Crime

ಗೌರಿಬಿದನೂರಿನಲ್ಲಿ ಶುರುವಾಯಿತು ಮತ್ತೆ ಕಳ್ಳರ ಕಾಟ.!

ಗೌರಿಬಿದನೂರು: ನಗರದ 12ನೇ ವಾರ್ಡ್ ತ್ಯಾಗರಾಜ ಕಾಲೋನಿಯ ಅಶ್ವತ್ಥ್ ನಾರಾಯಣ್ ಎಂಬುವರ ಮನೆಯ ಬೀಗ ಹೊಡೆದು ಕಳ್ಳರು ತಮ್ಮ ಕೈಚಳಕವನ್ನು ತೋರಿಸಿರುವ ಘಟನೆ ಗೌರಿಬಿದನೂರು ನಗರದ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ತ್ಯಾಗರಾಜ ಕಾಲೋನಿಯಲ್ಲಿ ವಾಸವಿರುವ ಅಶ್ವತ್ಥ್ ನಾರಾಯಣ್ ಶೆಟ್ಟಿ, ಶೈಲಜಾ ದಂಪತಿಗಳು ಆರೋಗ್ಯ ತಪಾಸಣೆಗೆಂದು ಮನೆಗೆ ಬೀಗ ಹಾಕಿಕೊಂಡು ಕಳೆದ ಶುಕ್ರವಾರದಂದು ಬೆಂಗಳೂರಿಗೆ ಹೋಗಿರುತ್ತಾರೆ ಆರೋಗ್ಯ ತಪಾಸಣೆ ಮುಗಿಸಿಕೊಂಡವರು ಸಂಕ್ರಾಂತಿ ಹಬ್ಬದ ಪ್ರಯುಕ್ತ ಬೆಂಗಳೂರಿನಲ್ಲಿರುವ ಮಗ ಆಕಾಶ್ ಮನೆಗೆ ಹಬ್ಬಕ್ಕೆಂದು ಹೋಗಿದ್ದು ಅಲ್ಲೇ ಉಳಿದುಕೊಂಡಿರುತ್ತಾರೆ.
ಮೂರ್ನಾಲ್ಕು ದಿನಗಳಿಂದ ಬೀಗ ಜಡಿದಿರುವ ಮನೆಯನ್ನು ಗಮನಿಸಿದ ಖದೀಮರು ತಮ್ಮ ಕೈಚಳಕವನ್ನು ತೋರಿಸಿದ್ದಾರೆ. ಮನೆ ಬೀಗ ಒಡೆದು ಒಳಗೆ ನುಗ್ಗಿ ಎರಡು ಬೀರುಗಳನ್ನು ತೆಗೆದು 3 ಚಿನ್ನದ ನೆಕ್ಲೇಸ್ , 4 ಚಿನ್ನದ ಚೈನುಗಳು, 1 ಜೊತೆ ಬಳೆ, 3 ಬ್ರಾಸ್ಲೈಟ್, 7 ಚಿನ್ನದ ಉಂಗುರಗಳೊಂದಿಗೆ ಒಂದು ಲಕ್ಷ ರೂಪಾಯಿ ನಗದನ್ನು ದೋಚಿದ್ದಾರೆ ಎಂದು ಶೈಲಜಾ ತಿಳಿಸಿದ್ದಾರೆ.
ಅಶ್ವಥ್ ನಾರಾಯಣ್ ಶೆಟ್ಟಿ ತಮ್ಮನಾದ ಜನಾರ್ಧನ್ ಶೆಟ್ಟಿ ಅಣ್ಣನಿಗೆ ಫೋನಿನ ಮೂಲಕ ವಿಷಯ ತಿಳಿಸಿ ಕರಿಸಿದ್ದಾರೆ ಅದಕ್ಕೂ ಮುನ್ನ ಸ್ಥಳೀಯ ಪೊಲೀಸರಿಗೆ ಫೋನಿನ ಮೂಲಕ ವಿಷಯ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಚಂದ್ರಕಲಾ ಮತ್ತು ಸಿಬ್ಬಂದಿ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದು, ಬೆರಳಚ್ಚು ತಜ್ಞರು ಕರೆಸಿ ತನಿಖೆ ಮುಂದುವರಿಸಿದ್ದಾರೆ.
ಪೊಲೀಸರ ಮನವಿ: ಏನೆಂದರೆ ನಗರ ಮತ್ತು ತಾಲ್ಲೂಕಿನ ಜನತೆ ಮನೆಗಳಿಗೆ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಿ ಇಂತಹ ಘಟನೆಗಳು ಮರುಕಳಿಸದಂತೆ ಹಾಗೂ ಅಪರಾಧಿಗಳನ್ನು ಪತ್ತೆಹಚ್ಚಲು ಇಲಾಖೆಗೆ ಸಹಕಾರ ನೀಡಲು ಕೋರಲಾಗಿದೆ.
ಇಂತಹ ಘಟನೆಗಳು ವಾರ್ಡ್ಗಳಲ್ಲಿ ಮರುಕಳಿಸದೆ ಮುನ್ನಚ್ಚರಿಕೆಯಾಗಿ ಪೊಲೀಸ್ ಇಲಾಖೆ ವತಿಯಿಂದ ಈ ಹಿಂದೆ ವಾರ್ಡ್ ಬೀಟ್ ಸಭೆ ಕರೆದು ಸಾರ್ವಜನಿಕರಿಗೆ ಅಪರಾಧ ತಡೆಗಟ್ಟಲು ಜಾಗೃತಿಗೊಳಿಸಿದರು. ಎಚ್ಚೆತ್ತುಕೊಳ್ಳದ ಸಾರ್ವಜನಿಕರ ನಿರ್ಲಕ್ಷ್ಯಕ್ಕೆ ನಗರದಲ್ಲಿ ಪದೇಪದೇ ಕಳ್ಳತನಗಳು ನಡೆಯುತ್ತಲೇ ಇವೆ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

3 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

3 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

4 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

4 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

4 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

24 hours ago