Latest

ಹರಪನಹಳ್ಳಿ ಶಾಸಕಿ ಕಚೇರಿಗೆ ಕಳ್ಳರ ದಾಳಿ: 13 ಲಕ್ಷ ಮೌಲ್ಯದ ನಗದು ಮತ್ತು ಆಭರಣ ಕಳವು

ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಮಂಗಳವಾರ ತಡರಾತ್ರಿ ನಡೆದ ಕಳ್ಳತನದ ಘಟನೆಗೆ ಶಾಸಕಿ ಲತಾ ಮಲ್ಲಿಕಾರ್ಜುನ ಅವರ ಕಚೇರಿ ಶಿಕಾರವಾಗಿದೆ. ಕಾಶಿ ಸಂಗಮೇಶ್ವರ ಬಡಾವಣೆಯಲ್ಲಿರುವ ಕಚೇರಿಗೆ ನಾಲ್ವರು ಮುಸುಕುಧಾರಿಗಳು ನುಗ್ಗಿ ಬೀಗ ಮುರಿದು ಲಕ್ಷಾಂತರ ಮೌಲ್ಯದ ನಗದು ಹಾಗೂ ಚಿನ್ನ-ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ.

ಶಾಸಕಿ ಲತಾ ಮಲ್ಲಿಕಾರ್ಜುನ ಅವರು ಪ್ರವಾಸದಲ್ಲಿದ್ದ ಸಂದರ್ಭ ಈ ಕೃತ್ಯ ನಡೆದಿದೆ. ರಾತ್ರಿ 1 ರಿಂದ ಬೆಳಗ್ಗೆ 4 ಗಂಟೆ ಮಧ್ಯೆ ಕಳ್ಳರು ಕಾರ್ಯಾಚರಣೆ ನಡೆಸಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಕಚೇರಿಯಲ್ಲಿ ಇಟ್ಟಿದ್ದ 2.5 ಲಕ್ಷ ರೂಪಾಯಿ ನಗದು, ಸುಮಾರು ₹10.80 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಕಳ್ಳರು ಕದಿಯಲಾಗಿದ್ದು, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆಯ ಮಾಹಿತಿ ಪಡೆದ ಹರಪನಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪರಾಧ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಯ ಜೊತೆಗೆ ಸ್ಥಳೀಯ ಮಾಹಿತಿ ಆಧಾರದಲ್ಲಿ ಕಳ್ಳರ ಪತ್ತೆಹಚ್ಚುವ ಕಾರ್ಯ ಪ್ರಗತಿಯಲ್ಲಿ ಇದೆ.

ಈ ಪ್ರಕರಣದಿಂದ ಸ್ಥಳೀಯವಾಗಿ ಭೀತಿಯ ವಾತಾವರಣ ಮೂಡಿದ್ದು, ಶಾಸಕಿ ಕಚೇರಿಗೆ ಸುತ್ತಲೂ ಭದ್ರತೆ ಹೆಚ್ಚಿಸಲಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

10 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

10 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

10 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

10 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago