Latest

ಪವಿತ್ರಾ ಲೋಕೇಶ್ ಗೆ ದುಡ್ಡಿನ ದಾಹ: ವೈರಲ್ ಆಯ್ತು ನಟ ಸುಚೇಂದ್ರ ಪ್ರಸಾದ್ ಹೇಳಿಕೆ

ಇತ್ತೀಚೆಗೆ ತೆಲುಗು ನಟ ನರೇಶ್ ಹಾಗೂ ಕನ್ನಡದ ನಟಿ ಪವಿತ್ರಾ ಲೋಕೇಶ್ ಮದುವೆಯಾಗಿದ್ದು, ದುಬೈನಲ್ಲಿ ಒಟ್ಟಿಗೆ ಓಡಾಡುತ್ತಿರುವ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗುತ್ತಿದ್ದಂತೆಯೇ ಸುಚೇಂದ್ರ ಪ್ರಸಾದ್ ಹೇಳಿದ್ದಾರೆ ಎನ್ನಲಾದ ಆಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸುಚೇಂದ್ರ ಪ್ರಸಾದ್ ಮಾಜಿ ಪತ್ನಿ ಪವಿತ್ರಾ ಲೋಕೇಶ್ ದುಡ್ಡಿಗಾಗಿ ಏನೆಲ್ಲ ಮಾಡುತ್ತಾಳೆ. ನರೇಶ ಹಿಂದೆ ಬಿದ್ದಿರುವ ಕಾರಣವೂ ಅದೆ. ಆಕೆಗೆ ದುಡ್ಡಿನ ದಾಹ ಎಂದು ಆಡಿಯೋದಲ್ಲಿ ಹೇಳಿದ್ದು, ಆಡಿಯೋ ಕೇಳಿದ ಅನೇಕರು ನಾನಾ ರೀತಿಯಲ್ಲಿ ಮಾತನಾಡುತ್ತಿದ್ದಾರೆ.
ಪವಿತ್ರಾ ಲೋಕೇಶ್ ಮತ್ತು ನರೇಶ್ ದುಬೈನಲ್ಲಿ ಕಾಣಿಸಿಕೊಂಡ ಮೂರು ದಿನಗಳ ಮುಂಚೆ ಇಬ್ಬರೂ ಮದುವೆಯಾಗಿದ್ದಾರೆ ಎನ್ನುವ ವಿಡಿಯೋವನ್ನು ಸ್ವತಃ ನರೇಶ್ ಪೋಸ್ಟ್ ಮಾಡಿಕೊಂಡಿದ್ದರು. ಈ ವಿಡಿಯೋ ರಿಲೀಸ್ ಆದ ಬೆನ್ನಲ್ಲೇ ದುಬೈ ಟ್ರೀಪ್ ಫೋಟೋಗಳು ಕೂಡ ವೈರಲ್ ಆಗಿದ್ದು, ಮದುವೆ ಮುಗಿಸಿಕೊಂಡು ಇಬ್ಬರೂ ಹನಿಮೂನ್ ಗೆ ಹೋಗಿದ್ದಾರೆ ಎಂದು ಹೇಳಲಾಗಿತ್ತು.
ಈ ಮದುವೆ, ಹನಿಮೂನ್ ಬಗ್ಗೆ ಮಾಧ್ಯಮಗಳಿಗೆ ಯಾವುದೇ ರೀತಿಯಲ್ಲಿ ಸ್ಪಷ್ಟನೆ ನೀಡಿಲ್ಲ ನರೇಶ್. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹೇಳುತ್ತೇನೆ ಎಂದು ಹೇಳುವ ಮೂಲಕ ಮಾಧ್ಯಮಗಳಿಂದ ನರೇಶ್ ಜಾರಿಕೊಂಡಿದ್ದಾರೆ. ಈ ಮಧ್ಯೆ ಸುಚೇಂದ್ರ ಪ್ರಸಾದ್ ಹೇಳಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ಭ್ರಷ್ಟರ ಬೇಟೆ

Recent Posts

ಕೆರೆಗೆ ಬಿದ್ದು ಜೀವ ಕಳೆದುಕೊಂಡ ಮೂರು ವರ್ಷದ ಅವಳಿ ಮಕ್ಕಳು: ಯರಿ ನಾರಾಯಣಪುರದಲ್ಲಿ ದುರ್ಘಟನೆ, ಗ್ರಾಮದಲ್ಲಿ ಆಕ್ರಂದನ

ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…

4 hours ago

ಪ್ರಚಾರ ವಿವಾದಕ್ಕೆ ರಚಿತಾ ರಾಮ್ ಗಟ್ಟಿ ಪ್ರತಿಕ್ರಿಯೆ: ತಪ್ಪು ಮಾಡಿಲ್ಲ, ಕ್ಷಮೆ ಕೇಳುವುದಿಲ್ಲ!

ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…

5 hours ago

ಭಟ್ಕಳದಲ್ಲಿ ಜೂಜಾಟದ ಕ್ಲಬ್ ಮೇಲೆ ದಾಳಿ : 25 ಮಂದಿ ವಿರುದ್ಧ ಪೊಲೀಸ್ ಕ್ರಮ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್‌ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…

5 hours ago

30 ವರ್ಷದ ಹಿಂದಿನ ಲಂಚ ಪ್ರಕರಣ: ನಿವೃತ್ತಿಗೆ 10 ವರ್ಷವಾದ ಮೇಲೆ ಗ್ರಾಮ ಲೆಕ್ಕಾಧಿಕಾರಿಗೆ ಜೈಲುದಂಡ

ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…

9 hours ago

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

15 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

1 day ago