ಚಿಕ್ಕಬಳ್ಳಾಪುರ: ಮುಂಬೈನ ಎನ್ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ಹೆಸರನ್ನು ದುರ್ಬಳಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಎಸಗಿರುವ ಶಾಕಿಂಗ್ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ನಗರ ನಿವಾಸಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿವೃತ್ತ ಅಧಿಕಾರಿ ಬಿಕೆ ರಾಮಚಂದ್ರಪ್ಪ ಮತ್ತು ಅವರ ಪತ್ನಿ ವಂಚಕರ ಬಲೆಗೆ ಬಿದ್ದು ₹12.63 ಲಕ್ಷ ಕಳೆದುಕೊಂಡಿದ್ದಾರೆ.
ವಂಚಕರು ದಂಪತಿಗೆ ಮೊದಲು ಮಟಾಶ್ ಮಾಡಿದಂತೆ ವಿಡಿಯೋ ಕಾಲ್ ಮೂಲಕ ಸಂಪರ್ಕಿಸಿಕೊಂಡು, ದಯಾನಾಯಕ್ ಅವರಂತೆ ನಟಿಸಿ ಮಾತನಾಡಿದ್ದಾರೆ. “ನಿಮ್ಮ ಹೆಸರಿನಲ್ಲಿ ಮನಿ ಲ್ಯಾಂಡರಿಂಗ್ ಪ್ರಕರಣವಿದೆ. ನಿಮಗೆ ಏನೇನು ಆಗಬಹುದು” ಎಂದು ಬೆದರಿಕೆ ಹಾಕಿದ ಇವರು, ದಂಪತಿಯಿಂದ ಹಣ ಪಡಾಯಿಸಲು ಸೊಜ್ಜು ತಂತ್ರ ಬಳಕೆ ಮಾಡಿದ್ದಾರೆ.
ತಮ್ಮ ವಿರುದ್ಧ ಪ್ರಕರಣವಿದೆ ಎಂಬ ಭಯದಲ್ಲಿ ದಂಪತಿ ಬ್ಯಾಂಕ್ನಲ್ಲಿದ್ದ ಚಿನ್ನಾಭರಣಗಳನ್ನು ರದ್ದುಮಾಡಿ, ಆ ಹಣವನ್ನು ವಂಚಕರ ಹೇಳಿದ ಖಾತೆಗೆ ವರ್ಗಾಯಿಸಿದ್ದಾರೆ. ಮುಂಬೈ ಕೋಬ್ಲಾ ಪೊಲೀಸ್ ಠಾಣೆಯಿಂದ ಕರೆ ಬರುತ್ತಿದೆ ಎಂಬ ನಕಲಿ ನಾಟಕವನ್ನೂ ಸೈಬರ್ ಕ್ರಿಮಿನಲ್ ಗಳು ಮಾಡಿದ್ದರು.
ಈ ವಂಚನೆ ಸಂಬಂಧ ಚಿಕ್ಕಬಳ್ಳಾಪುರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚುವಿಗಾಗಿ ತನಿಖೆ ಮುಂದುವರಿದಿದೆ.
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…