ಹಾವೇರಿ ಜಿಲ್ಲೆಯಲ್ಲಿ 2024ರಲ್ಲಿ ದಾಖಲಾಗಿದ್ದ ಪೋಕ್ಸೊ (ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆಯ ಪ್ರಕರಣದಲ್ಲಿ ಹಣಕ್ಕಾಗಿ ಬೇಡಿಕೆ ಹಾಕಿ ಸಂತ್ರಸ್ತೆಗೆ ಬೆದರಿಕೆ ಒಡ್ಡಿದ ಆರೋಪದಡಿ, ಹಿರೇಕೆರೂರು ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಅವರು ನೀಡಿದ ಮಾಹಿತಿಯ ಪ್ರಕಾರ, ಪ್ರಕರಣದಲ್ಲಿ ತ್ವರಿತಗತಿ ನ್ಯಾಯಾಲಯ ಇಬ್ಬರ ವಿರುದ್ಧ ಜಾಮೀನುರಹಿತ ವಾರೆಂಟ್ ಹೊರಡಿಸಿತ್ತು. ವಾರೆಂಟ್ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಪವನ್ ಮತ್ತು ಮಹದೇವಪ್ಪ ಮಾಳಮ್ಮನವರನ್ನು ಬಂಧಿಸಿದ್ದಾರೆ. ಎರಡೂ ಆರೋಪಿಗಳನ್ನು ಈಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
2024ರಲ್ಲಿ ದಾಖಲಾಗಿದ್ದ ಪ್ರಕರಣದ ಹಿನ್ನೆಲೆ ಹಿರೇಕೆರೂರು ಠಾಣೆಯಲ್ಲಿ ಬಾಲಕಿಯ ಮಾವ (ತಾಯಿಯ ತಮ್ಮ) ನೀಡಿದ ದೂರಿನ ಮೇರೆಗೆ 2024ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಾಲಕಿಯನ್ನು ಬಾಲ್ಯವಿವಾಹ ಮಾಡಿಕೊಂಡ ಯುವಕ, ಅವರ ಕುಟುಂಬದವರು ಹಾಗೂ ಬಾಲಕಿಯ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿತ್ತು. ಎಲ್ಲಾ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. 164ರಡಿ ಬಾಲಕಿಯ ಹೇಳಿಕೆ: ಬಾಲಕಿಯು ಇತ್ತೀಚೆಗೆ ನ್ಯಾಯಾಲಯದಲ್ಲಿ ತನ್ನ ಹೇಳಿಕೆ (ಸಿಆರ್ಪಿಸಿ 164ರಡಿ) ದಾಖಲಿಸಿದ್ದಾರೆ. ಈ ಹೇಳಿಕೆಯ ಆಧಾರದ ಮೇಲೆ ನ್ಯಾಯಾಲಯವು ವಾರೆಂಟ್ ಜಾರಿಗೊಳಿಸಿತ್ತು. ಅಲ್ಲದೆ, ಪ್ರಕರಣದಲ್ಲಿ ಆರೋಪಿಯಲ್ಲೊಬ್ಬ ಮಹಿಳೆ ಸ್ವಯಂ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಪ್ರಕರಣ ಮುಚ್ಚಲು ಹಣದ ಬೇಡಿಕೆ: ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಬಾಲ್ಯವಿವಾಹದ ಪ್ರಕರಣ ಕುರಿತು “ಯೂಟ್ಯೂಬ್ ಚಾನೆಲ್” ವರದಿಗಾರನೆಂದು ತಾನು ಹೇಳಿಕೊಂಡಿದ್ದ ಪವನ್, ಈ ವಿಷಯ ತಿಳಿದು, ಇತರೆ ಆರೋಪಿಗಳೊಂದಿಗೆ ಯುವಕನ ಮನೆಗೆ ಹೋಗಿದ್ದ.
ಅವರು, “ಬಾಲ್ಯವಿವಾಹ ಕಾನೂನುಬಾಹಿರ. ಮನೆಯವರು ಕೋರ್ಟ್-ಕಚೇರಿಯಲ್ಲಿ ಓಡಾಡಬೇಕಾಗುತ್ತದೆ. ನಾವು ಮಧ್ಯವರ್ತಿಗಳಾಗಿ ಕೆಲಸ ಮಾಡಿ ಪ್ರಕರಣವನ್ನು ರಾಜಿ ಮಾಡಿಸುತ್ತೇವೆ” ಎಂದು ಯುವಕನಿಂದ ಹಣ ಪಡೆದಿದ್ದರು.
ಇನ್ನು, ಎರಡನೇ ಬಾರಿ ಮತ್ತೆ ಹಣ ಕೇಳಲು ಯುವಕನ ಮನೆಗೆ ತೆರಳಿದಾಗ, ಯುವಕ ಈ ಕುರಿತು ಬಾಲಕಿಯೊಂದಿಗೆ ಮಾತನಾಡಿದ್ದ. ಅಲ್ಲಿ ಬಾಲಕಿ ನೇರವಾಗಿ ಆರೋಪಿಗಳನ್ನು ಪ್ರಶ್ನಿಸಿದ್ದರು. ಇದರಿಂದ ಕೋಪಗೊಂಡ ಆರೋಪಿಗಳು ಯುವಕನಿಗೆ ಬೆದರಿಕೆ ಹಾಕಿ, “ಹಣ ಕೊಟ್ಟರೆ ಮಾತ್ರ ಪ್ರಕರಣ ಮುಗಿಯುತ್ತದೆ, ಇಲ್ಲದಿದ್ದರೆ ಎಲ್ಲರಿಗೂ ತೊಂದರೆ ಆಗುತ್ತದೆ” ಎಂದಿದ್ದರು. ಬಾಲಕಿಯು ಈ ವಿಚಾರವನ್ನು ತನ್ನ ನ್ಯಾಯಾಲಯದ ಹೇಳಿಕೆಯಲ್ಲಿ ದಾಖಲಿಸಿದ್ದರಿಂದ, ಆರೋಪಿಗಳ ಬಂಧನಕ್ಕೆ ಆಧಾರ ನೀಡಲಾಯಿತು ಎಂದು ಪೊಲೀಸರು ತಿಳಿಸಿದರು.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…