ಮಂಗಳೂರು: ಕಾವೂರು ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ತಲವಾರು ತೋರಿಸಿ ಇಬ್ಬರು ನಾಗರಿಕರನ್ನು ಬೆದರಿಸಿರುವ ಘಟನೆ ವರದಿಯಾಗಿದೆ. ಸಂಘಪರಿವಾರದ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಈ ಘಟನೆ ನಡೆದಿರುವುದರಿಂದ ಸ್ಥಳೀಯರಲ್ಲೂ ಆತಂಕ ಮನೆಮಾಡಿದೆ.
ಪಂಜಿಮೊಗರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಂಜಿಮೊಗರು ನಿವಾಸಿ ಮೊಯ್ದಿನಬ್ಬ (37) ಮತ್ತು ಶಾಂತಿನಗರದ ನಾಸಿರ್ (38) ಎಂಬವರನ್ನು ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲವಾರು ತೋರಿಸಿ ಬೆದರಿಸಿದ್ದಾರೆ. ಅವರು ಹೆಲ್ಮೆಟ್ ಧರಿಸಿದ್ದಾಗಿದ್ದು, ತಲವಾರು ಹಾಯಿಸಿ ಬೆದರಿಕೆಯುಂಟುಮಾಡಿ ಸ್ಥಳದಿಂದ ಪರಾರಿಯಾದರೆನ್ನಲಾಗಿದೆ.
ಈ ಬಗ್ಗೆ ಸಂತ್ರಸ್ತರು ಕಾವೂರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, “ನಮ್ಮ ಮೇಲೆ ಹಲ್ಲೆ ನಡೆಸಲು ಸಂಚು ರೂಪಿಸಲಾಗಿತ್ತು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ಘಟನೆಯು ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದ್ದು, ಪೊಲೀಸರಿಂದ ಹೆಚ್ಚಿನ ಪೇಟ್ರೋಲಿಂಗ್ ಕೈಗೊಳ್ಳಲಾಗಿದೆ.
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…