್ ಎಂಬುವವರು ಇಲ್ಲಿನ ಗ್ರೇಸ್ ಪ್ರಾರ್ಥನಾ ಮಂದಿರದ ಪಾಸ್ಟರ್ ಸತ್ಯನಾರಾಯಣ ಅಲಿಯಾಸ್ ಸ್ಯಾಮುವೆಲ್, ಶಿವಮ್ಮ ಅಲಿಯಾಸ್ ಸಾರಾ ಹಾಗೂ ಚಿರಂಜೀವಿ ಅಲಿಯಾಸ್ ಡ್ಯಾನಿಯೆಲ್ ಎಂಬುವವರ ಮೇಲೆ ಕಾರಟಗಿ ಪೊಲೀಸ್ ಠಾಣೆಯಲ್ಲಿ ಡಿಸೆಂಬರ್ 9 ರಂದು ದೂರು ದಾಖಲಿಸಿದ್ದರು.
ಮತಾಂತರಿಗಳು ಮನೆಗೆ ನುಗ್ಗಿ ಬಲವಂತದಿಂದ ಮತಾಂತರ ಮಾಡಿದ್ದಲ್ಲದೆ, ಒಂದು ವೇಳೆ ಹಿಂದು ಧರ್ಮಕ್ಕೆ ಮರಳಿದರೆ ನಾನೇ ನಿಮ್ಮನ್ನು ಸಾಯಿಸುತ್ತೇನೆ’. ‘ನಿಮ್ಮ ಮಕ್ಕಳನ್ನು ಅಪಹರಿಸಿ ಅತ್ಯಾಚಾರ ಮಾಡಿಸುತ್ತೇನೆ’ ಎಂದು ಸತ್ಯನಾರಾಯಣ ಅಲಿಯಾಸ್ ಸ್ಯಾಮುವೆಲ್ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ಶಂಕರ್ ಕಾರಟಗಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ದೂರು ದಾಖಲಿಸಿರುವ ಶಂಕರ್ ಹಾಗೂ ಆರೋಪ ಹೊತ್ತಿರುವ ಸ್ಯಾಮುವೆಲ್ ಸಂಬಂಧಿಕರಾಗಿದ್ದಾರೆ.
ಫೆಬ್ರವರಿ 6ರಂದು ಆರೋಪಿತರ ಮನೆಯಲ್ಲಿದ್ದ ಹಿಂದು ದೇವರ ಫೋಟೊಗಳನ್ನು ನಾಲೆಗೆ ಎಸೆದು ನಮ್ಮನ್ನು ಮತಾಂತರ ಮಾಡಿದರು. ಕ್ರಿಶ್ಚಿಯನ್ ಧರ್ಮವನ್ನು ಪಾಲಿಸದಿದ್ದರೆ ದೆವ್ವ, ಪಿಶಾಚಿಗಳಾಗಿ ಅಲೆಯುತ್ತೀರಿ. ಮತ್ತೆ ವಾಪಸ್ ಹಿಂದು ಧರ್ಮಕ್ಕೆ ಹೋಗದೆ ಕ್ರಿಶ್ಚಿಯನ್ ಧರ್ಮ ಪಾಲಿಸುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…