ಹುಬ್ಬಳ್ಳಿ: “ಮನೆಗೆ ಬೇಕಾದ ಎಲ್ಲವನ್ನೂ ತಂದುಕೊಟ್ಟಿದ್ದರೂ, ನನ್ನದೇ ಮೇಲೆ ನಿಂದನೆ ಹಾಗೂ ಹಲ್ಲೆ ನಡೆದಿದೆ” ಎಂಬ ಗಂಭೀರ ಆರೋಪವನ್ನು ತಿಪ್ಪನಗೌಡ ಪಾಟೀಲ್ ಎಂಬವರು ದಾಖಲಿಸಿದ್ದು, ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾರಿಹಾಳ ಬಳಿಯ ರಾಮನಗರ ನಿವಾಸಿಯಾದ ತಿಪ್ಪನಗೌಡ ಪಾಟೀಲ್ ಅವರು ದೂರು ನೀಡಿರುವ ಪ್ರಕಾರ, ತಮ್ಮ ಪತ್ನಿ ಗೀತಾ ಮತ್ತು ಮಾವ ಶಂಕ್ರಪ್ಪ ಸವದತ್ತಿ ಇಬ್ಬರೂ ಸೇರಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಕಿರಾಣಿ ಸಾಮಗ್ರಿ ತರುವ ಕುರಿತು ಮಾತುಳಿದಾಗ ಗೀತಾ ಮತ್ತು ಶಂಕ್ರಪ್ಪ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ದೈಹಿಕವಾಗಿ ದೌರ್ಜನ್ಯ ಎಸಗಿದರೆಂದು ದೂರಿನಲ್ಲಿ ತಿಳಿಸಿದ್ದಾರೆ.
“ನಾನು ಮನೆಗೆ ಬೇಕಾದ ವಸ್ತುಗಳನ್ನು ಎಲ್ಲವನ್ನೂ ತಂದುಕೊಡುತ್ತಿದ್ದರೂ, ಹಣ ನೀಡುತ್ತಿಲ್ಲ ಎಂದು ನನ್ನನ್ನು ಅಪಮಾನದ ಪದಗಳಲ್ಲಿ ನಿಂದಿಸುತ್ತಿದ್ದಾರೆ. ನಾನು ಏಕೆ ಬೈಯುತ್ತೀರಿ ಎಂದು ಕೇಳಿದ್ದಕ್ಕಷ್ಟೇ ಹಲ್ಲೆ ನಡೆಸಲಾಯಿತು” ಎಂಬುದಾಗಿ ತಿಪ್ಪನಗೌಡ ತಮ್ಮ ದೂರಿನಲ್ಲಿ ವಿವರಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…