Crime

ಗೌರಿಬಿದನೂರಿನಲ್ಲಿ ಶುರುವಾಯಿತು ಮತ್ತೆ ಕಳ್ಳರ ಕಾಟ.!

ಗೌರಿಬಿದನೂರು: ನಗರದ 12ನೇ ವಾರ್ಡ್ ತ್ಯಾಗರಾಜ ಕಾಲೋನಿಯ ಅಶ್ವತ್ಥ್ ನಾರಾಯಣ್ ಎಂಬುವರ ಮನೆಯ ಬೀಗ ಹೊಡೆದು ಕಳ್ಳರು ತಮ್ಮ ಕೈಚಳಕವನ್ನು ತೋರಿಸಿರುವ ಘಟನೆ ಗೌರಿಬಿದನೂರು ನಗರದ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ತ್ಯಾಗರಾಜ ಕಾಲೋನಿಯಲ್ಲಿ ವಾಸವಿರುವ ಅಶ್ವತ್ಥ್ ನಾರಾಯಣ್ ಶೆಟ್ಟಿ, ಶೈಲಜಾ ದಂಪತಿಗಳು ಆರೋಗ್ಯ ತಪಾಸಣೆಗೆಂದು ಮನೆಗೆ ಬೀಗ ಹಾಕಿಕೊಂಡು ಕಳೆದ ಶುಕ್ರವಾರದಂದು ಬೆಂಗಳೂರಿಗೆ ಹೋಗಿರುತ್ತಾರೆ ಆರೋಗ್ಯ ತಪಾಸಣೆ ಮುಗಿಸಿಕೊಂಡವರು ಸಂಕ್ರಾಂತಿ ಹಬ್ಬದ ಪ್ರಯುಕ್ತ ಬೆಂಗಳೂರಿನಲ್ಲಿರುವ ಮಗ ಆಕಾಶ್ ಮನೆಗೆ ಹಬ್ಬಕ್ಕೆಂದು ಹೋಗಿದ್ದು ಅಲ್ಲೇ ಉಳಿದುಕೊಂಡಿರುತ್ತಾರೆ.
ಮೂರ್ನಾಲ್ಕು ದಿನಗಳಿಂದ ಬೀಗ ಜಡಿದಿರುವ ಮನೆಯನ್ನು ಗಮನಿಸಿದ ಖದೀಮರು ತಮ್ಮ ಕೈಚಳಕವನ್ನು ತೋರಿಸಿದ್ದಾರೆ. ಮನೆ ಬೀಗ ಒಡೆದು ಒಳಗೆ ನುಗ್ಗಿ ಎರಡು ಬೀರುಗಳನ್ನು ತೆಗೆದು 3 ಚಿನ್ನದ ನೆಕ್ಲೇಸ್ , 4 ಚಿನ್ನದ ಚೈನುಗಳು, 1 ಜೊತೆ ಬಳೆ, 3 ಬ್ರಾಸ್ಲೈಟ್, 7 ಚಿನ್ನದ ಉಂಗುರಗಳೊಂದಿಗೆ ಒಂದು ಲಕ್ಷ ರೂಪಾಯಿ ನಗದನ್ನು ದೋಚಿದ್ದಾರೆ ಎಂದು ಶೈಲಜಾ ತಿಳಿಸಿದ್ದಾರೆ.
ಅಶ್ವಥ್ ನಾರಾಯಣ್ ಶೆಟ್ಟಿ ತಮ್ಮನಾದ ಜನಾರ್ಧನ್ ಶೆಟ್ಟಿ ಅಣ್ಣನಿಗೆ ಫೋನಿನ ಮೂಲಕ ವಿಷಯ ತಿಳಿಸಿ ಕರಿಸಿದ್ದಾರೆ ಅದಕ್ಕೂ ಮುನ್ನ ಸ್ಥಳೀಯ ಪೊಲೀಸರಿಗೆ ಫೋನಿನ ಮೂಲಕ ವಿಷಯ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಚಂದ್ರಕಲಾ ಮತ್ತು ಸಿಬ್ಬಂದಿ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದು, ಬೆರಳಚ್ಚು ತಜ್ಞರು ಕರೆಸಿ ತನಿಖೆ ಮುಂದುವರಿಸಿದ್ದಾರೆ.
ಪೊಲೀಸರ ಮನವಿ: ಏನೆಂದರೆ ನಗರ ಮತ್ತು ತಾಲ್ಲೂಕಿನ ಜನತೆ ಮನೆಗಳಿಗೆ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಿ ಇಂತಹ ಘಟನೆಗಳು ಮರುಕಳಿಸದಂತೆ ಹಾಗೂ ಅಪರಾಧಿಗಳನ್ನು ಪತ್ತೆಹಚ್ಚಲು ಇಲಾಖೆಗೆ ಸಹಕಾರ ನೀಡಲು ಕೋರಲಾಗಿದೆ.
ಇಂತಹ ಘಟನೆಗಳು ವಾರ್ಡ್ಗಳಲ್ಲಿ ಮರುಕಳಿಸದೆ ಮುನ್ನಚ್ಚರಿಕೆಯಾಗಿ ಪೊಲೀಸ್ ಇಲಾಖೆ ವತಿಯಿಂದ ಈ ಹಿಂದೆ ವಾರ್ಡ್ ಬೀಟ್ ಸಭೆ ಕರೆದು ಸಾರ್ವಜನಿಕರಿಗೆ ಅಪರಾಧ ತಡೆಗಟ್ಟಲು ಜಾಗೃತಿಗೊಳಿಸಿದರು. ಎಚ್ಚೆತ್ತುಕೊಳ್ಳದ ಸಾರ್ವಜನಿಕರ ನಿರ್ಲಕ್ಷ್ಯಕ್ಕೆ ನಗರದಲ್ಲಿ ಪದೇಪದೇ ಕಳ್ಳತನಗಳು ನಡೆಯುತ್ತಲೇ ಇವೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago