Crime

ಬಾಲ್ಯ ವಿವಾಹ ಆದವರಿಗೆ ಬೆದರಿಕೆ; ಯೂಟ್ಯೂಬ್ ಚಾನಲ್ ವರದಿಗಾರ ಅಂದರ್!

ಹಾವೇರಿ ಜಿಲ್ಲೆಯಲ್ಲಿ 2024ರಲ್ಲಿ ದಾಖಲಾಗಿದ್ದ ಪೋಕ್ಸೊ (ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆಯ ಪ್ರಕರಣದಲ್ಲಿ ಹಣಕ್ಕಾಗಿ ಬೇಡಿಕೆ ಹಾಕಿ ಸಂತ್ರಸ್ತೆಗೆ ಬೆದರಿಕೆ ಒಡ್ಡಿದ ಆರೋಪದಡಿ, ಹಿರೇಕೆರೂರು ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಅವರು ನೀಡಿದ ಮಾಹಿತಿಯ ಪ್ರಕಾರ, ಪ್ರಕರಣದಲ್ಲಿ ತ್ವರಿತಗತಿ ನ್ಯಾಯಾಲಯ ಇಬ್ಬರ ವಿರುದ್ಧ ಜಾಮೀನುರಹಿತ ವಾರೆಂಟ್ ಹೊರಡಿಸಿತ್ತು. ವಾರೆಂಟ್ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಪವನ್ ಮತ್ತು ಮಹದೇವಪ್ಪ ಮಾಳಮ್ಮನವರನ್ನು ಬಂಧಿಸಿದ್ದಾರೆ. ಎರಡೂ ಆರೋಪಿಗಳನ್ನು ಈಗ ನ್ಯಾಯಾಂಗ ಬಂಧನಕ್ಕೆ  ಒಪ್ಪಿಸಲಾಗಿದೆ.

2024ರಲ್ಲಿ ದಾಖಲಾಗಿದ್ದ ಪ್ರಕರಣದ ಹಿನ್ನೆಲೆ                                                                                                            ಹಿರೇಕೆರೂರು ಠಾಣೆಯಲ್ಲಿ ಬಾಲಕಿಯ ಮಾವ (ತಾಯಿಯ ತಮ್ಮ) ನೀಡಿದ ದೂರಿನ ಮೇರೆಗೆ 2024ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಾಲಕಿಯನ್ನು ಬಾಲ್ಯವಿವಾಹ ಮಾಡಿಕೊಂಡ ಯುವಕ, ಅವರ ಕುಟುಂಬದವರು ಹಾಗೂ ಬಾಲಕಿಯ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿತ್ತು. ಎಲ್ಲಾ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.                                                                                                                                                                                      164ರಡಿ ಬಾಲಕಿಯ ಹೇಳಿಕೆ: ಬಾಲಕಿಯು ಇತ್ತೀಚೆಗೆ ನ್ಯಾಯಾಲಯದಲ್ಲಿ ತನ್ನ ಹೇಳಿಕೆ (ಸಿಆರ್‌ಪಿಸಿ 164ರಡಿ) ದಾಖಲಿಸಿದ್ದಾರೆ. ಈ ಹೇಳಿಕೆಯ ಆಧಾರದ ಮೇಲೆ ನ್ಯಾಯಾಲಯವು ವಾರೆಂಟ್ ಜಾರಿಗೊಳಿಸಿತ್ತು. ಅಲ್ಲದೆ, ಪ್ರಕರಣದಲ್ಲಿ ಆರೋಪಿಯಲ್ಲೊಬ್ಬ ಮಹಿಳೆ ಸ್ವಯಂ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಪ್ರಕರಣ ಮುಚ್ಚಲು ಹಣದ ಬೇಡಿಕೆ:  ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಬಾಲ್ಯವಿವಾಹದ ಪ್ರಕರಣ ಕುರಿತು “ಯೂಟ್ಯೂಬ್ ಚಾನೆಲ್” ವರದಿಗಾರನೆಂದು ತಾನು ಹೇಳಿಕೊಂಡಿದ್ದ ಪವನ್, ಈ ವಿಷಯ ತಿಳಿದು, ಇತರೆ ಆರೋಪಿಗಳೊಂದಿಗೆ ಯುವಕನ ಮನೆಗೆ ಹೋಗಿದ್ದ.
ಅವರು, “ಬಾಲ್ಯವಿವಾಹ ಕಾನೂನುಬಾಹಿರ. ಮನೆಯವರು ಕೋರ್ಟ್-ಕಚೇರಿಯಲ್ಲಿ ಓಡಾಡಬೇಕಾಗುತ್ತದೆ. ನಾವು ಮಧ್ಯವರ್ತಿಗಳಾಗಿ ಕೆಲಸ ಮಾಡಿ ಪ್ರಕರಣವನ್ನು ರಾಜಿ ಮಾಡಿಸುತ್ತೇವೆ” ಎಂದು ಯುವಕನಿಂದ ಹಣ ಪಡೆದಿದ್ದರು.
ಇನ್ನು, ಎರಡನೇ ಬಾರಿ ಮತ್ತೆ ಹಣ ಕೇಳಲು ಯುವಕನ ಮನೆಗೆ ತೆರಳಿದಾಗ, ಯುವಕ ಈ ಕುರಿತು ಬಾಲಕಿಯೊಂದಿಗೆ ಮಾತನಾಡಿದ್ದ. ಅಲ್ಲಿ ಬಾಲಕಿ ನೇರವಾಗಿ ಆರೋಪಿಗಳನ್ನು ಪ್ರಶ್ನಿಸಿದ್ದರು. ಇದರಿಂದ ಕೋಪಗೊಂಡ ಆರೋಪಿಗಳು ಯುವಕನಿಗೆ ಬೆದರಿಕೆ ಹಾಕಿ, “ಹಣ ಕೊಟ್ಟರೆ ಮಾತ್ರ ಪ್ರಕರಣ ಮುಗಿಯುತ್ತದೆ, ಇಲ್ಲದಿದ್ದರೆ ಎಲ್ಲರಿಗೂ ತೊಂದರೆ ಆಗುತ್ತದೆ” ಎಂದಿದ್ದರು.  ಬಾಲಕಿಯು ಈ ವಿಚಾರವನ್ನು ತನ್ನ ನ್ಯಾಯಾಲಯದ ಹೇಳಿಕೆಯಲ್ಲಿ ದಾಖಲಿಸಿದ್ದರಿಂದ, ಆರೋಪಿಗಳ ಬಂಧನಕ್ಕೆ ಆಧಾರ ನೀಡಲಾಯಿತು ಎಂದು ಪೊಲೀಸರು ತಿಳಿಸಿದರು.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

21 minutes ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

7 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

7 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago