ಕೋಲಾರ ಜಿಲ್ಲೆಯಲ್ಲಿ ಒಂಟಿ ಮಹಿಳೆಯರ ಮೇಲೆ ಕಣ್ಣಿಟ್ಟಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿ, ಸುಮಾರು 9 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರು ಶಶಿಧರ್ (ವಯಸ್ಸು 39), ಹರ್ಷಿತ್ (25) ಮತ್ತು ಸೂರ್ಯಪ್ರಕಾಶ್ (24) ಎಂದು ಗುರುತಿಸಲಾಗಿದ್ದು, ಇವರು ಕೋಲಾರ ನಗರ ಪೊಲೀಸ್ ಹಾಗೂ ಬಂಗಾರಪೇಟೆ ಠಾಣೆಗಳ ವ್ಯಾಪ್ತಿಯಲ್ಲಿ ಸರಗಳ್ಳತನ ನಡೆಸಿದ್ದರು ಎಂಬ ಆರೋಪಕ್ಕೆ ಒಳಪಟ್ಟಿದ್ದಾರೆ.
ಇವರ ಚಟುವಟಿಕೆ ಬಗ್ಗೆ ಮಾಹಿತಿ ಪಡೆದ ಪೊಲೀಸರು, ವಿಶೇಷ ತನಿಖಾ ತಂಡವನ್ನು ರಚಿಸಿ, ನಿರಂತರ ಶೋಧ ಕಾರ್ಯ ನಡೆಸಿದ ಫಲಿತಾಂಶವಾಗಿ ಆರೋಪಿಗಳನ್ನು ಹಿಡಿಯಲು ಸಾಧ್ಯವಾಯಿತು. ತನಿಖೆಯ ಮುಂದುವರೆದಂತೆ, ಆರೋಪಿಗಳಿಂದ 95 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ಕೃತ್ಯದಲ್ಲಿ ಬಳಸಲಾದ ಎರಡು ಹೊಂಡಾ ಶೈನ್ ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪೊಲೀಸ್ ಇಲಾಖೆ ಆರೋಪಿಗಳ ಹಿಂದಿನ ಕ್ರಿಮಿನಲ್ ಹಿನ್ನಲೆಯ ಬಗ್ಗೆ ಇನ್ನೂ ತನಿಖೆ ಮುಂದುವರಿಸಿದೆ. ಮಹಿಳೆಯರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ನಕಲಿ ಸಿಗರೇಟು ಮಾರಾಟ ಪ್ರಕರಣ ಬೆಳಕಿಗೆ ಬಂದಿದ್ದು, ದುಬೈನಿಂದ ಅಕ್ರಮವಾಗಿ ಸಿಗರೇಟು ತರಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ…
ಕಡಬ ತಾಲೂಕಿನ ಕೋಡಿಂಬಾಳದ ಕೋರಿಯಾರ್ ಸಮೀಪದ ರೈಲ್ವೇ ಟ್ರ್ಯಾಕ್ ಬಳಿ ಜೂನ್ 8ರಂದು ಮನಭಾರ ಹಾಕುವಂತಹ ದಾರుణ ಘಟನೆಯೊಂದು ನಡೆದಿದ್ದು,…
ರಾಜಸ್ಥಾನದ ರಾಮ್ಗಢ ಪ್ರದೇಶದಲ್ಲಿರುವ ಇಎಸ್ಐಸಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ 32 ವರ್ಷದ ಮಹಿಳೆಯೊಬ್ಬರು, ಚಿಕಿತ್ಸೆಗಾಗಿ ಐಸಿಯುವಿನಲ್ಲಿ ಇದ್ದ ವೇಳೆ,…
ಬೆಂಗಳೂರು ಮತ್ತು ಅದರ ಸುತ್ತಮುತ್ತ ನೈತಿಕ ಪೊಲೀಸ್ ಗಿರಿಯ ಘಟನೆಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, ರಾಮನಗರದಲ್ಲಿ ಮತ್ತೊಂದು ಇಂತಹ ಘಟನೆ ನಡೆದಿದೆ.…
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಯರಹಳ್ಳಿ ಗ್ರಾಮದಲ್ಲಿ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ…
ಬಸವಕಲ್ಯಾಣಕ್ಕೆ ಹೋರಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು ಪರಿಶೀಲಿಸಿದ ಘಟನೆಯೊಂದು ಶನಿವಾರ ಹುಲಸೂರ ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದೆ. ಗಡಿಗೌಡಗಾಂವ ಗ್ರಾಮದ ರೈತನಿಗೆ…