Crime

ಬಾಲ್ಯ ವಿವಾಹ ಆದವರಿಗೆ ಬೆದರಿಕೆ; ಯೂಟ್ಯೂಬ್ ಚಾನಲ್ ವರದಿಗಾರ ಅಂದರ್!

ಹಾವೇರಿ ಜಿಲ್ಲೆಯಲ್ಲಿ 2024ರಲ್ಲಿ ದಾಖಲಾಗಿದ್ದ ಪೋಕ್ಸೊ (ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆಯ ಪ್ರಕರಣದಲ್ಲಿ ಹಣಕ್ಕಾಗಿ ಬೇಡಿಕೆ ಹಾಕಿ ಸಂತ್ರಸ್ತೆಗೆ ಬೆದರಿಕೆ ಒಡ್ಡಿದ ಆರೋಪದಡಿ, ಹಿರೇಕೆರೂರು ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಅವರು ನೀಡಿದ ಮಾಹಿತಿಯ ಪ್ರಕಾರ, ಪ್ರಕರಣದಲ್ಲಿ ತ್ವರಿತಗತಿ ನ್ಯಾಯಾಲಯ ಇಬ್ಬರ ವಿರುದ್ಧ ಜಾಮೀನುರಹಿತ ವಾರೆಂಟ್ ಹೊರಡಿಸಿತ್ತು. ವಾರೆಂಟ್ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಪವನ್ ಮತ್ತು ಮಹದೇವಪ್ಪ ಮಾಳಮ್ಮನವರನ್ನು ಬಂಧಿಸಿದ್ದಾರೆ. ಎರಡೂ ಆರೋಪಿಗಳನ್ನು ಈಗ ನ್ಯಾಯಾಂಗ ಬಂಧನಕ್ಕೆ  ಒಪ್ಪಿಸಲಾಗಿದೆ.

2024ರಲ್ಲಿ ದಾಖಲಾಗಿದ್ದ ಪ್ರಕರಣದ ಹಿನ್ನೆಲೆ                                                                                                            ಹಿರೇಕೆರೂರು ಠಾಣೆಯಲ್ಲಿ ಬಾಲಕಿಯ ಮಾವ (ತಾಯಿಯ ತಮ್ಮ) ನೀಡಿದ ದೂರಿನ ಮೇರೆಗೆ 2024ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಾಲಕಿಯನ್ನು ಬಾಲ್ಯವಿವಾಹ ಮಾಡಿಕೊಂಡ ಯುವಕ, ಅವರ ಕುಟುಂಬದವರು ಹಾಗೂ ಬಾಲಕಿಯ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿತ್ತು. ಎಲ್ಲಾ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.                                                                                                                                                                                      164ರಡಿ ಬಾಲಕಿಯ ಹೇಳಿಕೆ: ಬಾಲಕಿಯು ಇತ್ತೀಚೆಗೆ ನ್ಯಾಯಾಲಯದಲ್ಲಿ ತನ್ನ ಹೇಳಿಕೆ (ಸಿಆರ್‌ಪಿಸಿ 164ರಡಿ) ದಾಖಲಿಸಿದ್ದಾರೆ. ಈ ಹೇಳಿಕೆಯ ಆಧಾರದ ಮೇಲೆ ನ್ಯಾಯಾಲಯವು ವಾರೆಂಟ್ ಜಾರಿಗೊಳಿಸಿತ್ತು. ಅಲ್ಲದೆ, ಪ್ರಕರಣದಲ್ಲಿ ಆರೋಪಿಯಲ್ಲೊಬ್ಬ ಮಹಿಳೆ ಸ್ವಯಂ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಪ್ರಕರಣ ಮುಚ್ಚಲು ಹಣದ ಬೇಡಿಕೆ:  ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಬಾಲ್ಯವಿವಾಹದ ಪ್ರಕರಣ ಕುರಿತು “ಯೂಟ್ಯೂಬ್ ಚಾನೆಲ್” ವರದಿಗಾರನೆಂದು ತಾನು ಹೇಳಿಕೊಂಡಿದ್ದ ಪವನ್, ಈ ವಿಷಯ ತಿಳಿದು, ಇತರೆ ಆರೋಪಿಗಳೊಂದಿಗೆ ಯುವಕನ ಮನೆಗೆ ಹೋಗಿದ್ದ.
ಅವರು, “ಬಾಲ್ಯವಿವಾಹ ಕಾನೂನುಬಾಹಿರ. ಮನೆಯವರು ಕೋರ್ಟ್-ಕಚೇರಿಯಲ್ಲಿ ಓಡಾಡಬೇಕಾಗುತ್ತದೆ. ನಾವು ಮಧ್ಯವರ್ತಿಗಳಾಗಿ ಕೆಲಸ ಮಾಡಿ ಪ್ರಕರಣವನ್ನು ರಾಜಿ ಮಾಡಿಸುತ್ತೇವೆ” ಎಂದು ಯುವಕನಿಂದ ಹಣ ಪಡೆದಿದ್ದರು.
ಇನ್ನು, ಎರಡನೇ ಬಾರಿ ಮತ್ತೆ ಹಣ ಕೇಳಲು ಯುವಕನ ಮನೆಗೆ ತೆರಳಿದಾಗ, ಯುವಕ ಈ ಕುರಿತು ಬಾಲಕಿಯೊಂದಿಗೆ ಮಾತನಾಡಿದ್ದ. ಅಲ್ಲಿ ಬಾಲಕಿ ನೇರವಾಗಿ ಆರೋಪಿಗಳನ್ನು ಪ್ರಶ್ನಿಸಿದ್ದರು. ಇದರಿಂದ ಕೋಪಗೊಂಡ ಆರೋಪಿಗಳು ಯುವಕನಿಗೆ ಬೆದರಿಕೆ ಹಾಕಿ, “ಹಣ ಕೊಟ್ಟರೆ ಮಾತ್ರ ಪ್ರಕರಣ ಮುಗಿಯುತ್ತದೆ, ಇಲ್ಲದಿದ್ದರೆ ಎಲ್ಲರಿಗೂ ತೊಂದರೆ ಆಗುತ್ತದೆ” ಎಂದಿದ್ದರು.  ಬಾಲಕಿಯು ಈ ವಿಚಾರವನ್ನು ತನ್ನ ನ್ಯಾಯಾಲಯದ ಹೇಳಿಕೆಯಲ್ಲಿ ದಾಖಲಿಸಿದ್ದರಿಂದ, ಆರೋಪಿಗಳ ಬಂಧನಕ್ಕೆ ಆಧಾರ ನೀಡಲಾಯಿತು ಎಂದು ಪೊಲೀಸರು ತಿಳಿಸಿದರು.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 hour ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 hour ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 hour ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

2 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

2 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

22 hours ago