ಗೌರಿಬಿದನೂರು: ನಗರದ 12ನೇ ವಾರ್ಡ್ ತ್ಯಾಗರಾಜ ಕಾಲೋನಿಯ ಅಶ್ವತ್ಥ್ ನಾರಾಯಣ್ ಎಂಬುವರ ಮನೆಯ ಬೀಗ ಹೊಡೆದು ಕಳ್ಳರು ತಮ್ಮ ಕೈಚಳಕವನ್ನು ತೋರಿಸಿರುವ ಘಟನೆ ಗೌರಿಬಿದನೂರು ನಗರದ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ತ್ಯಾಗರಾಜ ಕಾಲೋನಿಯಲ್ಲಿ ವಾಸವಿರುವ ಅಶ್ವತ್ಥ್ ನಾರಾಯಣ್ ಶೆಟ್ಟಿ, ಶೈಲಜಾ ದಂಪತಿಗಳು ಆರೋಗ್ಯ ತಪಾಸಣೆಗೆಂದು ಮನೆಗೆ ಬೀಗ ಹಾಕಿಕೊಂಡು ಕಳೆದ ಶುಕ್ರವಾರದಂದು ಬೆಂಗಳೂರಿಗೆ ಹೋಗಿರುತ್ತಾರೆ ಆರೋಗ್ಯ ತಪಾಸಣೆ ಮುಗಿಸಿಕೊಂಡವರು ಸಂಕ್ರಾಂತಿ ಹಬ್ಬದ ಪ್ರಯುಕ್ತ ಬೆಂಗಳೂರಿನಲ್ಲಿರುವ ಮಗ ಆಕಾಶ್ ಮನೆಗೆ ಹಬ್ಬಕ್ಕೆಂದು ಹೋಗಿದ್ದು ಅಲ್ಲೇ ಉಳಿದುಕೊಂಡಿರುತ್ತಾರೆ.
ಮೂರ್ನಾಲ್ಕು ದಿನಗಳಿಂದ ಬೀಗ ಜಡಿದಿರುವ ಮನೆಯನ್ನು ಗಮನಿಸಿದ ಖದೀಮರು ತಮ್ಮ ಕೈಚಳಕವನ್ನು ತೋರಿಸಿದ್ದಾರೆ. ಮನೆ ಬೀಗ ಒಡೆದು ಒಳಗೆ ನುಗ್ಗಿ ಎರಡು ಬೀರುಗಳನ್ನು ತೆಗೆದು 3 ಚಿನ್ನದ ನೆಕ್ಲೇಸ್ , 4 ಚಿನ್ನದ ಚೈನುಗಳು, 1 ಜೊತೆ ಬಳೆ, 3 ಬ್ರಾಸ್ಲೈಟ್, 7 ಚಿನ್ನದ ಉಂಗುರಗಳೊಂದಿಗೆ ಒಂದು ಲಕ್ಷ ರೂಪಾಯಿ ನಗದನ್ನು ದೋಚಿದ್ದಾರೆ ಎಂದು ಶೈಲಜಾ ತಿಳಿಸಿದ್ದಾರೆ.
ಅಶ್ವಥ್ ನಾರಾಯಣ್ ಶೆಟ್ಟಿ ತಮ್ಮನಾದ ಜನಾರ್ಧನ್ ಶೆಟ್ಟಿ ಅಣ್ಣನಿಗೆ ಫೋನಿನ ಮೂಲಕ ವಿಷಯ ತಿಳಿಸಿ ಕರಿಸಿದ್ದಾರೆ ಅದಕ್ಕೂ ಮುನ್ನ ಸ್ಥಳೀಯ ಪೊಲೀಸರಿಗೆ ಫೋನಿನ ಮೂಲಕ ವಿಷಯ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಚಂದ್ರಕಲಾ ಮತ್ತು ಸಿಬ್ಬಂದಿ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದು, ಬೆರಳಚ್ಚು ತಜ್ಞರು ಕರೆಸಿ ತನಿಖೆ ಮುಂದುವರಿಸಿದ್ದಾರೆ.
ಪೊಲೀಸರ ಮನವಿ: ಏನೆಂದರೆ ನಗರ ಮತ್ತು ತಾಲ್ಲೂಕಿನ ಜನತೆ ಮನೆಗಳಿಗೆ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಿ ಇಂತಹ ಘಟನೆಗಳು ಮರುಕಳಿಸದಂತೆ ಹಾಗೂ ಅಪರಾಧಿಗಳನ್ನು ಪತ್ತೆಹಚ್ಚಲು ಇಲಾಖೆಗೆ ಸಹಕಾರ ನೀಡಲು ಕೋರಲಾಗಿದೆ.
ಇಂತಹ ಘಟನೆಗಳು ವಾರ್ಡ್ಗಳಲ್ಲಿ ಮರುಕಳಿಸದೆ ಮುನ್ನಚ್ಚರಿಕೆಯಾಗಿ ಪೊಲೀಸ್ ಇಲಾಖೆ ವತಿಯಿಂದ ಈ ಹಿಂದೆ ವಾರ್ಡ್ ಬೀಟ್ ಸಭೆ ಕರೆದು ಸಾರ್ವಜನಿಕರಿಗೆ ಅಪರಾಧ ತಡೆಗಟ್ಟಲು ಜಾಗೃತಿಗೊಳಿಸಿದರು. ಎಚ್ಚೆತ್ತುಕೊಳ್ಳದ ಸಾರ್ವಜನಿಕರ ನಿರ್ಲಕ್ಷ್ಯಕ್ಕೆ ನಗರದಲ್ಲಿ ಪದೇಪದೇ ಕಳ್ಳತನಗಳು ನಡೆಯುತ್ತಲೇ ಇವೆ.
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…
ಧಾರವಾಡ: 20 ವರ್ಷದ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ…
ಶೇಕ್ಪೇಟ್: ಪಶುಗಳ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದ್ದ ಅಮಾನವೀಯ ದಂಧೆಯೊಂದು ಬೆಳಕಿಗೆ ಬಂದು ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ. ಖಾಸಗಿ ಪಶು ವೈದ್ಯಕೀಯ…
ಧಾರವಾಡ: ಗಾಂಜಾ ಪ್ರಕರಣದಲ್ಲಿ ಹೆಸರು ಸೇರಿಸಲಾಗುತ್ತದೆ ಎಂಬ ಭಯದಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ…
ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಆರು ವಿದೇಶಿ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ನೊಳಗಿನ ನಾಯಕತ್ವದ ಗೊಂದಲ ಮತ್ತು ಅಸಮಾಧಾನದ ನಡುವೆಯೇ ಅಹಿಂದ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಅಹಿಂದ…