ಕಳೆದೊಂದು ವಾರದಿಂದ ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲಮರದ ತಿಮ್ಮಕ್ಕ ಅವರು ಬೇಲೂರಿನ ಸಂಬಂಧಿಕರ ಮನೆಗೆ ಹೋದಾಗ ಮನೆಯಲ್ಲಿ ಬಿದ್ದು ಅನಾರೋಗ್ಯ ಉಂಟಾಗಿದ್ದು, ಹಾಸನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅಲ್ಲಿ ಚಿಕಿತ್ಸೆಗೆ ಹೆಚ್ಚಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಇನ್ನು ಬೆಂಗಳೂರಿನ ಸದ್ಯ ವೈದ್ಯರು ತಿಮ್ಮಕ್ಕ ಅವರಿಗೆ ವಿಶೇಷ ವಾರ್ಡ್ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.
ನಿರಂತರವಾಗಿ ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದು, ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಆದರೆ, ಕೆಲವರು ಸಾಲು ಮರದ ತಿಮ್ಮಕ್ಕ ಅವರು ಬದುಕಿರುವಾಗಲೇ ಸತ್ಯಾಂಶ ತಿಳಿದುಕೊಳ್ಳದೇ ಭಾವಪೂರ್ಣ ಶ್ರದ್ಧಾಂಜಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ಮನವಿ ಮಾಡಿರುವ ಅವರ ದತ್ತುಪುತ್ರ ಉಮೇಶ್ ಆಸ್ಪತ್ರೆಯಲ್ಲಿ ತಿಮ್ಮಕ್ಕ ಚೇತರಿಕೆ ಕಾಣಿಸಿಕೊಂಡಿರುವ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…