ಕೊಪ್ಪಳದಲ್ಲಿ ಮತಾಂತರ ಭೂತ ವಕ್ಕರಿಸಿದೆ. ಅತ್ಯಾಚಾರ ಬೆದರಿಕೆ, ಆಮಿಷವೊಡ್ಡಿ ಬಲವಂತವಾಗಿ ಕುಟುಂಬವೊಂದನ್ನು ಮತಾಂತರ ಮಾಡಿರುವ ಆರೋಪ ಕೇಳಿ ಬಂದಿದ್ದು, ಮೂವರ ವಿರುದ್ಧ ಕಾರಟಗಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾರಟಗಿ ಪಟ್ಟಣದ ರಾಮನಗರದ ನಿವಾಸಿ ಶಂಕರ್ ಎಂಬುವವರು ಇಲ್ಲಿನ ಗ್ರೇಸ್ ಪ್ರಾರ್ಥನಾ ಮಂದಿರದ ಪಾಸ್ಟರ್ ಸತ್ಯನಾರಾಯಣ ಅಲಿಯಾಸ್ ಸ್ಯಾಮುವೆಲ್, ಶಿವಮ್ಮ ಅಲಿಯಾಸ್ ಸಾರಾ ಹಾಗೂ ಚಿರಂಜೀವಿ ಅಲಿಯಾಸ್ ಡ್ಯಾನಿಯೆಲ್ ಎಂಬುವವರ ಮೇಲೆ ಕಾರಟಗಿ ಪೊಲೀಸ್ ಠಾಣೆಯಲ್ಲಿ ಡಿಸೆಂಬರ್ 9 ರಂದು ದೂರು ದಾಖಲಿಸಿದ್ದರು.
ಮತಾಂತರಿಗಳು ಮನೆಗೆ ನುಗ್ಗಿ ಬಲವಂತದಿಂದ ಮತಾಂತರ ಮಾಡಿದ್ದಲ್ಲದೆ, ಒಂದು ವೇಳೆ ಹಿಂದು ಧರ್ಮಕ್ಕೆ ಮರಳಿದರೆ ನಾನೇ ನಿಮ್ಮನ್ನು ಸಾಯಿಸುತ್ತೇನೆ’. ‘ನಿಮ್ಮ ಮಕ್ಕಳನ್ನು ಅಪಹರಿಸಿ ಅತ್ಯಾಚಾರ ಮಾಡಿಸುತ್ತೇನೆ’ ಎಂದು ಸತ್ಯನಾರಾಯಣ ಅಲಿಯಾಸ್ ಸ್ಯಾಮುವೆಲ್ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ಶಂಕರ್ ಕಾರಟಗಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ದೂರು ದಾಖಲಿಸಿರುವ ಶಂಕರ್ ಹಾಗೂ ಆರೋಪ ಹೊತ್ತಿರುವ ಸ್ಯಾಮುವೆಲ್ ಸಂಬಂಧಿಕರಾಗಿದ್ದಾರೆ.
ಫೆಬ್ರವರಿ 6ರಂದು ಆರೋಪಿತರ ಮನೆಯಲ್ಲಿದ್ದ ಹಿಂದು ದೇವರ ಫೋಟೊಗಳನ್ನು ನಾಲೆಗೆ ಎಸೆದು ನಮ್ಮನ್ನು ಮತಾಂತರ ಮಾಡಿದರು. ಕ್ರಿಶ್ಚಿಯನ್ ಧರ್ಮವನ್ನು ಪಾಲಿಸದಿದ್ದರೆ ದೆವ್ವ, ಪಿಶಾಚಿಗಳಾಗಿ ಅಲೆಯುತ್ತೀರಿ. ಮತ್ತೆ ವಾಪಸ್ ಹಿಂದು ಧರ್ಮಕ್ಕೆ ಹೋಗದೆ ಕ್ರಿಶ್ಚಿಯನ್ ಧರ್ಮ ಪಾಲಿಸುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…