ಹಾವೇರಿ ಜಿಲ್ಲೆಯಲ್ಲಿ 2024ರಲ್ಲಿ ದಾಖಲಾಗಿದ್ದ ಪೋಕ್ಸೊ (ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆಯ ಪ್ರಕರಣದಲ್ಲಿ ಹಣಕ್ಕಾಗಿ ಬೇಡಿಕೆ ಹಾಕಿ ಸಂತ್ರಸ್ತೆಗೆ ಬೆದರಿಕೆ ಒಡ್ಡಿದ ಆರೋಪದಡಿ, ಹಿರೇಕೆರೂರು ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಅವರು ನೀಡಿದ ಮಾಹಿತಿಯ ಪ್ರಕಾರ, ಪ್ರಕರಣದಲ್ಲಿ ತ್ವರಿತಗತಿ ನ್ಯಾಯಾಲಯ ಇಬ್ಬರ ವಿರುದ್ಧ ಜಾಮೀನುರಹಿತ ವಾರೆಂಟ್ ಹೊರಡಿಸಿತ್ತು. ವಾರೆಂಟ್ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಪವನ್ ಮತ್ತು ಮಹದೇವಪ್ಪ ಮಾಳಮ್ಮನವರನ್ನು ಬಂಧಿಸಿದ್ದಾರೆ. ಎರಡೂ ಆರೋಪಿಗಳನ್ನು ಈಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
2024ರಲ್ಲಿ ದಾಖಲಾಗಿದ್ದ ಪ್ರಕರಣದ ಹಿನ್ನೆಲೆ ಹಿರೇಕೆರೂರು ಠಾಣೆಯಲ್ಲಿ ಬಾಲಕಿಯ ಮಾವ (ತಾಯಿಯ ತಮ್ಮ) ನೀಡಿದ ದೂರಿನ ಮೇರೆಗೆ 2024ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಾಲಕಿಯನ್ನು ಬಾಲ್ಯವಿವಾಹ ಮಾಡಿಕೊಂಡ ಯುವಕ, ಅವರ ಕುಟುಂಬದವರು ಹಾಗೂ ಬಾಲಕಿಯ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿತ್ತು. ಎಲ್ಲಾ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. 164ರಡಿ ಬಾಲಕಿಯ ಹೇಳಿಕೆ: ಬಾಲಕಿಯು ಇತ್ತೀಚೆಗೆ ನ್ಯಾಯಾಲಯದಲ್ಲಿ ತನ್ನ ಹೇಳಿಕೆ (ಸಿಆರ್ಪಿಸಿ 164ರಡಿ) ದಾಖಲಿಸಿದ್ದಾರೆ. ಈ ಹೇಳಿಕೆಯ ಆಧಾರದ ಮೇಲೆ ನ್ಯಾಯಾಲಯವು ವಾರೆಂಟ್ ಜಾರಿಗೊಳಿಸಿತ್ತು. ಅಲ್ಲದೆ, ಪ್ರಕರಣದಲ್ಲಿ ಆರೋಪಿಯಲ್ಲೊಬ್ಬ ಮಹಿಳೆ ಸ್ವಯಂ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಪ್ರಕರಣ ಮುಚ್ಚಲು ಹಣದ ಬೇಡಿಕೆ: ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಬಾಲ್ಯವಿವಾಹದ ಪ್ರಕರಣ ಕುರಿತು “ಯೂಟ್ಯೂಬ್ ಚಾನೆಲ್” ವರದಿಗಾರನೆಂದು ತಾನು ಹೇಳಿಕೊಂಡಿದ್ದ ಪವನ್, ಈ ವಿಷಯ ತಿಳಿದು, ಇತರೆ ಆರೋಪಿಗಳೊಂದಿಗೆ ಯುವಕನ ಮನೆಗೆ ಹೋಗಿದ್ದ.
ಅವರು, “ಬಾಲ್ಯವಿವಾಹ ಕಾನೂನುಬಾಹಿರ. ಮನೆಯವರು ಕೋರ್ಟ್-ಕಚೇರಿಯಲ್ಲಿ ಓಡಾಡಬೇಕಾಗುತ್ತದೆ. ನಾವು ಮಧ್ಯವರ್ತಿಗಳಾಗಿ ಕೆಲಸ ಮಾಡಿ ಪ್ರಕರಣವನ್ನು ರಾಜಿ ಮಾಡಿಸುತ್ತೇವೆ” ಎಂದು ಯುವಕನಿಂದ ಹಣ ಪಡೆದಿದ್ದರು.
ಇನ್ನು, ಎರಡನೇ ಬಾರಿ ಮತ್ತೆ ಹಣ ಕೇಳಲು ಯುವಕನ ಮನೆಗೆ ತೆರಳಿದಾಗ, ಯುವಕ ಈ ಕುರಿತು ಬಾಲಕಿಯೊಂದಿಗೆ ಮಾತನಾಡಿದ್ದ. ಅಲ್ಲಿ ಬಾಲಕಿ ನೇರವಾಗಿ ಆರೋಪಿಗಳನ್ನು ಪ್ರಶ್ನಿಸಿದ್ದರು. ಇದರಿಂದ ಕೋಪಗೊಂಡ ಆರೋಪಿಗಳು ಯುವಕನಿಗೆ ಬೆದರಿಕೆ ಹಾಕಿ, “ಹಣ ಕೊಟ್ಟರೆ ಮಾತ್ರ ಪ್ರಕರಣ ಮುಗಿಯುತ್ತದೆ, ಇಲ್ಲದಿದ್ದರೆ ಎಲ್ಲರಿಗೂ ತೊಂದರೆ ಆಗುತ್ತದೆ” ಎಂದಿದ್ದರು. ಬಾಲಕಿಯು ಈ ವಿಚಾರವನ್ನು ತನ್ನ ನ್ಯಾಯಾಲಯದ ಹೇಳಿಕೆಯಲ್ಲಿ ದಾಖಲಿಸಿದ್ದರಿಂದ, ಆರೋಪಿಗಳ ಬಂಧನಕ್ಕೆ ಆಧಾರ ನೀಡಲಾಯಿತು ಎಂದು ಪೊಲೀಸರು ತಿಳಿಸಿದರು.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…