Latest

ದಯಾನಾಯಕ್ ಹೆಸರಿನಲ್ಲಿ ಬೆದರಿಕೆ: ನಿವೃತ್ತ ಅಧಿಕಾರಿಗಳ ದಂಪತಿಗೆ ₹12.63 ಲಕ್ಷ ಸೈಬರ್ ವಂಚನೆ

ಚಿಕ್ಕಬಳ್ಳಾಪುರ: ಮುಂಬೈನ ಎನ್ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ಹೆಸರನ್ನು ದುರ್ಬಳಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಎಸಗಿರುವ ಶಾಕಿಂಗ್ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ನಗರ ನಿವಾಸಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿವೃತ್ತ ಅಧಿಕಾರಿ ಬಿಕೆ ರಾಮಚಂದ್ರಪ್ಪ ಮತ್ತು ಅವರ ಪತ್ನಿ ವಂಚಕರ ಬಲೆಗೆ ಬಿದ್ದು ₹12.63 ಲಕ್ಷ ಕಳೆದುಕೊಂಡಿದ್ದಾರೆ.

ವಂಚಕರು ದಂಪತಿಗೆ ಮೊದಲು ಮಟಾಶ್ ಮಾಡಿದಂತೆ ವಿಡಿಯೋ ಕಾಲ್ ಮೂಲಕ ಸಂಪರ್ಕಿಸಿಕೊಂಡು, ದಯಾನಾಯಕ್ ಅವರಂತೆ ನಟಿಸಿ ಮಾತನಾಡಿದ್ದಾರೆ. “ನಿಮ್ಮ ಹೆಸರಿನಲ್ಲಿ ಮನಿ ಲ್ಯಾಂಡರಿಂಗ್ ಪ್ರಕರಣವಿದೆ. ನಿಮಗೆ ಏನೇನು ಆಗಬಹುದು” ಎಂದು ಬೆದರಿಕೆ ಹಾಕಿದ ಇವರು, ದಂಪತಿಯಿಂದ ಹಣ ಪಡಾಯಿಸಲು ಸೊಜ್ಜು ತಂತ್ರ ಬಳಕೆ ಮಾಡಿದ್ದಾರೆ.

ತಮ್ಮ ವಿರುದ್ಧ ಪ್ರಕರಣವಿದೆ ಎಂಬ ಭಯದಲ್ಲಿ ದಂಪತಿ ಬ್ಯಾಂಕ್‌ನಲ್ಲಿದ್ದ ಚಿನ್ನಾಭರಣಗಳನ್ನು ರದ್ದುಮಾಡಿ, ಆ ಹಣವನ್ನು ವಂಚಕರ ಹೇಳಿದ ಖಾತೆಗೆ ವರ್ಗಾಯಿಸಿದ್ದಾರೆ. ಮುಂಬೈ ಕೋಬ್ಲಾ ಪೊಲೀಸ್ ಠಾಣೆಯಿಂದ ಕರೆ ಬರುತ್ತಿದೆ ಎಂಬ ನಕಲಿ ನಾಟಕವನ್ನೂ ಸೈಬರ್ ಕ್ರಿಮಿನಲ್ ಗಳು ಮಾಡಿದ್ದರು.

ಈ ವಂಚನೆ ಸಂಬಂಧ ಚಿಕ್ಕಬಳ್ಳಾಪುರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚುವಿಗಾಗಿ ತನಿಖೆ ಮುಂದುವರಿದಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

12 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

12 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

12 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

12 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago