Latest

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್ ಬೈಕ್ ನಲ್ಲಿ ಬಂದ ಇಬ್ಬರು ಆಕೆಯ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರವನ್ನು ಕಸದಿಕೊಳ್ಳಲು ಬಂದಿದ್ದು ಆಕೆಯ ಸಮಯ ಪ್ರಜ್ಞೆಯಿಂದ ಜೋರಾಗಿ ಕಿರುಚಿದ್ದು 20 ಗ್ರಾಂ ನಷ್ಟು ಮಾತ್ರ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ಗೌರಿಬಿದನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಲೀಲಾ, ಇಂದು ಬೆಳಗ್ಗೆ ಹಾಲು ತರಲು ನಮ್ಮ ಮನೆಯ ಪಕ್ಕದ ಅಂಗಡಿಗೆ ಹೋಗಿದ್ದೆ, ಆಗ ಹೆಲ್ಮೆಟ್ ಧರಿಸಿದ್ದ ಇಬ್ಬರು ಬೈಕ್ ನಲ್ಲಿ ಬಂದು ನನ್ನ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರವನ್ನು ಕಸದಿಕೊಳ್ಳಲು ಯತ್ನಿಸಿದ್ದರು, ಕತ್ತಿಗೆ ಕೈಹಾಕಿ ಎಳೆದಾಡಿದಾಗ ಚೈನ್ ಕಟ್ಟಾಗಿ 20 ಗ್ರಾಂ ನಷ್ಟು ಮಾತ್ರ ಅವರು ತೆಗೆದುಕೊಂಡು ಹೋಗಿದ್ದಾರೆ, ನನಗೆ ಸಣ್ಣಪುಟ್ಟ ಗಾಯಗಳು ಆಗಿವೆ ಎಂದು ತಿಳಿಸಿದರು.

ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಹೆಚ್ಚುವರಿ ಪೋಲಿಸ್ ಅಧೀಕ್ಷಕ ಎಸ್.ಪಿ.ಜಗನ್ನಾಥ್ ರೈ, ಡಿವೈಎಸ್ಪಿ ಪ್ರಕಾಶ್ ರೆಡ್ಡಿ, ನಗರ ಠಾಣೆಯ ಪಿಎಸ್ಐ ಗೋಪಾಲ್, ಗ್ರಾಮಾಂತರ ಠಾಣೆಯ ಪಿಎಸ್ಐ ರಮೇಶ್ ಗುಗ್ಗರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ವರ್ಷದ ಮೊದಲ ಹಬ್ಬದ ದಿನವೇ ಈ ರೀತಿಯ ಘಟನೆ ನಡೆದಿರುವುದು ಸ್ಥಳೀಯರಲ್ಲಿ ಮತ್ತು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ್ದು ಹಗಲಿನಲ್ಲಿಯೇ ರಸ್ತೆಗಳಲ್ಲಿ ಈ ರೀತಿಯ ಕಳ್ಳತನಗಳು ನಡೆಯುತ್ತಿದ್ದರೆ ಸಾರ್ವಜನಿಕರು ನಿರ್ಭೀತಿಯಿಂದ ರಸ್ತೆಗಳಲ್ಲಿ ಸಂಚರಿಸುವುದು ಹೇಗೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ವರದಿ: ಅವಿನಾಶ್

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

13 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

13 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

13 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

13 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago