ಬನವಾಸಿಯ ವರದಾ ನದಿಯ ನೀರಿನ ರಭಸಕ್ಕೆ ಸಾವಿರಾರು ಎಕರೆ ಪ್ರದೇಶ ಜಲಾವೃತವಾಗಿದೆ, ಇಷ್ಟು ದಿನ ಜಿಲ್ಲೆಯ ಗಟ್ಟದ ಕೆಳಭಾಗದಲ್ಲಿ ಮಳೆಯು ಅವಾಂತರ ಸೃಸ್ಟಿಯಾದರೆ ಈಗ ಗಟ್ಟದ ಮೇಲಿನ ತಾಲುಕು ಪ್ರದೇಶದಲ್ಲಿ ಮಳೆಯ ಆರ್ಭಟಕ್ಕೆ ಹಳ್ಳ ಕೆರೆಗಳು ನದಿಗಳು ತುಂಬಿ ತುಳುಕುತ್ತಿದೆ.
ಉತ್ತರಕನ್ನಡ ಜಿಲ್ಲೆಯಾದ್ಯಂತ ಬಾರಿ ಮಳೆಯಿಂದ ಸಾಕಷ್ಟು ಅನಾಹುತಗಳು ಸಂಭವಿಸಿದೆ, ಗಟ್ಟದ ಕೆಳಗಿನ ಪ್ರದೇಶಗಳಲ್ಲಿ ತುಂಬಾ ಮಳೆಯಾಗುತ್ತಿದ್ದು ನದಿಗಳು ಉಕ್ಕಿ ಹರಿಯುತ್ತಿದೆ,ಹಾಗೂ ಗುಡ್ಡ ಕುಸಿದು ಶಿರಸಿ ಕುಮಟಾ ರಸ್ತೆ ಮಾರ್ಗ ಬಂದಾಗಿದ್ದು ಹಾಗೂ ಶೀರೂರು ಎಂಬಲ್ಲಿ ಗುಡ್ಡ ಕುಸಿದು ಸುಮಾರು ಜನರ ಪ್ರಾಣ ಮಣ್ಣಿನಡಿ ಮತ್ತು ಜಲಸಮಾಧಿ ಆಗಿದ್ದಾರೆ, ಇನ್ನು ಗಟ್ಟದ ಕೆಳಭಾಗದಲ್ಲಿ ಇಂತಹ ಘಟನೆ ನಡೆದಿದೆ,ಗಟ್ಟದ ಮೇಲಿನ ಪ್ರದೇಶದಲ್ಲಿ ಕೂಡ ಸಣ್ಣ ಪುಟ್ಟ ಸಮಸ್ಯೆ ಉಂಟಾಗುತ್ತಿದೆ ,ಶಿರಸಿಯಲ್ಲಿ ಬರುವ ಬನವಾಸಿಯ ಜೀವನದಿ ಎಂದೇ ಕರೆಯುತ್ತಾರೆ ಈ ವರದ ನದಿಯನ್ನು ಈ ನದಿಯು ಈಗ ಅಪಾರ ಮಟ್ಟದ ಮಳೆಯಿಂದ ಉಕ್ಕಿ ಹರಿಯುತ್ತಿದ್ದು, ಈಗಾಗಲೇ ಸಾಕಷ್ಟು ಕೃಷಿ ಭೂಮಿ ಮುಳುಗಡೆ ಆಗಿದ್ದು ಬನವಾಸಿಯ ಮೊಗವಲ್ಲಿ,ಭಾಷಿ ,ಅಜ್ಜರಣಿ, ತಿಗಣೆ ಗ್ರಾಮಗಳಲ್ಲಿ ನದಿಯ ನೀರು ನುಗ್ಗಿ ಬತ್ತ ಅನಾನಸ್ ಅಡಿಕೆ ಬಾಳೆ ಶುಂಠಿ ಎಲ್ಲ ಬೆಳೆಗಳಿಗೆ ನೀರು ನುಗ್ಗಿದ ಪರಿಣಾಮ ಬೇಳೆ ನಾಶವಾಗಿದ್ದು ರೈತರೂ ನಷ್ಟ ಅನುಭವಿಸು ವಂತಾಗಿದೆ ,ಹೀಗೆಯೇ ಇನ್ನು ಮಳೆ ಮುಂದು ವರೆದರೆ ಇನ್ನು ಸಮಸ್ಯೆ ಉಂಟಾಗುವ ಸಾಧ್ಯತೆಗಳಿವೆ.
ವರದಿ: ಶ್ರೀಪಾದ್ ಎಸ್.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…