Latest

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ – ಮಹಿಳೆಯರಿಗೆ ವಾಟ್ಸಾಪ್‌ನಲ್ಲಿ ಬೆತ್ತಲೆಗೊಳಿಸಿ ₹58,000 ವಂಚನೆ

ಬೆಂಗಳೂರು: ತಂತ್ರಜ್ಞಾನ ಬಳಸಿ ಮಹಿಳೆಯರನ್ನು ಮೋಸಗೊಳಿಸಿರುವ ಗಂಭೀರ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ‘ಡಿಜಿಟಲ್ ಅರೆಸ್ಟ್’ ಎಂಬ ಹೊಸ ಸಂಜ್ಞೆಯಡಿ, ಸೈಬರ್ ಅಪರಾಧಿಗಳು ಪೊಲೀಸರಂತೆ ವರ್ತಿಸಿ ಮಹಿಳೆಯರಿಗೆ ಪೀಡನೆ ನೀಡಿದ ಘಟನೆ ಜುಲೈ 17ರಂದು ನಡೆದಿದೆ. ಪ್ರಕರಣ ಇದೀಗ ಬಹಿರಂಗವಾಗಿದೆ.

ಮುಂಬೈ ಪೊಲೀಸರು ಎಂಬ ನಾಟಕ:
ಆರೋಪಿಗಳು ಮುಂಬೈ ಪೊಲೀಸರು ಎಂದು ತನ್ನನ್ನು ಪರಿಚಯಿಸಿಕೊಂಡು, ಜೆಟ್ ಏರ್‌ವೇಸ್‌ಗೆ ಸಂಬಂಧಪಟ್ಟ ದೊಡ್ಡ ಹಗರಣದಲ್ಲಿ ನೀವು ಭಾಗಿಯಾಗಿದ್ದೀರಿ ಎಂದು ಮಹಿಳೆಯರಿಗೆ ಆರೋಪ ಹೊರಿಸಿದ್ದಾರೆ. ಹಣಕಳಿಗೆ, ಮಾನವ ಕಳ್ಳಸಾಗಣೆ, ಕೊಲೆ ಪ್ರಕರಣ ಸೇರಿ ಗಂಭೀರ ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ ಎಂದು ಬೆದರಿಸಿ ಮನೋವೈಜ್ಞಾನಿಕ ಒತ್ತಡದೊಳಗೆ ಹಾಕಿದ್ದಾರೆ.

ವಿಡಿಯೋ ಕಾಲ್‌ನಲ್ಲಿ ದೌರ್ಜನ್ಯ:
ನಕಲಿ ತನಿಖೆಯ ನೆಪದಲ್ಲಿ, ಮಹಿಳೆಯರ ಆಧಾರ್ ವಿವರಗಳನ್ನು ಹೇಳಿ ಅವರನ್ನು ಬಂಧಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಬಳಿಕ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ದೈಹಿಕ ತಪಾಸಣೆಯ ಹೆಸರಿನಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸುವಂತೆ ಒತ್ತಾಯಿಸಿದ್ದಾರೆ. ಅಂದಾಜು 9 ಗಂಟೆಗಳ ಕಾಲ ಈ ವಿಡಿಯೋ ಕಾಲ್‌ಗಳನ್ನು ನಿರಂತರವಾಗಿ ನಡೆಸಿ ಮಾನಸಿಕ ಕಿರುಕುಳ ನೀಡಿದ್ದಾರೆ.

ಹಣ ಕಳವು – ಮನಸ್ಸು ಗೆದ್ದ ದೌರ್ಜನ್ಯ:
ತಂತ್ರಜ್ಞಾನ ಬಳಸಿದ ಆರೋಪಿಗಳು ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಿಂದ ಸುಮಾರು ₹58,000 ಹಣವನ್ನೂ ಎಗರಿಸಿದ್ದಾರೆ. ಈ ಎಲ್ಲವನ್ನೂ ‘ಡಿಜಿಟಲ್ ಅರೆಸ್ಟ್’ ಎನ್ನುವ ಹೆಸರಿನಲ್ಲಿ ಮಾಡಿಕೊಂಡಿದ್ದಾರೆ. ತಡವಾಗಿ ಇದೊಂದು ವಂಚನೆ ಎಂಬುದನ್ನು ಮಹಿಳೆಯರು ಅರಿತ ಬಳಿಕ, ಶಿವಾಜಿನಗರ ಸಿಇಎನ್‌ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಸೈಬರ್ ಪೀಡೆಗೆ ಮುಚ್ಚಳ!:
ಈ ಪ್ರಕರಣ ಮತ್ತೊಮ್ಮೆ ಸೈಬರ್ ಅಪರಾಧಿಗಳ ಕ್ರೌರ್ಯವನ್ನು ಬೆಳಕಿಗೆ ತರುತ್ತಿದ್ದು, ಮಹಿಳೆಯರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಇರುವ ಅಗತ್ಯವಿದೆ. ವಾಸ್ತವದ ತನಿಖೆ ಎಂದರೆ ಹೇಗಿರಬೇಕು ಎಂಬ ಪ್ರಶ್ನೆ ನಿರ್ಮಾಣವಾಗಿರುವ ಈ ಪ್ರಕರಣದ ಕುರಿತು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

13 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

20 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

20 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago